ಶೀಘ್ರದಲ್ಲೇ ಜಿ.ಪಂ. & ತಾ.ಪಂ. ಚುನಾವಣೆ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿಳಂಬವಾಗುವುದಿಲ್ಲ: ಚುನಾವಣಾ ಆಯೋಗ

ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ.

Representational image

ಬೆಂಗಳೂರು: ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ.

ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಆತಂಕಗೊಂಡಿವೆ.

https://imasdk.googleapis.com/js/core/bridge3.452.0_en.html#goog_84632924

ಮೇ ತಿಂಗಳ ಅಂತ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರವಧಿ ಮುಗಿಯಲಿದೆ, ಅಂತಿಮ ಗಡುವಿನೊಳಗೆ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ, ಒಂದು ವೇಳೆ ಕೋವಿಡ್ ಸಮಸ್ಯೆ ಹೆಚ್ಚಾದರೆ ಜೂನ್ ತಿಂಗಳಿನಲ್ಲಿ ಚುನಾವಣೆ ನಡೆಯುತ್ತದೆ, ಅದಕ್ಕೂ ಮೀರಿ ವಿಳಂಬವಾಗುವುದಿಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ. ಬಿ ಬಸವರಾಜು ಹೇಳಿದ್ದಾರೆ.

ಚುನಾವಣೆ ನಡೆಸಲು ನಮಗೆ ಸಂವಿಧಾನಬದ್ದವಾದ ಆದೇಶವಿದೆ, ಕಳೆದ ಬಾರಿ, ಗ್ರಾಮ ಪಂಚಾಯತ್ ಚುನಾವಣೆ ವಿಳಂಬವಾದ ಕಾರಣ, ಕೆಲವರು ಎಸ್‌ಇಸಿಗೆ ಚುನಾವಣೆಗಳನ್ನು ನಡೆಸುವಂತೆ ಒತ್ತಾಯಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದರು, ಅದಾದ ನಂತರ ಚುನಾವಣೆ ನಡೆಯಿತು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಯಾವುದೇ ವಿಳಂಬದ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿ ಮತ್ತು ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

2013 ಮತ್ತು 2018 ರ ನಡುವೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಕಳೆದ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿತು. ಈ ಬಾರಿ ಬಿಜೆಪಿ ಈ ಚುನಾವಣೆಗಳಲ್ಲಿ ಉತ್ತಮ ಸಾಧನೆ ತೋರಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಎಂಎಲ್ಸಿ ರವಿ ಕುಮಾರ್ ಹೇಳಿದ್ದಾರೆ, “ನಾವು ಚುನಾವಣೆಗೆ ತಯಾರಾಗುತ್ತಿದ್ದೇವೆ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮೇ ತಿಂಗಳಲ್ಲಿ  ಚುನಾವಣೆ ನಡೆಸಲು ಸಾಧ್ಯವಾಗುತ್ತದೆಯೇ ಎಂಬ ಸಾಮಾನ್ಯ ಆತಂಕವಿದೆ ಎಂದು ಹೇಳಿದ್ದಾರೆ.

ಚುನಾವಣೆಗೆ ನಾವು ಸಿದ್ಧರಿದ್ದೇವೆ.  ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯ ಸವಾಲನ್ನು ಪರಿಗಣಿಸಿ, ಆಯೋಗ ದಿನಾಂಕಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಪಕ್ಷಗಳು ಮತ್ತು ಸಂಬಂಧಪಟ್ಟ ಪ್ರತಿಯೊಬ್ಬರನ್ನು ಸಂಪರ್ಕಿಸಬೇಕು ಎಂದು ನಾನು ಭಾವಿಸುತ್ತೇನೆ. ಪರಿಸ್ಥಿತಿ ಸಮಂಜಸವಾಗಿ ಸುರಕ್ಷಿತವಾದ ನಂತರ, ನಾವು ಮತದಾನವನ್ನು ನಡೆಸಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕೋವಿಡ್ ಪರಿಸ್ಥಿತಿ ಹದಗೆಡುತ್ತಿರುವಾಗ ನಾವು ರಾಜ್ಯಾದ್ಯಂತ  ಚುನಾವಣೆಗಳನ್ನು ಹೇಗೆ ನಡೆಸಬಹುದು? ಚುನಾವಣಾ ಆಯೋಗ ಸಾರ್ವಜನಿಕ ಆರೋಗ್ಯ ಪರಿಸ್ಥಿತಿ ಸುಧಾರಿಸುವವರೆಗೆ ಚುನಾವಣೆಯನ್ನು ಮುಂದೂಡಬೇಕಾಗಬಹುದು ಎಂದು ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *