ಲಾಕ್ ಡೌನ್ ಇಲ್ಲ, ಮನೆಯಿಂದ ಹೊರಬರಬೇಡಿ… ಮೋದಿ ಮಾತು

ದೇಶ ಕರೋನಾ ಸಂಕಷ್ಟದಲ್ಲಿದ್ದು ಲಾಕ್ ಡೌನ್ ಸಾಧ್ಯತೆ ಇಲ್ಲ ಆದರೆ ಕೆಲಸವಿಲ್ಲದೆ ಮನೆಯಿಂದ ಹೊರಬೀಳದೆ ಲಾಕ್ ಡೌನ್ ಅನಿವಾರ್ಯತೆ ತಪ್ಪಿಸಿ ಎಂದು ಪ್ರಧಾನಿ ನರೆಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.

ದೇಶದ ಕರೋನಾ ಸಂಕಷ್ಟದಲ್ಲಿ ವೈದ್ಯರು, ಕರೋನಾ ಸೇನಾನಿಗಳು ಅವಿರತ ಶ್ರಮ ಪಟ್ಟಿದ್ದಾರೆ. ಜನರ ಸಹಕಾರ ದಿಂದ ಕರೋನಾ ವಿರುದ್ಧ ಗೆಲುವು ಸಾಧಿಸಲು ಸಾಧ್ಯವಾಗಿದೆ. ಈಗಾಗಲೇ 12 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಎಲ್ಲರಿಗೂ ಲಸಿಕೆ ಲಭ್ಯವಿದೆ. ಯುವಕರು,ಮಾಧ್ಯಮಗಳು ಕರೋನಾ ವಿರುದ್ಧ ಹೋರಾಟ, ಜನಜಾಗೃತಿಗೆ ಶ್ರಮಿಸಬೇಕು ಎಂದು ವಿನಂತಿಸಿದರು.

ಕೇಂದ್ರದ ಕೊರೋನಾ ಲಸಿಕೆ ನೀತಿ ಟೊಳ್ಳು: ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ…

Mamata_PM_Modi1

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, “ಕೇಂದ್ರ ಸರ್ಕಾರವು 2021ರ ಏಪ್ರಿಲ್ 19 ರಂದು ಹೆಚ್ಚು ವಿಳಂಬವಾದ ಸಾರ್ವತ್ರಿಕ ಲಸಿಕೆ ನೀತಿಯನ್ನು ಘೋಷಿಸಿದೆ ಎಂಬ ಬಗ್ಗೆ ನನಗೆ ಮಾಹಿತಿ ಬಂತು. ಇದು ಟೊಳ್ಳಾಗಿ ಕಾಣುತ್ತದೆ, ವಾಸ್ತ ವಾಂಶ ಇಲ್ಲದ ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿರುವುದು ವಿಷಾದನೀಯ” ಎಂದು ಉಲ್ಲೇಖಿಸಿದ್ದಾರೆ.

ಇದಕ್ಕು ಮುನ್ನ ಫೆಬ್ರವರಿ 24, 2021ರಂದು ಪ್ರಧಾನಿಗೆ ಬರೆದ ಪತ್ರದಲ್ಲಿ, ಪಶ್ಚಿಮ ಬಂಗಾಳ ಲಸಿಕೆಗಳನ್ನು ನೇರವಾಗಿ ತನ್ನ ಸಂಪನ್ಮೂಲಗಳೊಂದಿಗೆ ಖರೀದಿಸಲು ಅವಕಾಶ ನೀಡುವಂತೆ ಮತ್ತು ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡುವಂತೆ ಕೋರಿರುವುದನ್ನು ದೀದಿ ನೆನಪಿಸಿದ್ದಾರೆ.

ಈ ಹಿಂದೆ ಬರೆದ ಪತ್ರಕ್ಕೆ ನಿಮ್ಮ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಗ ಕೋವಿಡ್ ಎರಡನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೇಂದ್ರ ಖಾಲಿ ವಾಕ್ಚಾತುರ್ಯದಲ್ಲಿ ಪಾಲ್ಗೊಳ್ಳುವ ಮೂಲಕ  ದೇಶದ ಜನರಿಗೆ ಲಸಿಕೆ ಲಭ್ಯವಾಗಿಸುವ ಜವಾಬ್ದಾರಿಯಿಂದ ದೂರ ಸರಿಯುತ್ತದೆ” ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆಯಷ್ಟೇ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಆದೇಶಿಸಿದ್ದು, ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ನೇರವಾಗಿ ಉತ್ಪಾದಕರಿಂದ ಲಸಿಕೆ ಖರೀದಿಸಿ ಸಂಗ್ರಹಿಸಲು ಅನುವು ಮಾಡಿಕೊಟ್ಚಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *