Covid p-2- ಸಾರಿಗೆ ಮುಷ್ಕರ ಅಂತ್ಯ, ಬೇಡಕಣಿ ವಿ.ಎಸ್.ಎಸ್. ಸಿ.ಇ.ಓ. ವಿರುದ್ಧ ದೂರು, ಕರೋನಾ ನಿಯಮ ಪಾಲನೆಗೆ ಸೆಕ್ಟರ್ ತಂಡಗಳ ರಚನೆ

ವಿಧಾನಸಭಾ ಅಧ್ಯಕ್ಷರಿಗೆ ಮನವಿ- ಸಿದ್ದಾಪುರ ತಾಲೂಕಿನ ಬೇಡ್ಕಣಿ ಸೇವಾ ಸಹಕಾರಿ ಸಂಘದಲ್ಲಿ ಕರ್ತವ್ಯವನ್ನ ನಿರ್ವಹಿಸುತ್ತಿರುವ ಮುಖ್ಯ ಕಾರ್ಯನಿರ್ವಾಹಕರು ಸಂಘದ ಸದಸ್ಯರ ಮನೆಗೆ ಸಾಲ ವಸೂಲಾತಿಗೆ ಹೋದಾಗ ಅವರಿಗೆ ಅವಾಚ್ಯ ಶಬ್ದ ದಿಂದ ಬೈದು,ಬೂಟು ಕಾಲಿನಲ್ಲಿ ಮನೆಯ ಒಳಗೆ ನುಗ್ಗಿ ಅವಮಾನ ಮಾಡಿದ್ದಲ್ಲದೆ ನಿಂದನೆ ಮಾಡಿರುತ್ತಾರೆ ಇದೇ ರೀತಿ ಕೆಲವೊಂದು ಸಾಲಗಾರರ ಮನೆಗೆ ಹೋಗುವುದು ನಿಂದಿಸುವುದು ಅವಮಾನ ಮಾಡಿರುವ ಬಗ್ಗೆ ಹಲವರು ಸಂಫ ದಲ್ಲಿ ದೂರು ಮಾಡಿರುತ್ತಾರೆ ಅವರಿಗೆ ಕುನೂನೂ ಕ್ರಮ ಕೈ ಗೊಂಡು ಅವರನ್ನು ವರ್ಗಾವಣೆ ಮಾಡಬೇಕು ಎಂದು ಸೇವಾ ಸಹಕಾರಿ ಸಂಘದ ಸದಸ್ಯರು ಹಾಗೂ ಬೇಡ್ಕಣಿ ಗ್ರಾಮಸ್ಥರು ಬುಧವಾರ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಶಾಸಕರ ಆಪ್ತ ಸಲಹೆಗಾರರ ಮೂಲಕ ವಿಧಾನಸಭಾಧ್ಯಕ್ಷ ರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.

ಸಿದ್ದಾಪುರ; ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಮಾವಳಿಗಳ ಮೇಲ್ವಿಚಾರಣೆಗೆ 10 ಸೆಕ್ಟರ್ ತಂಡಗಳನ್ನು ರಚಿಸಲಾಗಿದೆ., ಪಟ್ಟಣ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಈ ತಂಡವನ್ನು ರಚಿಸಲಾಗಿದೆ.
ಎಂದು ತಹಸೀಲ್ದಾರ್ ಪ್ರಸಾದ್ ತಿಳಿಸಿದರು ಅವರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ತಾಲೂಕಿನಲ್ಲಿರುವ ದಿನಸಿ ವ್ಯಾಪರಸ್ಥರು, ಚರ್ಚ್ ಗಳು, ಮಸೀ ದಿಗಳು ದೇವಸ್ಥಾನ ಕಮಿಟಿಯವರು. ಆಟೋ ಚಾಲಕರು, ಮೀನುಮಾರುಕಟ್ಟೆ ಚಿಕನ್ ಮಟನ್, ಬೀದಿ ಬದಿವ್ಯಪಾರಸ್ಥರುಗಳ ಸಭೆ ನಡೆಸಿ ಕೋವಿಡ್ ನಿಯಮಗಳು ಅವುಗಳ ಪಾಲನೆ ಕುರಿತು ಮಾಹಿತಿ ನೀಡಿದರು.

ದೇವಸ್ಥಾನ ಮಸೀದಿ ಚರ್ಚ್ ಗಳಲ್ಲಿ ಪೂಜೆ ಮಾಡುವವರು ಮತ್ತು ಜೊತೆಗಾರರು ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ. ಪಾಸ್ ಇಲ್ಲದೆ ಯಾರು ಅನವಶ್ಯಕವಾಗಿ ಓಡಾಡುವಂತಿಲ್ಲ. ಹೋಟೆಲ್ನಲ್ಲಿ ಪಾರ್ಸೆಲ್ ಮಾತ್ರ ಕೊಡಲು ಅವಕಾಶವಿರುತ್ತದೆ. ಶನಿವಾರ ಮತ್ತು ಭಾನುವಾರ 6 ರಿಂದ 10 ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು, ಮೀನು, ಮಟನ್, ಚಿಕನ್ ಅಂಗಡಿಗಳು ಮಾತ್ರ ತೆಗೆದಿರಬಹುದು. ಉಳಿದಂತೆ ಎಲ್ಲ ಅಂಗಡಿಗಳು ಎರಡು ದಿನ ಸಂಪೂರ್ಣ ಬಂದ್ ಆಗಿರಬೇಕು. ರಾತ್ರಿ 9 ನಂತರ ಯಾವುದೇ ವಾಹನಗಳ ಓಡಾಡಕ್ಕೆ ಅವಕಾಶವಿರುವುದಿಲ್ಲಾ.
ಜ್ವರ, ನೆಗಡಿ, ಮುಂತಾದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು.
ಈಗ ಮಾತಿನಲ್ಲಿ ಹೇಳುತ್ತಿದ್ದೇವೆ ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ನಂತರ ನಿರ್ಧಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಕೊರೋನಾ ನಿಯಂತ್ರಣಕ್ಕೆ ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ. ಈ ಹಿಂದೆ ಕೊರೋನಾ ಕಾಲದಲ್ಲಿ ಸಿದ್ದಾಪುರ ಜನತೆ ಸಹಕರಿಸಿದ್ದಾರೆ ಈಗ ನೀವು ನಮಗೆ ಸಹಕಾರ ನೀಡುವುದರೊಂದಿಗೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿ ಎಂದರು.
ಪಿಎಸ್ಐ ಮಹಂತಪ್ಪ ಕುಂಬಾರ್ ಮಾತನಾಡಿ ನಿಯಮಪಾಲನೆ ಯಾಗದಿದ್ದರೆ ಕಾನೂನಿನಲ್ಲಿರುವ ಎಲ್ಲಾ ಸೆಕ್ಷನ್ನಿನ ಅಡಿಯಲ್ಲಿ ಕ್ರಮ ಹೇರಲಾಗುವುದು. ಕರ್ಪ್ಯೂ ವೇಳೆಯಲ್ಲಿ ಯಾರಾದರೂ ಅಂಗಡಿಗಳನ್ನು ಓಪನ್ ಮಾಡಿದರೆ ಅವರ ಲೈಸನ್ಸ್ ರದ್ದುಪಡಿಸಲಾಗುವುದು. ಈ ಕಾನೂನಿಗೆ ಸಹಕಾರ ನೀಡುವುದರ ಜೊತೆಗೆ ಕರೋನಾ ನಿಯಮಗಳ ನಿಯಮಾವಳಿಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು ಎಂದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ನಂದನ್ ಬೋರ್ಕರ್ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಕುಮಾರ್ ನಾಯ್ಕ , ಉಷಾ ಪಾವಸ್ಕರ್ ಉಪಸ್ಥಿತರಿದ್ದರು.

15 ದಿನಗಳ ನಂತರ ಸಾರಿಗೆ ನೌಕರರ ಮುಷ್ಕರ ಅಂತ್ಯ, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

KSRTC Bus Stand

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇಂದು ಸಂಜೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವ ಎಂದು ಘೋಷಿಸಿದರು.

https://imasdk.googleapis.com/js/core/bridge3.452.0_en.html#goog_936582983

ಸಾರಿಗೆ ನೌಕರರ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಮೂರ್ತಿಗಳ ಸೂಚನೆ ನೀಡಿದ್ದಾರೆ. ಅವರ ಸೂಚನೆಯನ್ನು ನಾವು ಗೌರವಿಸುತ್ತೇವೆ. ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಇಂದು ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗುತ್ತಿದೆ. ಎರಡನೇ ಪಾಳಿಯಲ್ಲಿರುವವರು ಕರ್ತವ್ಯಕ್ಕೆ ಹಾಜರಾಗಲಿದ್ದು, ನಾಳೆಯಿಂದ ಎಲ್ಲರೂ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದರು.

ಮುಷ್ಕರದ ವೇಳೆ 2169 ನೌಕರರನ್ನು ವಜಾ ಮಾಡಿದೆ. 2941 ನೌಕರರನ್ನು ಅಮಾನತು ಮಾಡಿದೆ. 7646 ನೌಕರರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. 8 ಸಾವಿರ ನೌಕರರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಎಲ್ಲಾ ನಿರ್ಧಾರಗಳನ್ನು ವಾಪಸ್ ಪಡೆಯಬೇಕು. ನೌಕರರ ವಿರುದ್ಧ ಕೈಗೊಂಡ ಕ್ರಮಗಳನ್ನು ಕೈಬಿಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *