ಕಳೆದ ವರ್ಷದಂತೆ ವಲಸಿಗರ ಸಮಸ್ಯೆಗಳು ಪುನಾರಾವರ್ತನೆಯಾಗುವುದಿಲ್ಲ: ಶಿವರಾಮ್ ಹೆಬ್ಬಾರ್

ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

Representational image

ಬೆಂಗಳೂರು: ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಸರ್ಕಾರ ಹೊರಡಿಸಿರುವ ಮಾರ್ಗಗಸೂಚಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ವಾಪಾಸ್ ತಮ್ಮ ತವರಿಗೆ ಮರಳುವ  ಸಾಧ್ಯತೆಯಿಲ್ಲ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಇಲಾಖೆವತಿಯಿಂದ ಐಡಿ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಲಾಕ್ ಡೌನ್ ಹೇರಿದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಂದ ವಲಸೆ ಕಾರ್ಮಿಕರು ವಾಪಸ್ ತೆರಳಿದ್ದರು. ಇವರಲ್ಲಿ ಹೆಚ್ಚಿನ ಪ್ರಮಾಣದವರು ಉತ್ತರ ಕರ್ನಾಟಕದವರಾಗಿದ್ದಾರೆ.

ಅದರಲ್ಲೂ ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ ಮತ್ತು ತಮಿಳುನಾಡಿನವರಾಗಿದ್ದರು, ಇವರಲ್ಲಿ ಕೆಲವರು ಮತದಾನ ಮಾಡಲು ತೆರಳಿದ್ದವರು ಇನ್ನೂ ವಾಪಸ್ ಆಗಿಲ್ಲ.

ಮತ್ತೊಂದು ಲಾಕ್ ಡೌನ್ ಭಯದಿಂದಾಗಿ ರಾಜ್ಯದಲ್ಲಿ ವಾಸವಿರುವ ವಲಸೆ ಕಾರ್ಮಿಕರು ತಮ್ಮ ತವರಿಗೆ ತೆರಳಲು ಯೋಜಿಸುತ್ತಿದ್ದರು. 3,5 ಲಕ್ಷಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರು ರಾಜ್ಯದಲ್ಲಿದ್ದು, ಅವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರಾಗಿದ್ದಾರೆ. ಶನಿವಾರ ಮತ್ತು ಭಾನುವಾರ ಹೊರತು ಪಡಿಸದರೇ ಉಳಿದಂತೆ ನಿರ್ಮಾಣ ಕಾರ್ಯಕ್ಕೆ ಯಾವುದೇ
ಅಡ್ಡಿಯಿಲ್ಲ.

ಕಳೆದ ವರ್ಷದ ಅನುಭವದಿಂದ ಎಚ್ಚೆತ್ತಿದ್ದು, ಈ ಬಾರಿ ಕಾರ್ಮಿಕರು ತಮ್ಮ ತವರಿಗೆ ತೆರಳುವುದಿಲ್ಲ ಎಂದು ಸತಿವರು ಭರವಸೆ ನೀಡಿದ್ದಾರೆ.ಇಲಾಖೆವತಿಯಿಂದ ಬಿಲ್ಡರ್ಸ್ ಗಳ ಸಭೆ ಕರೆದಿದ್ದು, ಅಧಿಕಾರಿಗಳು ಗುರುತಿನ ಚೀಟಿ ನೀಡಲಿದ್ದಾರೆ, ಅದನ್ನು ಬಿಲ್ಡರ್ಸ್ ಗಳು ಕಾರ್ಮಿಕರಿಗೆ ನೀಡಬೇಕಾಗಿದೆ, ಕಾರ್ಮಿಕರು  ಪ್ರಯಾಣಿಸುವಾಗ ಈ ಗುರುತಿನ ಚೀಟಿ
ತೋರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಸತಿ ಯೋಜನೆಗಳು ಮೊದಲಿನಂತೆ ನಡೆಯುತ್ತಿಲ್ಲ, ಹೊಸ ಪ್ರಾಜೆಕ್ಟ್ ಗಳು ಆರಂಭವಾಗುತ್ತಿಲ್ಲ, ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ತವರಿಗೆ ಮರಳಿದ್ದ ಹಲವು ಕಾರ್ಮಿಕರು ವಾಪಸ್ ಆಗದ ಕಾರಣ ಕಾರ್ಮಿಕರ ಕೊರತೆ ಎದುರಾಗಿದೆ ಎಂದು ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಕ್ರೆಡೈ), ಬೆಂಗಳೂರಿನ ಅಧ್ಯಕ್ಷ ಸುರೇಶ್ ಹರಿ ಹೇಳಿದ್ದಾರೆ.

ಈಗ ಸರ್ಕಾರ ಕೇವಲ 5 ದಿನ ಮಾತ್ರ ಕಾಮಗಾರಿಗೆ ಅವಕಾಶ ನೀಡಿರುವ ಕಾರಣ ಪ್ರಾಜೆಕ್ಟ್ ಗಳು ಮತ್ತಷ್ಟು ವಿಳಂಬವಾಗಲಿವೆ. ಕಾರ್ಮಿಕರಿಗೆ ಅವರು ಕೆಲಸ ಮಾಡಿದ ದಿನಗಳಲ್ಲಿ ಸಂಬಳ ನೀಡಲಾಗುತ್ತದೆ, ಅಂದರೆ ಅವರಿಗೆ ವಾರದಲ್ಲಿ ಎರಡು ದಿನಗಳವರೆಗೆ ವೇತನ ನೀಡಲಾಗುವುದಿಲ್ಲ. ಇದರಿಂದ ಕಾರ್ಮಿಕರು ತವರಿಗೆ ಮರಳಲು ಪ್ರೇರೇಪಿಸಿದಂತಾಗುತ್ತದೆ ಎಂದು ಸುರೇಶ್ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *