ಕಾರವಾರದಲ್ಲಿ ಮದುವೆಗೆ ಹೋದ ಅತಿಥಿಗಳು ಊಟ ಮಾಡದೆ ವಾಪಸ್!

ಸರ್ಕಾರದ ಕೊರೋನಾ ಮಾರ್ಗಸೂಚಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

Vacant marriage hall

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ಕೋವಿಡ್ ಮಾರ್ಗಸೂಚಿಯಂತೆ ಕಲ್ಯಾಣ ಮಂಟಪದಲ್ಲಿ ಮದುವೆ ದಿನ ಮಾಸ್ಕ್ ಧರಿಸಿ ಬಹುತೇಕರು ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯವರು ಮದುವೆ ಕಾರ್ಯಕ್ರಮ ನಡೆಸುತ್ತಿದ್ದರು. ಮಾಂಗಲ್ಯ ಧಾರಣೆ ಆಗಿ ಆರತಕ್ಷತೆ ನಡೆಯುತ್ತಿತ್ತು, ಆರತಕ್ಷತೆಗೆ ಸಾಕಷ್ಟು ಅತಿಥಿಗಳು ಬಂದಿದ್ದರು.

ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ 50 ಮಂದಿ ಮಾತ್ರ ಮದುವೆ ಕಾರ್ಯಕ್ರಮದಲ್ಲಿ ಸೇರಬೇಕು. ಅದಕ್ಕಿಂತ ಹೆಚ್ಚು ಜನರು ಇದ್ದ ಕಾರಣ ಕಲ್ಯಾಣ ಮಂಟಪದೊಳಗೆ ಪ್ರವೇಶಿಸಿದ ಪೊಲೀಸರು ಮತ್ತು ಅಧಿಕಾರಿಗಳು ಅತಿಥಿಗಳನ್ನು ಹೊರಗೆ ಕಳುಹಿಸಿದರು. ಕಕ್ಕಾಬಿಕ್ಕಿಯಾದ ಅತಿಥಿಗಳಲ್ಲಿ ಕೆಲವರು ಉಡುಗೊರೆ ನೀಡದೆ, ಊಟವನ್ನೂ ಮಾಡದೆ ಭಯದಿಂದ ಸಭಾಂಗಣದ ಹೊರಗೆ ಹೋದ ಪ್ರಸಂಗ ನಡೆಯಿತು.

ಸರ್ಕಾರದ ಮಾರ್ಗಸೂಚಿಗೂ ಮೊದಲೇ ಮದುವೆ ಆಮಂತ್ರಣ ಪತ್ರಿಕೆ ಹಂಚಿದ ಕಾರಣ ಅತಿಥಿಗಳು ಬಂದಿದ್ದಾರೆ. ಉಳಿದ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸುತ್ತಿದ್ದೇವೆ ಎಂದು ಮದುವೆ ಮನೆಯವರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದರಿಂದ ಸ್ವಲ್ಪ ಹೊತ್ತಿನ ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಉಡುಗೊರೆ ನೀಡಿ ಊಟ ಮಾಡಿ ಹೋಗಲು ಅವಕಾಶ ನೀಡಿದರು. ಆದರೆ ಕೆಲವರಿಗೆ ಮದುವೆ ಊಟ ಮಿಸ್ಸಾಗಿದ್ದಂತೂ ಹೌದು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *