ಇಂದಿನ ಮಹತ್ವದ ಸುದ್ದಿಗಳು- important news of the day! ಸರ್ಕಾರಿ ನೌಕರರು ಓದಲೇಬೇಕಾದ ವಿಶೇಶ ಸುದ್ದಿ

ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕೋವಿಡ್ ಸಾಂಕ್ರಾಮಿಕ ನಿರ್ವಹಣೆಗೆ ಬಳಸಿಕೊಳ್ಳುವ ಮಹತ್ವದ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದ್ದು ಸಚಿವರು, ಶಾಸಕರು, ವಿ.ಪ.ಸದಸ್ಯರು ಸೇರಿದಂತೆ ಸರ್ಕಾರದ ಲಾಭದಾಯಕ ಹುದ್ದೆಯಲ್ಲಿರುವ ಎಲ್ಲರೂ ತಮ್ಮ ಒಂದು ತಿಂಗಳ ವೇತನ ಬಿಟ್ಟುಕೊಡಲು ಸರ್ಕಾರ ಮನವಿ ಮಾಡಿಕೊಂಡಿದೆ ಎನ್ನಲಾಗಿದೆ.

ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಿದ್ದು ಇದರೊಂದಿಗೆ ನಾಳೆ ಏ.27 ರಿಂದ ಮೇ.10 ನೇ ತಾರೀಖಿನ ವರೆಗೆ ಜನತಾಕರ್ಫ್ಯೂ ಘೋಶಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎನ್ನಲಾಗಿದೆ.

ದಾರುಣ ಘಟನೆ: ಕೋವಿಡ್ ಸೋಂಕಿತ ಪತ್ನಿಯ ಕತ್ತು ಸೀಳಿದ ರೈಲ್ವೆ ಉದ್ಯೋಗಿ, ನಂತರ ತಾನೂ ಆತ್ಮಹತ್ಯೆಗೆ ಶರಣು!

ಪೂರ್ವ ಸೆಂಟ್ರಲ್ ರೈಲ್ವೆ(ಇಸಿಆರ್) ಉದ್ಯೋಗಿಯೊಬ್ಬರು ತಮ್ಮ ಕೋವಿಡ್ ಸೋಂಕಿತ ಹೆಂಡತಿಯನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ.

For representational purposes

ಪಾಟ್ನಾ: ಪೂರ್ವ ಸೆಂಟ್ರಲ್ ರೈಲ್ವೆ(ಇಸಿಆರ್) ಉದ್ಯೋಗಿಯೊಬ್ಬರು ತಮ್ಮ ಕೋವಿಡ್ ಸೋಂಕಿತ ಹೆಂಡತಿಯನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ. 

ಉದ್ಯೋಗಿ ಅತುಲ್ ಲಾಲ್, ಮೊದಲು ತಮ್ಮ ಪತ್ನಿ ತುಲಿಕಾ ಕುಮಾರಿಯವರ ಕತ್ತು ಸೀಳಿ ನಂತರ ಮನೆಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು ಈ ಹೃದಯ ಕದಡುವ ಘಟನೆ ಚಿತ್ರಗುಪ್ತನಗರದಲ್ಲಿ ನಡೆದಿದೆ.

ಕೆಲ ಕುಟುಂಬ ಸಮಸ್ಯೆಗಳ ಬಗ್ಗೆ ಗಂಡ ಮತ್ತು ಹೆಂಡತಿ ಜಗಳವಾಡಿದ್ದರು. ಮಹಿಳೆಗೆ ಕೋವಿಡ್ ಸೋಂಕು ತಗುಲಿರುವುದರಿಂದ ತಮಗೂ ಬರಬಹುದು ಎಂಬ ಆತಂಕದಿಂದ ನೆರೆಹೊರೆಯವರು ಸಮಾಧಾನಪಡಿಸಲು ಪ್ರಯತ್ನಿಸಲಿಲ್ಲ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಜಗಳದಿಂದ ಕೋಪಗೊಂಡಿದ್ದ ಅತುಲ್ ಲಾಲ್ ತನ್ನ ಹೆಂಡತಿಯ ಗಂಟಲನ್ನು ಬ್ಲೇಡ್‌ನಿಂದ ಸೀಳಿದ್ದಾನೆ. ಇದನ್ನು ಕಂಡ ಸುಮಾರು 6 ಮತ್ತು 9 ವರ್ಷ ವಯಸ್ಸಿನ ಮಕ್ಕಳು ಕೂಗಾಡಿದ್ದು ಇದರಿಂದ ಹೆದರಿದ ಅತುಲ್ ಲಾಲ್ ಐದನೇ ಮಹಡಿಯಿಂದ ಹಾರಿ  ಸಾವನ್ನಪ್ಪಿದರು. ದಂಪತಿಗಳು ಅರಾ ಜಿಲ್ಲೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *