

ನಾಳೆ ರಾತ್ರಿಯಿಂದಲೇ ಮೇ 10 ರ ವರೆಗೆ 14 ದಿವಸಗಳ ಜನತಾ ಕರ್ಫ್ಯೂ ವಿಧಿಸಿರುವ ಸರ್ಕಾರ ನಾಳೆಯಿಂದ ಪ್ರತಿದಿನ ಬೆಳಿಗ್ಗೆ 6 ರಿಂದ 10 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ವಾರಾಂತ್ಯದ ಕರ್ಫ್ಯೂ ಹೊರತುಪಡಿಸಿ ಉಳಿದ ದಿವಸಗಳಲ್ಲೂ ಖರೀದಿ, ಅಂಗಡಿ ಮು 0ಗ್ಗಟ್ಟು ತೆರೆಯಲು ಅವಕಾಶ ನೀಡದ ಉತ್ತರ ಕನ್ನಡ ಜಿಲ್ಲಾ ಆಡಳಿತ ಅಘೋಶಿತ ಕರ್ಫ್ಯೂ ನಡೆಸಿತ್ತು! ಇಂದು ಕೂಡಾ ಎಂದಿನಂತೆ ಅವಶ್ಯ ವಸ್ತು ಖರೀದಿಯಲ್ಲಿ ತೊಡಗಿದ್ದ ಜನ ವೈಯಕ್ತಿಕ ಅಂತರ ಕಾಪಾಡಲಿಲ್ಲ ಎಂದು ಪೊಲೀಸರು ಬೆತ್ತ ಬೀಸಿದರು.

ಸಿದ್ದಾಪುರ ನಗರದ ಕಿರಿದಾದ ತರಕಾರಿ ಮಾರುಕಟ್ಟೆಯಲ್ಲಿ ವೈಯಕ್ತಿಕ ಅಂತರ ಕಾಪಾಡುವುದು, ಕೋವಿಡ್ ನಿಯಮ ಪಾಲಿಸುವುದು ಕಷ್ಟ ಎಂದು ತಿಳಿದ ತಾಲೂಕಾ ಆಡಳಿತ ತರಕಾರಿ ಮಾರುಕಟ್ಟೆಯನ್ನು ನೆಹರೂ ಮೈದಾನಕ್ಕೆ ಸ್ಥಳಾಂತರಿಸಿದೆ. ಇಂದಿನಿಂ ದಲೇ ಈ ತರಕಾರಿ ಮಾರುಕಟ್ಟೆಯಲ್ಲಿ ಕೋವಿಡ್ ನಿಯಮಾನುಸಾರ ಬೆಳಿಗ್ಗೆ 6 ರಿಂದ 10 ಗಂಟೆಯವೆರೆಗೆ ತರಕಾರಿ ಹಣ್ಣು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
