ಮೈಸೂರಿನ ಈ ದಲಿತ ಕಾಲೋನಿ ಮಾದರಿ! ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ!

ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ.

Headmen of Sathyagala village reviewing Covid norms

ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮೈಸೂರು: ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ.

ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬಾರದು ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕೂಡಿ ಮಾಡಿಸಿಕೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲೆಯ ಸತ್ಯಗಾಲ ಗ್ರಾಮದ ದಲಿತ ಮುಖಂಡ ಎಲ್ಲರಿಗೂ ಜಾಗೃತಿ ಮೂಡಿಸಿದ್ದಾರೆ.

ಇದರ ಜೊತೆಗೆ ಬೆಂಗಳೂರು ಅಥವಾ ಮೈಸೂರಿನಿಂದ ಬರುವ ಯಾರನ್ನು ಗ್ರಾಮಕ್ಕೆ ಬಿಡದಿರಲು ನಿರ್ಧರಿಸಿದ್ದಾರೆ. ಸ್ಥಳೀಯ ಛತ್ರದಲ್ಲಿ ಯುವಕರ ಗುಂಪೊಂದು ಆರ್ ಟಿ ಪಿಸಿಆರ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ವೈದ್ಯಕೀಯ ತುರ್ತು ಅವಶ್ಯಕತೆಯಿದ್ದರೇ ಮಾತ್ರ ಗ್ರಾಮದಿಂದ ಹೊರಗೆ ಹೋಗಬೇಕು, ಅನಾವಶ್ಯಕವಾಗಿ ತೆರಳಬಾರದು ಎಂದು ಕಠಿಣ ನಿಯಮಕ್ಕೆ ಆದೇಶಿಸಿದ್ದಾರೆ. 

ಪಿಗ್ಮಿ ಸಂಗ್ರಹಗಾರರು ಸೇರಿದಂತೆ ಯಾವುದೇ ಕಂಪನಿಯ ಏಜೆಂಟ್ ಗಳು ಗ್ರಾಮಕ್ಕೆ ಬರದಂತೆ ತಡೆ ಒಡ್ಡಲಾಗಿದೆ.ಒಂದು ವೇಳೆ ನಿಯಮ ಮೀರಿ ಮಾಸ್ಕ್ ಧರಿಸದೇ ಬಂದರೇ  ದಂಡ ವಿಧಿಸಲು ತೀರ್ಮಾನಿಸಿದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪಂಚಾಯತಿ ನಿರ್ದೇಶನ ನೀಡಿದೆ.

ಹಲವರು ಲಸಿಕೆ ತೆಗೆದುಕೊಳ್ಳಲು ಬಯಸಿದ್ದಾರೆ, ಆದರೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಸಮರ್ಕವಾಗಿ ಕೆಲಸ ಮಾಡುವ ವೈದ್ಯರಿಲ್ಲ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ, ಲಸಿಕೆ ಪಡೆದ ನಂತರ ಏನಾದರೂ ಅಡ್ಡ ಪರಿಣಾಮ ಉಂಟಾದರೇ ನಾವು ಚಿಕಿತ್ಸೆಗೆ ಎಲ್ಲಿಗೆ ಹೋಗಬೇಕು ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *