ಮೈಸೂರಿನ ಈ ದಲಿತ ಕಾಲೋನಿ ಮಾದರಿ! ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ!

ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ.

Headmen of Sathyagala village reviewing Covid norms

ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮೈಸೂರು: ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ.

ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬಾರದು ಹಾಗೂ ಆರ್ ಟಿ ಪಿಸಿಆರ್ ಪರೀಕ್ಷೆ ಕೂಡಿ ಮಾಡಿಸಿಕೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲೆಯ ಸತ್ಯಗಾಲ ಗ್ರಾಮದ ದಲಿತ ಮುಖಂಡ ಎಲ್ಲರಿಗೂ ಜಾಗೃತಿ ಮೂಡಿಸಿದ್ದಾರೆ.

ಇದರ ಜೊತೆಗೆ ಬೆಂಗಳೂರು ಅಥವಾ ಮೈಸೂರಿನಿಂದ ಬರುವ ಯಾರನ್ನು ಗ್ರಾಮಕ್ಕೆ ಬಿಡದಿರಲು ನಿರ್ಧರಿಸಿದ್ದಾರೆ. ಸ್ಥಳೀಯ ಛತ್ರದಲ್ಲಿ ಯುವಕರ ಗುಂಪೊಂದು ಆರ್ ಟಿ ಪಿಸಿಆರ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ವೈದ್ಯಕೀಯ ತುರ್ತು ಅವಶ್ಯಕತೆಯಿದ್ದರೇ ಮಾತ್ರ ಗ್ರಾಮದಿಂದ ಹೊರಗೆ ಹೋಗಬೇಕು, ಅನಾವಶ್ಯಕವಾಗಿ ತೆರಳಬಾರದು ಎಂದು ಕಠಿಣ ನಿಯಮಕ್ಕೆ ಆದೇಶಿಸಿದ್ದಾರೆ. 

ಪಿಗ್ಮಿ ಸಂಗ್ರಹಗಾರರು ಸೇರಿದಂತೆ ಯಾವುದೇ ಕಂಪನಿಯ ಏಜೆಂಟ್ ಗಳು ಗ್ರಾಮಕ್ಕೆ ಬರದಂತೆ ತಡೆ ಒಡ್ಡಲಾಗಿದೆ.ಒಂದು ವೇಳೆ ನಿಯಮ ಮೀರಿ ಮಾಸ್ಕ್ ಧರಿಸದೇ ಬಂದರೇ  ದಂಡ ವಿಧಿಸಲು ತೀರ್ಮಾನಿಸಿದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪಂಚಾಯತಿ ನಿರ್ದೇಶನ ನೀಡಿದೆ.

ಹಲವರು ಲಸಿಕೆ ತೆಗೆದುಕೊಳ್ಳಲು ಬಯಸಿದ್ದಾರೆ, ಆದರೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಸಮರ್ಕವಾಗಿ ಕೆಲಸ ಮಾಡುವ ವೈದ್ಯರಿಲ್ಲ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ, ಲಸಿಕೆ ಪಡೆದ ನಂತರ ಏನಾದರೂ ಅಡ್ಡ ಪರಿಣಾಮ ಉಂಟಾದರೇ ನಾವು ಚಿಕಿತ್ಸೆಗೆ ಎಲ್ಲಿಗೆ ಹೋಗಬೇಕು ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *