ಬಂಗಾಳಕ್ಕೆ ಟಿಎಂಸಿ, ತ.ನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಗೆಲುವು; ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರದತ್ತ

ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

Five state Election results-2021: BJP set to lose in Bengal, TN, Kerala; retain Assam

ಬೆಳಗಾವಿ ಲೋಕಸಭೆ ಉಪ ಚುನಾವಣೆ: 62 ಸುತ್ತು ಮತ ಎಣಿಕೆ ಪೂರ್ಣ, ಸತೀಶ್ ಜಾರಕಿಹೊಳಿ ಮುನ್ನಡೆ

ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

Sathish_Jarkiholi1

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ, 3 ಲಕ್ಷ 50 ಸಾವಿರದ 104 ಮತಗಳನ್ನು ಪಡೆದುಕೊಂಡರೆ, ಸತೀಶ್ ಜಾರಕಿಹೊಳಿ
3 ಲಕ್ಷ 58 ಸಾವಿರದ 914 ಮತಗಳನ್ನು ಪಡೆದುಕೊಂಡಿದ್ದಾರೆ.

ಮುಂಜಾನೆಯಿಂದ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಪರಸ್ಪರ ಮೂರು ಸಾವಿರದಿಂದ 10 ಸಾವಿರ ಅಂತರದ ಮತಗಳ ಪೈಪೋಟಿ ಮುಂದುವರೆದಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.ಸಂಜೆ ಆರು ಗಂಟೆಯ ಹೊತ್ತಿಗೆ ಪೂರ್ಣ ಪ್ರಮಾಣದ ಫಲಿತಾಂಶ ಲಭ್ಯವಾಗುವ ಸಾಧ್ಯತೆಯಿದೆ.

ನವದೆಹಲಿ: ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

ಅದರಲ್ಲೂ ಎಲ್ಲರ ಚಿತ್ತ ಇದ್ದದ್ದು ಪಶ್ಚಿಮ ಬಂಗಾಳದ ಮೇಲೆ. ಈ ರಾಜ್ಯದಲ್ಲಿ ತೀವ್ರ ಅಬ್ಬರದ ಪ್ರಚಾರ ನಡೆಸಿದ್ದ ಬಿಜೆಪಿ ಪ್ರಾರಂಭಿಕ ಹಂತದ ಮತ ಎಣಿಕೆ ವೇಳೆ ಟಿಎಂಸಿ ಗೆ ಭರ್ಜರಿ ಪೈಪೋಟಿಯನ್ನೇ ನೀಡಿತ್ತಾದರೂ ಕ್ರಮೇಣ ತನ್ನ ಮುನ್ನಡೆಯ ಅಂತರವನ್ನು ಕಳೆದುಕೊಳ್ಳಲಾರಂಭಿಸಿತು. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮ್ಯಾಜಿಕ್ ನಂಬರ್ ಸಂಖ್ಯೆಗೆ ಅಗತ್ಯವಿರುವಷ್ಟು ಮುನ್ನಡೆ ಸಾಧಿಸಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದೆ. ಬಿಜೆಪಿಗೆ ಅಧಿಕಾರ ಹಿಡಿಯುವ ಕನಸು ನನಸಾಗಿಲ್ಲವಾದರೂ ನೆಲೆಯೇ ಇಲ್ಲದ ರಾಜ್ಯದಲ್ಲಿ ಈ ಬಾರಿ  ಟಿಎಂಸಿಗೆ ಪ್ರಬಲ ಪೈಪೋಟಿ ನೀಡಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ಇನ್ನು ಯಥಾ ಪ್ರಕಾರ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವಕ್ಕೆ ಈ ಬಾರಿ ಮತದಾರ ಮಣೆ ಹಾಕಿಲ್ಲ. ಆದರೆ ಆಡಳಿತಾರೂಢ ಎಐಎಡಿಎಂಕೆಗೆ ಮುಖಭಂಗವಾಗಿದ್ದು, ತಮಿಳುನಾಡಿನಲ್ಲಿ ಡಿಎಂಕೆ ಆಡಳಿತ ಪ್ರಾರಂಭವಾಗಲಿದೆ. 
 
ಕೇರಳದಲ್ಲಿ ಆಡಳಿತಾರೂಢ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್ 140 ಕ್ಷೇತ್ರಗಳ ಪೈಕಿ 89 ರಲ್ಲಿ ಮುನ್ನಡೆಯಲ್ಲಿದ್ದು ಬಹುಮತ ಪಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. ವಿಪಕ್ಷ ಯುಡಿಎಫ್ 45 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. 

ಅಸ್ಸಾಂ ನಲ್ಲಿ 126 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ 79 ರಲ್ಲಿ ಮುನ್ನಡೆಯಲ್ಲಿದ್ದರೆ, ಯುಪಿಎ 46 ರಲ್ಲಿ ಇತರರು ಒಂದರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಎನ್ ಡಿಎ ಅಧಿಕಾರ ಹಿಡಿಯುವುದು ಸ್ಪಷ್ಟವಾದಂತಿದೆ.  

ಇನ್ನು 30 ಕ್ಷೇತ್ರಗಳಿರುವ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಇತ್ತೀಚಿನ ವರದಿಯ ಪ್ರಕಾರ ಎನ್ ಆರ್ ಸಿ ಮೈತ್ರಿಕೂಟ 11 ರಲ್ಲಿ, ಯುಪಿಎ 6 ರಲ್ಲಿ ಮುನ್ನಡೆಯಲ್ಲಿವೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *