ಬಂಗಾಳಕ್ಕೆ ಟಿಎಂಸಿ, ತ.ನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಗೆಲುವು; ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರದತ್ತ

ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

Five state Election results-2021: BJP set to lose in Bengal, TN, Kerala; retain Assam

ಬೆಳಗಾವಿ ಲೋಕಸಭೆ ಉಪ ಚುನಾವಣೆ: 62 ಸುತ್ತು ಮತ ಎಣಿಕೆ ಪೂರ್ಣ, ಸತೀಶ್ ಜಾರಕಿಹೊಳಿ ಮುನ್ನಡೆ

ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

Sathish_Jarkiholi1

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ, 3 ಲಕ್ಷ 50 ಸಾವಿರದ 104 ಮತಗಳನ್ನು ಪಡೆದುಕೊಂಡರೆ, ಸತೀಶ್ ಜಾರಕಿಹೊಳಿ
3 ಲಕ್ಷ 58 ಸಾವಿರದ 914 ಮತಗಳನ್ನು ಪಡೆದುಕೊಂಡಿದ್ದಾರೆ.

ಮುಂಜಾನೆಯಿಂದ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಪರಸ್ಪರ ಮೂರು ಸಾವಿರದಿಂದ 10 ಸಾವಿರ ಅಂತರದ ಮತಗಳ ಪೈಪೋಟಿ ಮುಂದುವರೆದಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.ಸಂಜೆ ಆರು ಗಂಟೆಯ ಹೊತ್ತಿಗೆ ಪೂರ್ಣ ಪ್ರಮಾಣದ ಫಲಿತಾಂಶ ಲಭ್ಯವಾಗುವ ಸಾಧ್ಯತೆಯಿದೆ.

ನವದೆಹಲಿ: ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

ಅದರಲ್ಲೂ ಎಲ್ಲರ ಚಿತ್ತ ಇದ್ದದ್ದು ಪಶ್ಚಿಮ ಬಂಗಾಳದ ಮೇಲೆ. ಈ ರಾಜ್ಯದಲ್ಲಿ ತೀವ್ರ ಅಬ್ಬರದ ಪ್ರಚಾರ ನಡೆಸಿದ್ದ ಬಿಜೆಪಿ ಪ್ರಾರಂಭಿಕ ಹಂತದ ಮತ ಎಣಿಕೆ ವೇಳೆ ಟಿಎಂಸಿ ಗೆ ಭರ್ಜರಿ ಪೈಪೋಟಿಯನ್ನೇ ನೀಡಿತ್ತಾದರೂ ಕ್ರಮೇಣ ತನ್ನ ಮುನ್ನಡೆಯ ಅಂತರವನ್ನು ಕಳೆದುಕೊಳ್ಳಲಾರಂಭಿಸಿತು. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮ್ಯಾಜಿಕ್ ನಂಬರ್ ಸಂಖ್ಯೆಗೆ ಅಗತ್ಯವಿರುವಷ್ಟು ಮುನ್ನಡೆ ಸಾಧಿಸಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದೆ. ಬಿಜೆಪಿಗೆ ಅಧಿಕಾರ ಹಿಡಿಯುವ ಕನಸು ನನಸಾಗಿಲ್ಲವಾದರೂ ನೆಲೆಯೇ ಇಲ್ಲದ ರಾಜ್ಯದಲ್ಲಿ ಈ ಬಾರಿ  ಟಿಎಂಸಿಗೆ ಪ್ರಬಲ ಪೈಪೋಟಿ ನೀಡಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ಇನ್ನು ಯಥಾ ಪ್ರಕಾರ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವಕ್ಕೆ ಈ ಬಾರಿ ಮತದಾರ ಮಣೆ ಹಾಕಿಲ್ಲ. ಆದರೆ ಆಡಳಿತಾರೂಢ ಎಐಎಡಿಎಂಕೆಗೆ ಮುಖಭಂಗವಾಗಿದ್ದು, ತಮಿಳುನಾಡಿನಲ್ಲಿ ಡಿಎಂಕೆ ಆಡಳಿತ ಪ್ರಾರಂಭವಾಗಲಿದೆ. 
 
ಕೇರಳದಲ್ಲಿ ಆಡಳಿತಾರೂಢ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್ 140 ಕ್ಷೇತ್ರಗಳ ಪೈಕಿ 89 ರಲ್ಲಿ ಮುನ್ನಡೆಯಲ್ಲಿದ್ದು ಬಹುಮತ ಪಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. ವಿಪಕ್ಷ ಯುಡಿಎಫ್ 45 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. 

ಅಸ್ಸಾಂ ನಲ್ಲಿ 126 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ 79 ರಲ್ಲಿ ಮುನ್ನಡೆಯಲ್ಲಿದ್ದರೆ, ಯುಪಿಎ 46 ರಲ್ಲಿ ಇತರರು ಒಂದರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಎನ್ ಡಿಎ ಅಧಿಕಾರ ಹಿಡಿಯುವುದು ಸ್ಪಷ್ಟವಾದಂತಿದೆ.  

ಇನ್ನು 30 ಕ್ಷೇತ್ರಗಳಿರುವ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಇತ್ತೀಚಿನ ವರದಿಯ ಪ್ರಕಾರ ಎನ್ ಆರ್ ಸಿ ಮೈತ್ರಿಕೂಟ 11 ರಲ್ಲಿ, ಯುಪಿಎ 6 ರಲ್ಲಿ ಮುನ್ನಡೆಯಲ್ಲಿವೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *