ಬಂಗಾಳಕ್ಕೆ ಟಿಎಂಸಿ, ತ.ನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಗೆಲುವು; ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರದತ್ತ

ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

Five state Election results-2021: BJP set to lose in Bengal, TN, Kerala; retain Assam

ಬೆಳಗಾವಿ ಲೋಕಸಭೆ ಉಪ ಚುನಾವಣೆ: 62 ಸುತ್ತು ಮತ ಎಣಿಕೆ ಪೂರ್ಣ, ಸತೀಶ್ ಜಾರಕಿಹೊಳಿ ಮುನ್ನಡೆ

ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

Sathish_Jarkiholi1

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ, 3 ಲಕ್ಷ 50 ಸಾವಿರದ 104 ಮತಗಳನ್ನು ಪಡೆದುಕೊಂಡರೆ, ಸತೀಶ್ ಜಾರಕಿಹೊಳಿ
3 ಲಕ್ಷ 58 ಸಾವಿರದ 914 ಮತಗಳನ್ನು ಪಡೆದುಕೊಂಡಿದ್ದಾರೆ.

ಮುಂಜಾನೆಯಿಂದ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಪರಸ್ಪರ ಮೂರು ಸಾವಿರದಿಂದ 10 ಸಾವಿರ ಅಂತರದ ಮತಗಳ ಪೈಪೋಟಿ ಮುಂದುವರೆದಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.ಸಂಜೆ ಆರು ಗಂಟೆಯ ಹೊತ್ತಿಗೆ ಪೂರ್ಣ ಪ್ರಮಾಣದ ಫಲಿತಾಂಶ ಲಭ್ಯವಾಗುವ ಸಾಧ್ಯತೆಯಿದೆ.

ನವದೆಹಲಿ: ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

ಅದರಲ್ಲೂ ಎಲ್ಲರ ಚಿತ್ತ ಇದ್ದದ್ದು ಪಶ್ಚಿಮ ಬಂಗಾಳದ ಮೇಲೆ. ಈ ರಾಜ್ಯದಲ್ಲಿ ತೀವ್ರ ಅಬ್ಬರದ ಪ್ರಚಾರ ನಡೆಸಿದ್ದ ಬಿಜೆಪಿ ಪ್ರಾರಂಭಿಕ ಹಂತದ ಮತ ಎಣಿಕೆ ವೇಳೆ ಟಿಎಂಸಿ ಗೆ ಭರ್ಜರಿ ಪೈಪೋಟಿಯನ್ನೇ ನೀಡಿತ್ತಾದರೂ ಕ್ರಮೇಣ ತನ್ನ ಮುನ್ನಡೆಯ ಅಂತರವನ್ನು ಕಳೆದುಕೊಳ್ಳಲಾರಂಭಿಸಿತು. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮ್ಯಾಜಿಕ್ ನಂಬರ್ ಸಂಖ್ಯೆಗೆ ಅಗತ್ಯವಿರುವಷ್ಟು ಮುನ್ನಡೆ ಸಾಧಿಸಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದೆ. ಬಿಜೆಪಿಗೆ ಅಧಿಕಾರ ಹಿಡಿಯುವ ಕನಸು ನನಸಾಗಿಲ್ಲವಾದರೂ ನೆಲೆಯೇ ಇಲ್ಲದ ರಾಜ್ಯದಲ್ಲಿ ಈ ಬಾರಿ  ಟಿಎಂಸಿಗೆ ಪ್ರಬಲ ಪೈಪೋಟಿ ನೀಡಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ಇನ್ನು ಯಥಾ ಪ್ರಕಾರ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವಕ್ಕೆ ಈ ಬಾರಿ ಮತದಾರ ಮಣೆ ಹಾಕಿಲ್ಲ. ಆದರೆ ಆಡಳಿತಾರೂಢ ಎಐಎಡಿಎಂಕೆಗೆ ಮುಖಭಂಗವಾಗಿದ್ದು, ತಮಿಳುನಾಡಿನಲ್ಲಿ ಡಿಎಂಕೆ ಆಡಳಿತ ಪ್ರಾರಂಭವಾಗಲಿದೆ. 
 
ಕೇರಳದಲ್ಲಿ ಆಡಳಿತಾರೂಢ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್ 140 ಕ್ಷೇತ್ರಗಳ ಪೈಕಿ 89 ರಲ್ಲಿ ಮುನ್ನಡೆಯಲ್ಲಿದ್ದು ಬಹುಮತ ಪಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. ವಿಪಕ್ಷ ಯುಡಿಎಫ್ 45 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. 

ಅಸ್ಸಾಂ ನಲ್ಲಿ 126 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ 79 ರಲ್ಲಿ ಮುನ್ನಡೆಯಲ್ಲಿದ್ದರೆ, ಯುಪಿಎ 46 ರಲ್ಲಿ ಇತರರು ಒಂದರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಎನ್ ಡಿಎ ಅಧಿಕಾರ ಹಿಡಿಯುವುದು ಸ್ಪಷ್ಟವಾದಂತಿದೆ.  

ಇನ್ನು 30 ಕ್ಷೇತ್ರಗಳಿರುವ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಇತ್ತೀಚಿನ ವರದಿಯ ಪ್ರಕಾರ ಎನ್ ಆರ್ ಸಿ ಮೈತ್ರಿಕೂಟ 11 ರಲ್ಲಿ, ಯುಪಿಎ 6 ರಲ್ಲಿ ಮುನ್ನಡೆಯಲ್ಲಿವೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *