Kovid19- ಹಳ್ಳಿಗಳಿಗೆ ವ್ಯಾಪಿಸುತ್ತಿರುವ ಕರೋನಾ.. helpline ಬಳಸಿಕೊಳ್ಳಿ & ಮತ್ತೆ ಮಮತಾ tmc ಶಾಸಕಾಂಗ ಪಕ್ಷದ ನಾಯಕಿ

ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಜಿಲ್ಲಾಮಟ್ಟದ ಸಹಾಯವಾಣಿ ಸಂಖ್ಯೆಗಳು

ವಿಪತ್ತು ನಿರ್ವಹಣೆ ಟೋಲ್ ಫ್ರೀ: 1077
ಡಿ.ಸಿ. ಕಚೇರಿ ನಿಯಂತ್ರಣ ಕೊಠಡಿ: 08382 229857
ಜಿಲ್ಲಾ ಕೋವಿಡ್ ವಾರ್ ರೂಂ: 08382 295738
ಜಿಲ್ಲಾ ವಿಪತ್ತು ನಿರ್ವಹಣೆ ವಾಟ್ಸ್‌ಆ್ಯಪ್: 94835 11015

ಕೋವಿಡ್: ತಾಲ್ಲೂಕುಗಳಲ್ಲಿ ಅಹವಾಲು ಸ್ವೀಕಾರ ವ್ಯವಸ್ಥೆ

ಕಾರವಾರ: 08382 226331
ಅಂಕೋಲಾ: 08388 230243
ಕುಮಟಾ: 08386 222054
ಹೊನ್ನಾವರ: 08387 220262
ಭಟ್ಕಳ: 08385 226422
ಶಿರಸಿ: 08384 226383
ಸಿದ್ದಾಪುರ: 08389 230127
ಯಲ್ಲಾಪುರ: 08419 261129
ಮುಂಡಗೋಡ: 08301 222122
ಹಳಿಯಾಳ: 08284 220134
ದಾಂಡೇಲಿ: 08284 295959

ದಿನದಿಂದ ದಿನಕ್ಕೆ ಉತ್ತರ ಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಎರಡನೇ ಅಲೆಯ ಸಿದ್ಧಾಪುರದ 280 ಕೇಸ್ ಗಳೊಂದಿಗೆ ಈವರೆಗೆ ಒಟ್ಟೂ1145 ಪ್ರಕರಣಗಳು ಸಿದ್ಧಾಪುರದಲ್ಲೇ ಇವೆ. ಜಿಲ್ಲೆಯಲ್ಲಿ ಪ್ರತಿದಿನ ಸಾವಿರದ ಸಮೀಪ ಕೋವಿಡ್ ಸೋಂಕಿತರು ಪತ್ತೆಯಾಗುತಿದ್ದಾರೆ. ಸಿದ್ಧಾಪುರ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಅಪಾಯದ ಪ್ರಕರಣಗಳನ್ನು ಹೊರ ತಾಲೂಕು, ಜಿಲ್ಲೆಗಳಿಗೆ ಸಾಗಹಾಕಲಾಗುತ್ತಿದೆ.

ಕಾರವಾರದಲ್ಲಿ ಕೋವಿಡ್ ನಿರ್ವಹಣೆ ಜವಾಬ್ಧಾರಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಳ ಬದಲು ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಲಾಗಿದೆ. ಜಿಲ್ಲಾಡಳಿತ, ಪ್ರಮುಖ ಅಧಿಕಾರಿಗಳನ್ನೇ ಅಸಹಾಯಕರನ್ನಾಗಿ ಮಾಡಿರುವ ಸರ್ಕಾರ ಕಾರವಾರದ ಕೋವಿಡ್ ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಹಾರ, ಊಟೋಪಚಾರವನ್ನೂ ಮಾಡುತ್ತಿಲ್ಲ ಎನ್ನುವ ಗುರುತರ ಆರೋಪಗಳಿವೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಚಲ್ತಾಹೈ ರೀತಿ ವರ್ತಿಸುತಿದ್ದರೆ.. ಇವರನ್ನು ಚುರುಕುಮಾಡಬೇಕಾದ ಕಾಂಗ್ರೆಸ್ ಮುಖಂಡರು ‘ಬಹಳ ಚೆನ್ನಾಗಿದೆ ಎಂದು ಆಡಳಿತಾರೂಢರ ಬೇಜವಾಬ್ಧಾರಿಯನ್ನು ಬೆಂಬಲಿಸುತಿದ್ದಾರೆ. ಉತ್ತರ ಕನ್ನಡ ಮತ್ತೊಂದು ಚಾಮರಾಜನಗರ ಆಗದಿರಲಿ ಎಂದು ಆಶಿಸಬೇಕಷ್ಟೆ.

ಟಿ.ಎಂ.ಸಿ. ಶಾಸಕಾಂಗ ಪಕ್ಷದ ನಾಯಕಿಯಾಗಿ ಮಮತಾ ಅವಿರೋಧ ಆಯ್ಕೆ; ಮೇ 5ಕ್ಕೆ ಸಿಎಂ ಆಗಿ ಪ್ರಮಾಣವಚನ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Mamata Banerjee

ಕೋಲ್ಕತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಇಂದು ನಡೆದ ಟಿಎಂಸಿ ಶಾಸಕಾಂಗ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಅಧಿಕೃತವಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಆ ಮೂಲಕ ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

https://imasdk.googleapis.com/js/core/bridge3.453.0_en.html#goog_1253804149

ಇದೇ ಮೇ 5ರಂದು ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಮಮತಾ ಬ್ಯಾನರ್ಜಿ ಅವರೊಂದಿಗೆ ಯಾರೆಲ್ಲಾ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ತಿಳಿದುಬಂದಿಲ್ಲ. 

ಸಂಜೆ 7 ಗಂಟೆಗೆ ರಾಜ್ಯಪಾಲರ ಭೇಟಿ
ಇನ್ನು ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಮಮತಾ ಬ್ಯಾನರ್ಜಿ ಅವರು ನೂತನ ಸರ್ಕಾರ ರಚನೆ ಮಾಡಲು ಹಕ್ಕು ಮಂಡಿಸಲಿದ್ದಾರೆ. ಇದಕ್ಕಾಗಿ ಇಂದು ಸಂಜೆ 7 ಗಂಟೆಗೆ ಭೇಟಿಗೆ ಅನುಮತಿ ಕೋರಿದ್ದು, ರಾಜ್ಯಪಾಲರ ಕಚೇರಿ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. 

ನಂದಿಗ್ರಾಮ ಫಲಿತಾಂಶ; ಚುನಾವಣಾ ಆಯೋಗದ ವಿರುದ್ಧ ಕೋರ್ಟ್ ಗೆ ಅರ್ಜಿ
ಇದೇ ವೇಳೆ ನಂದಿಗ್ರಾಮ ಕ್ಷೇತ್ರದ ಫಲಿತಾಂಶದ ಕುರಿತು ಚುನಾವಣಾ ಆಯೋಗದ ಕ್ರಮದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಮಮತಾ ಘೋಷಣೆ ಮಾಡಿದ್ದು, ಫಲಿತಾಂಶ ಘೋಷಣೆಯೇ ಗೊಂದಲದಿಂದ ಕೂಡಿದೆ. ಸಾಕಷ್ಟು ಮತಗಳ ಮತಎಣಿಕೆ ಬಾಕಿ ಇರುವಾಗಲೇ ಆಯೋಗ ಫಲಿತಾಂಶ ಘೋಷಣೆ ಮಾಡಿದ್ದು ಅನುಮಾನ ಮೂಡಿಸುತ್ತಿದೆ. ಹೀಗಾಗಿ ಮರು ಮತ ಎಣಿಕೆ ಕುರಿತು ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಟಿಎಂಸಿ ಹೇಳಿದೆ.

ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, ‘ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಫಲಿತಾಂಶ ಘೋಷಣೆಯ ನಂತರ ಕೆಲವು ಕಾಣದ ಕೈಗಳ ಕೈವಾಡ ನಡೆದಿವೆ. ನಾನು ಅದೇನು ಎಂದು ಶೀಘ್ರ ಬಹಿರಂಗಪಡಿಸುತ್ತೇನೆ. ಈ ಸಂಬಂಧ ಮರು ಮತಎಣಿಕೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಹಾಕುತ್ತೇವೆ ಎಂದು ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *