ಸಿದ್ಧಾಪುರ+27, ಒಂದು ಸಾವು, ಒಟ್ಟೂ 295 & ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಿ ನೂತನ ನಿವಾಸಕ್ಕೆ 13 ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯೇ?

: ಪ್ರಿಯಾಂಕಾ ಕಿಡಿ

ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

Narendra Modi-Priyanka Vadra

ಆಯ್.ಸಿ. ನಾಯ್ಕ ಅವರಗುಪ್ಪಾ ಕೋವಿಡ್ ಗೆ ಬಲಿ….. ಸಿದ್ಧಾಪುರದಲ್ಲಿ ಈ ವರ್ಷ ಒಟ್ಟೂ 295 ಜನರು ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 12 ಇದರಲ್ಲಿ ಹೊರ ಜಿಲ್ಲೆಗಳಲ್ಲಿ ಮೃತರಾದವರ ಸಂಖ್ಯೆ ಸೇರಿಲ್ಲ. ಇಂದು 27 ಜನ ಹೊಸಬರಲ್ಲಿ ಕೋವಿಡ್ ದೃಢಪಟ್ಟಿದೆ. ಕಳೆದ ಕೆಲವು ದಿವಸಗಳಿಂದ ಕೋವಿಡ್ ಜೊತೆಗೆ ಇತರ ಕಾಯಿಲೆಗಳಿಂದ ಬಳಲಿದ್ದ ಕೋಲಶಿರ್ಸಿ ಗ್ರಾಮ ಪಂಚಾಯತ್ ನ ಅವರಗುಪ್ಪಾದ ಈಶ್ವರ ಚೌಡಾ ನಾಯ್ಕ ನಿಧನರಾದರು. 56 ವರ್ಷದ ಇವರು ಕೆಲವು ವರ್ಷ ಸಿದ್ಧಾಪುರದಲ್ಲಿ ಇಲೆಕ್ಟ್ರಿಕಲ್ ಅಂಗಡಿ ನಡೆಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು ಸೇರಿದಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ಒಂದು ವಾರದ ಹಿಂದಿನಿಂದ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆದಿದ್ದ ಆಯ್.ಸಿ.ನಾಯ್ಕ ಇಂದು ನಿಧನರಾಗಿದ್ದಾರೆ.

ನವದೆಹಲಿ: ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೆಂಟ್ರಲ್ ವಿಸ್ತಾ ಯೋಜನೆಯಡಿ ಪ್ರಧಾನಿಯವರ ನೂತನ ಗೃಹ ನಿರ್ಮಾಣ ಸೇರಿದಂತೆ ದೇಶದ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿರುವ ಎಲ್ಲ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಕೋವಿಡ್ ನಿಂದ ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ವಿನಿಯೋಗಿಸಬೇಕು. 

https://imasdk.googleapis.com/js/core/bridge3.453.0_en.html#goog_180499094

ಕೋವಿಡ್ ಲಸಿಕೆ ಮತ್ತು ಆಮ್ಲಜನಕದ ಕೊರತೆಯಿಂದ ಜನರು ಸಂಕಷ್ಟ ಎದುರಿಸುತ್ತಿರುವ ವೇಳೆಯಲ್ಲಿ ಇಂಥ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿರುವ ಹಣವನ್ನು ಜನರ ಜೀವ ಉಳಿಸಲು ಬಳಸಬೇಕು’ ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ನಿಂದಾಗಿ ದೇಶದಾದ್ಯಂತ ಏಕಕಾಲಕ್ಕೆ ಆಮ್ಲಜನಕ, ಹಾಸಿಗೆ, ಲಸಿಕೆ, ಔಷಧಗಳ ಕೊರತೆಯಿಂದ ಜನರು ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ನೂತನ ನಿವಾಸಕ್ಕಾಗಿ ವ್ಯಯಿಸುವ 13 ಸಾವಿರ ಕೋಟಿ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸುವಂತೆ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿಯವರ ನೂತನ ನಿವಾಸ ಡಿಸೆಂಬರ್ 2022ರೊಳಗೆ ಪೂರ್ಣಗೊಳ್ಳುವ ಸುದ್ದಿ ಹಾಗೂ ದೇಶದಲ್ಲಿ ಲಸಿಕೆ, ಆಮ್ಲಜನಕ ಕೊರತೆ ಇರುವ ಸುದ್ದಿಗಳ ತುಣುಕುಗಳನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *