ಸಿದ್ಧಾಪುರ+27, ಒಂದು ಸಾವು, ಒಟ್ಟೂ 295 & ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಿ ನೂತನ ನಿವಾಸಕ್ಕೆ 13 ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯೇ?

: ಪ್ರಿಯಾಂಕಾ ಕಿಡಿ

ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

Narendra Modi-Priyanka Vadra

ಆಯ್.ಸಿ. ನಾಯ್ಕ ಅವರಗುಪ್ಪಾ ಕೋವಿಡ್ ಗೆ ಬಲಿ….. ಸಿದ್ಧಾಪುರದಲ್ಲಿ ಈ ವರ್ಷ ಒಟ್ಟೂ 295 ಜನರು ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 12 ಇದರಲ್ಲಿ ಹೊರ ಜಿಲ್ಲೆಗಳಲ್ಲಿ ಮೃತರಾದವರ ಸಂಖ್ಯೆ ಸೇರಿಲ್ಲ. ಇಂದು 27 ಜನ ಹೊಸಬರಲ್ಲಿ ಕೋವಿಡ್ ದೃಢಪಟ್ಟಿದೆ. ಕಳೆದ ಕೆಲವು ದಿವಸಗಳಿಂದ ಕೋವಿಡ್ ಜೊತೆಗೆ ಇತರ ಕಾಯಿಲೆಗಳಿಂದ ಬಳಲಿದ್ದ ಕೋಲಶಿರ್ಸಿ ಗ್ರಾಮ ಪಂಚಾಯತ್ ನ ಅವರಗುಪ್ಪಾದ ಈಶ್ವರ ಚೌಡಾ ನಾಯ್ಕ ನಿಧನರಾದರು. 56 ವರ್ಷದ ಇವರು ಕೆಲವು ವರ್ಷ ಸಿದ್ಧಾಪುರದಲ್ಲಿ ಇಲೆಕ್ಟ್ರಿಕಲ್ ಅಂಗಡಿ ನಡೆಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು ಸೇರಿದಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ಒಂದು ವಾರದ ಹಿಂದಿನಿಂದ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆದಿದ್ದ ಆಯ್.ಸಿ.ನಾಯ್ಕ ಇಂದು ನಿಧನರಾಗಿದ್ದಾರೆ.

ನವದೆಹಲಿ: ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೆಂಟ್ರಲ್ ವಿಸ್ತಾ ಯೋಜನೆಯಡಿ ಪ್ರಧಾನಿಯವರ ನೂತನ ಗೃಹ ನಿರ್ಮಾಣ ಸೇರಿದಂತೆ ದೇಶದ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿರುವ ಎಲ್ಲ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಕೋವಿಡ್ ನಿಂದ ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ವಿನಿಯೋಗಿಸಬೇಕು. 

https://imasdk.googleapis.com/js/core/bridge3.453.0_en.html#goog_180499094

ಕೋವಿಡ್ ಲಸಿಕೆ ಮತ್ತು ಆಮ್ಲಜನಕದ ಕೊರತೆಯಿಂದ ಜನರು ಸಂಕಷ್ಟ ಎದುರಿಸುತ್ತಿರುವ ವೇಳೆಯಲ್ಲಿ ಇಂಥ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿರುವ ಹಣವನ್ನು ಜನರ ಜೀವ ಉಳಿಸಲು ಬಳಸಬೇಕು’ ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ನಿಂದಾಗಿ ದೇಶದಾದ್ಯಂತ ಏಕಕಾಲಕ್ಕೆ ಆಮ್ಲಜನಕ, ಹಾಸಿಗೆ, ಲಸಿಕೆ, ಔಷಧಗಳ ಕೊರತೆಯಿಂದ ಜನರು ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ನೂತನ ನಿವಾಸಕ್ಕಾಗಿ ವ್ಯಯಿಸುವ 13 ಸಾವಿರ ಕೋಟಿ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸುವಂತೆ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿಯವರ ನೂತನ ನಿವಾಸ ಡಿಸೆಂಬರ್ 2022ರೊಳಗೆ ಪೂರ್ಣಗೊಳ್ಳುವ ಸುದ್ದಿ ಹಾಗೂ ದೇಶದಲ್ಲಿ ಲಸಿಕೆ, ಆಮ್ಲಜನಕ ಕೊರತೆ ಇರುವ ಸುದ್ದಿಗಳ ತುಣುಕುಗಳನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *