ಸಿದ್ಧಾಪುರ+27, ಒಂದು ಸಾವು, ಒಟ್ಟೂ 295 & ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಿ ನೂತನ ನಿವಾಸಕ್ಕೆ 13 ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯೇ?

: ಪ್ರಿಯಾಂಕಾ ಕಿಡಿ

ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

Narendra Modi-Priyanka Vadra

ಆಯ್.ಸಿ. ನಾಯ್ಕ ಅವರಗುಪ್ಪಾ ಕೋವಿಡ್ ಗೆ ಬಲಿ….. ಸಿದ್ಧಾಪುರದಲ್ಲಿ ಈ ವರ್ಷ ಒಟ್ಟೂ 295 ಜನರು ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 12 ಇದರಲ್ಲಿ ಹೊರ ಜಿಲ್ಲೆಗಳಲ್ಲಿ ಮೃತರಾದವರ ಸಂಖ್ಯೆ ಸೇರಿಲ್ಲ. ಇಂದು 27 ಜನ ಹೊಸಬರಲ್ಲಿ ಕೋವಿಡ್ ದೃಢಪಟ್ಟಿದೆ. ಕಳೆದ ಕೆಲವು ದಿವಸಗಳಿಂದ ಕೋವಿಡ್ ಜೊತೆಗೆ ಇತರ ಕಾಯಿಲೆಗಳಿಂದ ಬಳಲಿದ್ದ ಕೋಲಶಿರ್ಸಿ ಗ್ರಾಮ ಪಂಚಾಯತ್ ನ ಅವರಗುಪ್ಪಾದ ಈಶ್ವರ ಚೌಡಾ ನಾಯ್ಕ ನಿಧನರಾದರು. 56 ವರ್ಷದ ಇವರು ಕೆಲವು ವರ್ಷ ಸಿದ್ಧಾಪುರದಲ್ಲಿ ಇಲೆಕ್ಟ್ರಿಕಲ್ ಅಂಗಡಿ ನಡೆಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು ಸೇರಿದಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ಒಂದು ವಾರದ ಹಿಂದಿನಿಂದ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆದಿದ್ದ ಆಯ್.ಸಿ.ನಾಯ್ಕ ಇಂದು ನಿಧನರಾಗಿದ್ದಾರೆ.

ನವದೆಹಲಿ: ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೆಂಟ್ರಲ್ ವಿಸ್ತಾ ಯೋಜನೆಯಡಿ ಪ್ರಧಾನಿಯವರ ನೂತನ ಗೃಹ ನಿರ್ಮಾಣ ಸೇರಿದಂತೆ ದೇಶದ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿರುವ ಎಲ್ಲ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಕೋವಿಡ್ ನಿಂದ ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ವಿನಿಯೋಗಿಸಬೇಕು. 

https://imasdk.googleapis.com/js/core/bridge3.453.0_en.html#goog_180499094

ಕೋವಿಡ್ ಲಸಿಕೆ ಮತ್ತು ಆಮ್ಲಜನಕದ ಕೊರತೆಯಿಂದ ಜನರು ಸಂಕಷ್ಟ ಎದುರಿಸುತ್ತಿರುವ ವೇಳೆಯಲ್ಲಿ ಇಂಥ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿರುವ ಹಣವನ್ನು ಜನರ ಜೀವ ಉಳಿಸಲು ಬಳಸಬೇಕು’ ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ನಿಂದಾಗಿ ದೇಶದಾದ್ಯಂತ ಏಕಕಾಲಕ್ಕೆ ಆಮ್ಲಜನಕ, ಹಾಸಿಗೆ, ಲಸಿಕೆ, ಔಷಧಗಳ ಕೊರತೆಯಿಂದ ಜನರು ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ನೂತನ ನಿವಾಸಕ್ಕಾಗಿ ವ್ಯಯಿಸುವ 13 ಸಾವಿರ ಕೋಟಿ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸುವಂತೆ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿಯವರ ನೂತನ ನಿವಾಸ ಡಿಸೆಂಬರ್ 2022ರೊಳಗೆ ಪೂರ್ಣಗೊಳ್ಳುವ ಸುದ್ದಿ ಹಾಗೂ ದೇಶದಲ್ಲಿ ಲಸಿಕೆ, ಆಮ್ಲಜನಕ ಕೊರತೆ ಇರುವ ಸುದ್ದಿಗಳ ತುಣುಕುಗಳನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *