prashant kishor interview-ಅಮಿತ್ ಶಾ ಕೆಲಸಕ್ಕೆ ಬಾರದ ರಾಜಕೀಯ ಮತ್ತು ಚುನಾವಣಾ ಮ್ಯಾನೇಜರ್: ಪ್ರಶಾಂತ್ ಕಿಶೋರ್

ಅಮಿತ್ ಶಾರ ಅಭಿಮಾನಿಗಳು ಮರೆಯದೇ ಓದಿರಿ-ಪುರುಷೋತ್ತಮ ಬಿಳಿಮಲೆ:

ಹೊಸದಿಲ್ಲಿ: “ನಾನು ದುರಹಂಕಾರಿ ಎಂದು ಭಾವಿಸಬೇಡಿ, ಆದರೆ ಅಮಿತ್ ಶಾ ಅತ್ಯಂತ ಓವರ್-ರೇಟೆಡ್ ರಾಜಕೀಯ ಮತ್ತು ಚುನಾವಣಾ ಮ್ಯಾನೇಜರ್ ಆಗಿದ್ದಾರೆ. ಅವರು ಸಂಪೂರ್ಣ ವಿಫಲವಾಗಿದ್ದಾರೆ. ಅವರ ಬಹಳ ಚಾಣಾಕ್ಷ ಚುನಾವಣಾ ತಂತ್ರಜ್ಞ ಎಂದು ಪ್ರಚಾರ ಪಡೆಯುತ್ತಾರೆ. ಆದರೆ ಅವರಿಗೆ ತೋರಿಸಲು ಯಾವ ಸಾಧನೆಯಿದೆ?” ಎಂದು ಪಶ್ಚಿಮ ಬಂಗಾಳದಲ್ಲಿ ಅಮೋಘ ಜಯ ಸಾಧಿಸಿದ ಮಮತಾ ಬ್ಯಾನರ್ಜಿ ಅವರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

‘ದಿ ಟೆಲಿಗ್ರಾಫ್‍’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ನಾವು ಗೆಲ್ಲುತ್ತೇವೆ ಎನ್ನುವ ವಿಶ್ವಾಸ ನನಗೆ ಯಾವತ್ತೂ ಇತ್ತು. ಆದರೆ ಹೆಚ್ಚಿನವರು ನಮ್ಮನ್ನು ನಂಬಿರಲಿಲ್ಲ. ಅಬ್ಬರದ ಪ್ರಚಾರ ಯಾವತ್ತೂ ಚುನಾವಣೆಯಲ್ಲಿ ಗೆಲುವು ತಂದು ಕೊಡುವುದಿಲ್ಲ. ಇದು ಭಾಗಶಃ ಬಿಜೆಪಿಯ ದುರಹಂಕಾರದ, ಪ್ರಮುಖವಾಗಿ ಅಮಿತ್ ಶಾ ಅವರಂತಹ ನಾಯಕರ ದುರಹಂಕಾರದ ಪರಿಣಾಮ. ಅವರೆಲ್ಲ ಆಕಾಶದಲ್ಲಿಯೇ ಹಾರಾಡಿ, ನೆಲವನ್ನು ಮರೆತು ಬಿಟ್ಟರು. ಬಿಜೆಪಿ ತನ್ನನ್ನು ವಿಜೇತ ಎಂದು ಘೋಷಿಸಿಕೊಂಡೇ ಚುನಾವಣಾ ಕಣಕ್ಕಿಳಿಯುತ್ತದೆ, ಅವರು ಬಹಳಷ್ಟು ಸದ್ದು ಮಾತ್ರ ಮಾಡುತ್ತಾರೆ,” ಎಂದು ಪ್ರಶಾಂತ್ ಕಿಶೋರ್ ಹೇಳಿದರು.

“ಅಮಿತ್ ಶಾ ಅವರಿಗೆ ವೇದಿಕೆಯಲ್ಲಿ ನಿಲ್ಲಿಸಲು ಅತ್ಯಂತ ವರ್ಚಸ್ವಿ ನಾಯಕ ನರೇಂದ್ರ ಮೋದಿ ಇದ್ದಾರೆ. ಅವರ ಕೈಯ್ಯಲ್ಲಿ ಅಪಾರ ಸಂಪನ್ಮೂಲಗಳೂ ಇವೆ. ಸಂಘ ಬೆಂಬಲಿತ ಪಕ್ಷದ ದೊಡ್ಡ ಜಾಲವೂ ಇದೆ, ಸರಕಾರ ಮತ್ತದರ ಏಜನ್ಸಿಗಳ ಬೆಂಬಲವೂ ಇದೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಚುನಾವಣಾ ಆಯೋಗವೂ ಇದೆ. ಆದರೂ ಅವರು ಸೋತರು. ಇದು ನಿಮಗೆ ಅಮಿತ್ ಶಾ ಅವರ ಅಸಲಿ ಸಾಮರ್ಥ್ಯ ಎಂದು ತೋರಿಸುತ್ತದೆ ” ಎಂದು ಪ್ರಶಾಂತ್ ಕಿಶೋರ್ ಹೇಳಿದರು.

“ಇದು ನನ್ನ ಮತ್ತು ಅಮಿತ್ ಶಾ ಅವರ ನಡುವಿನ ಮೂರನೇ ಮುಖಾಮುಖಿ ಹಾಗೂ ಮೂರು ಬಾರಿಯೂ ನಾನು ಅವರನ್ನು ಸೋಲಿಸಿದ್ದೇನೆ- ಬಿಹಾರದಲ್ಲಿ ೨೦೧೫ರಲ್ಲಿ, ದಿಲ್ಲಿಯಲ್ಲಿ ಹಾಗೂ ಈಗ ಬಂಗಾಳದಲ್ಲಿ. ಮತ್ತೆ ಆಂಧ್ರ ಮತ್ತು ಪಂಜಾಬ್‍ನಲ್ಲೂ ಅವರನ್ನು ಸೋಲಿಸಿದ್ದೇವೆ, ಅವರು ಕೆಲಸಕ್ಕೆ ಬಾರದ ರಾಜಕೀಯ ಮ್ಯಾನೇಜರ್. ಒಬ್ಬ ರಾಜಕಾರಣಿಯಾಗಿ ಅಮಿತ್ ಶಾ ಅವರ ಮೇಲೆ ನನಗೆ ದೊಡ್ಡ ಗೌರವವೇನಿಲ್ಲ ಎಂದು ನನಗೆ ಹೇಳಬೇಕಾಗಿದೆ” ಎಂದು ಪ್ರಶಾಂತ್ ಕಿಶೋರ್ ತೀಕ್ಷ್ಣ ಮಾತುಗಳನ್ನಾಡಿದ್ದಾರೆ.ಸೌಜನ್ಯ : ವಾರ್ತಾಭಾರತಿ ೪.೫.೨೦೨೧

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *