Local news -ಬಿ.ಜೆ.ಪಿ. ಪ್ರತಿಭಟನೆ, ಪೂರ್ಣಪ್ರಮಾಣದ ಲಾಕ್ ಡೌನ್ ಸುಳಿವು!

ಸಿದ್ಧಾಪುರ. ಇಲ್ಲಿಯ ಭಾರತೀಯ ಜನತಾ ಪಾರ್ಟಿ ಕಚೇರಿ ಬಳಿ. ತೃಣಮೂ ಲ ಕಾಂಗ್ರೆಸ್(T.M.C), ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ದರಣಿ ಮಾಡಲಾಯಿತು. ಇಡೀ ದೇಶ ಕರೋನವೈರಸ್ ಅಲೆಯಿಂದ ತಲ್ಲಣಗೊಂಡಿದೆ. ಜನ ಭಯಬೀತ ಗೊಂಡಿದ್ದಾರೆ .ಯಾರು ನಿರೀಕ್ಷಿಸದ ಕರೋನಾವೈರಸ್ 2ನೇ ಅಲೆಗೆ ಜನರು ಬದುಕು ಸಾವು ನೋವಿನಲ್ಲಿ ಹೋರಾಟ ಮಾಡುತ್ತಿದ್ದಾರೆ .ಮೊನ್ನೆ ನಡೆದ ಕೆಲವು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಾಗೂ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಸಮಯದಲ್ಲಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿಯ ಪಕ್ಕದ ಕಾರ್ಯಕರ್ತರು .ಪಕ್ಷದ ಮುಖಂಡರು ಅಮಾಯಕರ ಜನರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಅಲ್ಲದೆ ಅಂಗಡಿ ಮುಂಗಟ್ಟುಗಳು ದ್ವಂಸಗೊಳಿಸಿ ಲೂಟಿ ಮಾಡಿದ್ದಾರೆ. ವಯಸ್ಸಾದ ಅಜ್ಜ ಅಜ್ಜಿ ಹಾಗೂ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾರೆ. ಇಂತಹ ಅಮಾನವೀಯ ಕರ್ತಕ್ಕೆ.ಭಾರತೀಯ ಜನತಾ ಪಾರ್ಟಿ ಸಿದ್ದಾಪುರ ಮಂಡಲ ನೇರವಾಗಿ ಖಂಡಿಸುತ್ತದೆ.ತ್ರಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಯವರಿಗೆ ಜೈಲು ಶಿಕ್ಷೆ ಆಗಬೇಕು. ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಆಗಬೇಕು. ಎಂದು ಸಿದ್ದಾಪುರ ಮಂಡಲ ಆಗ್ರಹಿಸುತ್ತದೆ. Covid ಹಾಗೂ 144ಜಾರಿ ಇರುವದರಿಂದ 4ಜನ ಮಾತ್ರ ಧರಣಿ ನೆಡೆಸಿರುತ್ತಾರೆ .ಮಂಡಲ ಅಧ್ಯಕ್ಷ ರಾದ ನಾಗರಾಜ ನಾಯ್ಕ ಬೇಡ್ಕಣಿ. ಪ್ರಧಾನ ಕಾರ್ಯದರ್ಶಿ ಎಸ್. ಕೆ.ಮೇಸ್ತ. ನಗರ ಶಕ್ತಿ ಕೇಂದ್ರ ಅಧ್ಯಕ್ಷರಾದ ತೋಟಪ್ಪ ನಾಯ್ಕ. ಪಂಚಾಯತ್ ಸದಸ್ಯರಾದ ಕ್ರೀಷ್ಣಮುರ್ತಿ ನೀಡಗೋಡ ಭಾಗವಹಿಸಿದ್ದರು. ಎಂದು ಭಾಜಪ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ: ಪೂರ್ಣಪ್ರಮಾಣದ ಲಾಕ್ ಡೌನ್ ಸುಳಿವು!

ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. 

Yediyurappa

ಬೆಂಗಳೂರು: ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. 

ಮತ್ತಷ್ಟು ನಿರ್ಬಂಧಗಳನ್ನು ವಿಧಿಸುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು, ಈ ಕುರಿತು ಪ್ರಧಾನಿ ಕೈಗೊಳ್ಳುವ ನಿರ್ಧಾರವನ್ನು ನಾವು ಜಾರಿಗೊಳಿಸಬೇಕಾಗಿದೆ” ಎಂದು ಹೇಳಿದ್ದಾರೆ. 

“ನಾವೂ ಸಹ ಅವರ ನಿರ್ದೇಶನಗಳಿಗೇ ಕಾಯುತ್ತಿದ್ದೇವೆ, ಸಂಜೆ ವೇಳೆಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ವರದಿಗಾರರಿಗೆ ಸಿಎಂ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನ ಇತ್ತೀಚಿನ ಶಿಫಾರಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ಗೆ ನಿಯಂತ್ರಣಕ್ಕೆ ಕಠಿಣ ನಿರ್ಬಂಧಗಳನ್ನು ವಿಧಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ.

“ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕೋವಿಡ್-19 ಎರಡನೇ ಅಲೆಯನ್ನು ತಡೆಯುವುದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಲಾಕ್ ಡೌನ್ ನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು. ಕೆಲವು ದಿನಗಳಿಂದ ಕರ್ನಾಟಕದಲ್ಲಿ ಪ್ರತಿ ದಿನ 40 ಸಾವಿರಕ್ಕೂ ಅಧಿಕ ಕೇಸ್ ಗಳು ವರದಿಯಾಗುತ್ತಿದ್ದು, 200 ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *