ಸಿದ್ಧಾಪುರ. ಇಲ್ಲಿಯ ಭಾರತೀಯ ಜನತಾ ಪಾರ್ಟಿ ಕಚೇರಿ ಬಳಿ. ತೃಣಮೂ ಲ ಕಾಂಗ್ರೆಸ್(T.M.C), ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ದರಣಿ ಮಾಡಲಾಯಿತು. ಇಡೀ ದೇಶ ಕರೋನವೈರಸ್ ಅಲೆಯಿಂದ ತಲ್ಲಣಗೊಂಡಿದೆ. ಜನ ಭಯಬೀತ ಗೊಂಡಿದ್ದಾರೆ .ಯಾರು ನಿರೀಕ್ಷಿಸದ ಕರೋನಾವೈರಸ್ 2ನೇ ಅಲೆಗೆ ಜನರು ಬದುಕು ಸಾವು ನೋವಿನಲ್ಲಿ ಹೋರಾಟ ಮಾಡುತ್ತಿದ್ದಾರೆ .ಮೊನ್ನೆ ನಡೆದ ಕೆಲವು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಾಗೂ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಸಮಯದಲ್ಲಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿಯ ಪಕ್ಕದ ಕಾರ್ಯಕರ್ತರು .ಪಕ್ಷದ ಮುಖಂಡರು ಅಮಾಯಕರ ಜನರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಅಲ್ಲದೆ ಅಂಗಡಿ ಮುಂಗಟ್ಟುಗಳು ದ್ವಂಸಗೊಳಿಸಿ ಲೂಟಿ ಮಾಡಿದ್ದಾರೆ. ವಯಸ್ಸಾದ ಅಜ್ಜ ಅಜ್ಜಿ ಹಾಗೂ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾರೆ. ಇಂತಹ ಅಮಾನವೀಯ ಕರ್ತಕ್ಕೆ.ಭಾರತೀಯ ಜನತಾ ಪಾರ್ಟಿ ಸಿದ್ದಾಪುರ ಮಂಡಲ ನೇರವಾಗಿ ಖಂಡಿಸುತ್ತದೆ.ತ್ರಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಯವರಿಗೆ ಜೈಲು ಶಿಕ್ಷೆ ಆಗಬೇಕು. ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಆಗಬೇಕು. ಎಂದು ಸಿದ್ದಾಪುರ ಮಂಡಲ ಆಗ್ರಹಿಸುತ್ತದೆ. Covid ಹಾಗೂ 144ಜಾರಿ ಇರುವದರಿಂದ 4ಜನ ಮಾತ್ರ ಧರಣಿ ನೆಡೆಸಿರುತ್ತಾರೆ .ಮಂಡಲ ಅಧ್ಯಕ್ಷ ರಾದ ನಾಗರಾಜ ನಾಯ್ಕ ಬೇಡ್ಕಣಿ. ಪ್ರಧಾನ ಕಾರ್ಯದರ್ಶಿ ಎಸ್. ಕೆ.ಮೇಸ್ತ. ನಗರ ಶಕ್ತಿ ಕೇಂದ್ರ ಅಧ್ಯಕ್ಷರಾದ ತೋಟಪ್ಪ ನಾಯ್ಕ. ಪಂಚಾಯತ್ ಸದಸ್ಯರಾದ ಕ್ರೀಷ್ಣಮುರ್ತಿ ನೀಡಗೋಡ ಭಾಗವಹಿಸಿದ್ದರು. ಎಂದು ಭಾಜಪ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ: ಪೂರ್ಣಪ್ರಮಾಣದ ಲಾಕ್ ಡೌನ್ ಸುಳಿವು!
ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಮತ್ತಷ್ಟು ನಿರ್ಬಂಧಗಳನ್ನು ವಿಧಿಸುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು, ಈ ಕುರಿತು ಪ್ರಧಾನಿ ಕೈಗೊಳ್ಳುವ ನಿರ್ಧಾರವನ್ನು ನಾವು ಜಾರಿಗೊಳಿಸಬೇಕಾಗಿದೆ” ಎಂದು ಹೇಳಿದ್ದಾರೆ.
“ನಾವೂ ಸಹ ಅವರ ನಿರ್ದೇಶನಗಳಿಗೇ ಕಾಯುತ್ತಿದ್ದೇವೆ, ಸಂಜೆ ವೇಳೆಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ವರದಿಗಾರರಿಗೆ ಸಿಎಂ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನ ಇತ್ತೀಚಿನ ಶಿಫಾರಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ಗೆ ನಿಯಂತ್ರಣಕ್ಕೆ ಕಠಿಣ ನಿರ್ಬಂಧಗಳನ್ನು ವಿಧಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ.
“ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕೋವಿಡ್-19 ಎರಡನೇ ಅಲೆಯನ್ನು ತಡೆಯುವುದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಲಾಕ್ ಡೌನ್ ನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು. ಕೆಲವು ದಿನಗಳಿಂದ ಕರ್ನಾಟಕದಲ್ಲಿ ಪ್ರತಿ ದಿನ 40 ಸಾವಿರಕ್ಕೂ ಅಧಿಕ ಕೇಸ್ ಗಳು ವರದಿಯಾಗುತ್ತಿದ್ದು, 200 ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. (kpc)