ಎತ್ತು ಏರಿಗೆಳೆದರೆ ಕೋಣ ನೀರಿಗೆ: ಬುಗಿಲೆದ್ದ ಬಿ.ಜೆ.ಪಿ.ಅಂತ:ಕಲಹ

ನೀವು ಕೊರೋನಾ ವೈರಸ್ ಗಿಂತಲೂ ಡೇಂಜರ್, ಯೋಗ್ಯತೆ ಇದ್ದರೆ ಪಕ್ಷದಲ್ಲಿ ಇರಿ, ಇಲ್ಲದಿದ್ದರೆ ತೊಲಗಿ’: ಮಾಜಿ ಸಚಿವ ವಿಶ್ವನಾಥ್ ವಿರುದ್ಧ ಕಿಡಿ 

ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಇಂತಹ ಕೊರೋನಾ ಸಂಕಷ್ಟ ಕಾಲದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಪಕ್ಷಕ್ಕೆ ದ್ರೋಹವನ್ನುಂಟುಮಾಡುವ ಕೆಲಸ ಮಾಡುತ್ತಿರುವ ಅವರು ಮಾನ ಮರ್ಯಾದೆ ಇದ್ದರೆ ಬಿಜೆಪಿ ಬಿಟ್ಟು ತೊಲಗಲಿ ಎಂದು ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ

H Vishwanath and S R Vishwanath(File photo)

ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ

“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಆಡಳಿತಾರೂಢ ಬಿಜೆಪಿ ಸದಸ್ಯರಾದ ನಿಮ್ಮ ವಿರುದ್ಧ ಆರೋಪ ಹೊರಿಸುತ್ತಿರುವುದು ನನಗೆ ಬೇಸರ ತಂದಿದೆ ”ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ..

ದಾವಣಗೆರೆ: “ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಆಡಳಿತಾರೂಢ ಬಿಜೆಪಿ ಸದಸ್ಯರಾದ ನಿಮ್ಮ ವಿರುದ್ಧ ಆರೋಪ ಹೊರಿಸುತ್ತಿರುವುದು ನನಗೆ ಬೇಸರ ತಂದಿದೆ ”ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

ಕೋವಿಡ್ -19 ಎರಡನೇ ಅಲೆಯ ನಡುವೆ  ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸಿದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಪ್ರತಿಪಕ್ಷಗಳಿಗೆ ಸಚಿವರ ವೈಫಲ್ಯ ಆಹಾರ ಒದಗಿಸಿದೆ ಎಂದು ಹೊನ್ನಾಳಿ ಶಾಸಕ ಹೇಳಿದ್ದಾರೆ. ರಾಜ್ಯವು ಇಷ್ಟು ದೊಡ್ಡ ಪ್ರಮಾಣದ ಸಮಸ್ಯೆ ಎದುರಿಸುತ್ತಿರುವಾಗ ಸುಧಾಕರ್ ಎರಡು ಖಾತೆಗಳನ್ನು ನಿರ್ವಹಿಸುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು. ಕೋವಿಡ್ -19 ರ ಬಿಕ್ಕಟ್ಟು. ಬೆಡ್ ಬ್ಲಾಕಿಂಗ್ ಹಗರಣ ಮತ್ತು ಚಾಮರಾಜ್‌ನಗರ ಘಟನೆಗೆ ಸುಧಾಕರ್ ಸಂಪೂರ್ಣ ಹೊಣೆ ಎಂದು ಆರೋಪಿಸಿದ ಅವರು ಸಚಿವರ ರಾಜೀನಾಮೆ ಕೋರಿದ್ದಾರೆ.

“ಬಿಜೆಪಿ ನಿಮ್ಮನ್ನು ಅವಲಂಬಿಸಿಲ್ಲ. ನಿಮ್ಮಿಂದಾಗಿ ಸರ್ಕಾರವೂ ಕಾರ್ಯನಿರ್ವಹಿಸುತ್ತಿಲ್ಲ. ನೀವು ಅಸಮರ್ಥರಾಗಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಜನರ ಕಲ್ಯಾಣಕ್ಕಾಗಿ ದುಡಿಯುವ ಪಕ್ಷ ಅಥವಾ ಸರ್ಕಾರಕ್ಕೆ ಕೆಟ್ಟ ಹೆಸರನ್ನು ತರಲು ಪ್ರಯತ್ನಿಸಬೇಡಿ ”ಎಂದು ರೇಣುಕಾಚಾರ್ಯ ಹೇಳಿದರು.

ಬೆಂಗಳೂರು: ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಇಂತಹ ಕೊರೋನಾ ಸಂಕಷ್ಟ ಕಾಲದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಪಕ್ಷಕ್ಕೆ ದ್ರೋಹವನ್ನುಂಟುಮಾಡುವ ಕೆಲಸ ಮಾಡುತ್ತಿರುವ ಅವರು ಮಾನ ಮರ್ಯಾದೆ ಇದ್ದರೆ ಬಿಜೆಪಿ ಬಿಟ್ಟು ತೊಲಗಲಿ ಎಂದು ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್ ಸೋಂಕು ನಿರ್ಮೂಲನೆಗೆ, ರಾಜ್ಯದ ಜನತೆಯ ಪರವಾಗಿ ಈ ಕಷ್ಟದ ಕಾಲದಲ್ಲಿ ಅವಿರತವಾಗಿ ಕೊರೋನಾ ನಿರ್ಮೂಲನೆಗೆ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಬೆನ್ನು ತಟ್ಟುವ, ಸಲಹೆ ನೀಡುವ ಕೆಲಸ ಮಾಡುವುದು ಬಿಟ್ಟು ವಿಶ್ವನಾಥ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮನೆಯಲ್ಲಿ ಕುಳಿತುಕೊಂಡು ಮುಖ್ಯಮಂತ್ರಿಯವರನ್ನು ದೂರುವ ಕೆಲಸವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಹೊರಗಡೆ ಬಂದು ಕ್ರಿಯಾತ್ಮಕ ಕೆಲಸಗಳಲ್ಲಿ ಭಾಗಿಯಾಗಿದ್ದಾರೆಯೇ, ಮುಖ್ಯಮಂತ್ರಿಗಳು ಕೊರೋನಾ ಬಂದಾಗಲೂ ಆಸ್ಪತ್ರೆಯಲ್ಲಿದ್ದುಕೊಂಡು ಕೋವಿಡ್ ಸಂಬಂಧ ಕೆಲಸ ಮಾಡಿದ್ದಾರೆ. ಹೀಗಿರುವಾಗ ಬಾಯಿಗೆ ಬಂದಂತೆ ಮಾತನಾಡುವುದು ವಿಶ್ವನಾಥ್ ಅವರ ಹುಟ್ಟುಗುಣವೆಂದು ಕಾಣುತ್ತದೆ ಎಂದು ಆರೋಪಿಸಿದ್ದಾರೆ.

ಮೂಲೆಗುಂಪು ಆಗುತ್ತಿದ್ದ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ ಸ್ಥಾನ ಕೊಟ್ಟು ಪಕ್ಷದಲ್ಲಿ ಸ್ಥಾನಮಾನ ಕೊಟ್ಟವರು ಯಡಿಯೂರಪ್ಪನವರು, ಹೀಗಿರುವಾಗ ಮುಖ್ಯಮಂತ್ರಿಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಎಷ್ಟು ಸರಿ, ನಿಮಗೆ ಯೋಗ್ಯತೆ ಇದ್ದರೆ ಪಕ್ಷದಲ್ಲಿ ಇರಿ, ಇಲ್ಲದಿದ್ದರೆ ನಿಮ್ಮಂಥವರ ಅವಶ್ಯಕತೆ ನಮಗಿಲ್ಲ, ದಯವಿಟ್ಟು ಪಕ್ಷವನ್ನು ಬಿಟ್ಟು ತೊಲಗಿ ಎಂದು ಸವಾಲು ಹಾಕಿದರು.

ನಿಮ್ಮ ತಿಕ್ಕಲುತನ ಪಕ್ಷಕ್ಕೆ ಮುಜುಗರ ತರುತ್ತಿದೆ, ಸಾಧ್ಯವಾದರೆ ಜನರಿಗೆ, ಪಕ್ಷಕ್ಕೆ ಒಳ್ಳೆಯ ಕೆಲಸ ಮಾಡಿ, ವಿರೋಧ ಪಕ್ಷದವರು ಕೂಡ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ನೀವು ಕೋವಿಡ್ ವೈರಸ್ ಗಿಂತಲೂ ಡೇಂಜರ್, ನಿಮಗೆ ಮಾನ ಮರ್ಯಾದೆ ಇದ್ದರೆ ಪಕ್ಷವನ್ನು ಬಿಟ್ಟು ಟೀಕೆ ಮಾಡಿ, ನಿಮ್ಮಂತವರಿಂದಲೇ ಪಕ್ಷಗಳು ಹಾಳಾಗುವುದು ಎಂದು ಎಸ್ ಆರ್ ವಿಶ್ವನಾಥ್ ಕಟುವಾಗಿ ಟೀಕಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *