ಎತ್ತು ಏರಿಗೆಳೆದರೆ ಕೋಣ ನೀರಿಗೆ: ಬುಗಿಲೆದ್ದ ಬಿ.ಜೆ.ಪಿ.ಅಂತ:ಕಲಹ

ನೀವು ಕೊರೋನಾ ವೈರಸ್ ಗಿಂತಲೂ ಡೇಂಜರ್, ಯೋಗ್ಯತೆ ಇದ್ದರೆ ಪಕ್ಷದಲ್ಲಿ ಇರಿ, ಇಲ್ಲದಿದ್ದರೆ ತೊಲಗಿ’: ಮಾಜಿ ಸಚಿವ ವಿಶ್ವನಾಥ್ ವಿರುದ್ಧ ಕಿಡಿ 

ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಇಂತಹ ಕೊರೋನಾ ಸಂಕಷ್ಟ ಕಾಲದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಪಕ್ಷಕ್ಕೆ ದ್ರೋಹವನ್ನುಂಟುಮಾಡುವ ಕೆಲಸ ಮಾಡುತ್ತಿರುವ ಅವರು ಮಾನ ಮರ್ಯಾದೆ ಇದ್ದರೆ ಬಿಜೆಪಿ ಬಿಟ್ಟು ತೊಲಗಲಿ ಎಂದು ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ

H Vishwanath and S R Vishwanath(File photo)

ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ

“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಆಡಳಿತಾರೂಢ ಬಿಜೆಪಿ ಸದಸ್ಯರಾದ ನಿಮ್ಮ ವಿರುದ್ಧ ಆರೋಪ ಹೊರಿಸುತ್ತಿರುವುದು ನನಗೆ ಬೇಸರ ತಂದಿದೆ ”ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ..

ದಾವಣಗೆರೆ: “ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಆಡಳಿತಾರೂಢ ಬಿಜೆಪಿ ಸದಸ್ಯರಾದ ನಿಮ್ಮ ವಿರುದ್ಧ ಆರೋಪ ಹೊರಿಸುತ್ತಿರುವುದು ನನಗೆ ಬೇಸರ ತಂದಿದೆ ”ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

ಕೋವಿಡ್ -19 ಎರಡನೇ ಅಲೆಯ ನಡುವೆ  ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸಿದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಪ್ರತಿಪಕ್ಷಗಳಿಗೆ ಸಚಿವರ ವೈಫಲ್ಯ ಆಹಾರ ಒದಗಿಸಿದೆ ಎಂದು ಹೊನ್ನಾಳಿ ಶಾಸಕ ಹೇಳಿದ್ದಾರೆ. ರಾಜ್ಯವು ಇಷ್ಟು ದೊಡ್ಡ ಪ್ರಮಾಣದ ಸಮಸ್ಯೆ ಎದುರಿಸುತ್ತಿರುವಾಗ ಸುಧಾಕರ್ ಎರಡು ಖಾತೆಗಳನ್ನು ನಿರ್ವಹಿಸುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು. ಕೋವಿಡ್ -19 ರ ಬಿಕ್ಕಟ್ಟು. ಬೆಡ್ ಬ್ಲಾಕಿಂಗ್ ಹಗರಣ ಮತ್ತು ಚಾಮರಾಜ್‌ನಗರ ಘಟನೆಗೆ ಸುಧಾಕರ್ ಸಂಪೂರ್ಣ ಹೊಣೆ ಎಂದು ಆರೋಪಿಸಿದ ಅವರು ಸಚಿವರ ರಾಜೀನಾಮೆ ಕೋರಿದ್ದಾರೆ.

“ಬಿಜೆಪಿ ನಿಮ್ಮನ್ನು ಅವಲಂಬಿಸಿಲ್ಲ. ನಿಮ್ಮಿಂದಾಗಿ ಸರ್ಕಾರವೂ ಕಾರ್ಯನಿರ್ವಹಿಸುತ್ತಿಲ್ಲ. ನೀವು ಅಸಮರ್ಥರಾಗಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಜನರ ಕಲ್ಯಾಣಕ್ಕಾಗಿ ದುಡಿಯುವ ಪಕ್ಷ ಅಥವಾ ಸರ್ಕಾರಕ್ಕೆ ಕೆಟ್ಟ ಹೆಸರನ್ನು ತರಲು ಪ್ರಯತ್ನಿಸಬೇಡಿ ”ಎಂದು ರೇಣುಕಾಚಾರ್ಯ ಹೇಳಿದರು.

ಬೆಂಗಳೂರು: ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಇಂತಹ ಕೊರೋನಾ ಸಂಕಷ್ಟ ಕಾಲದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಪಕ್ಷಕ್ಕೆ ದ್ರೋಹವನ್ನುಂಟುಮಾಡುವ ಕೆಲಸ ಮಾಡುತ್ತಿರುವ ಅವರು ಮಾನ ಮರ್ಯಾದೆ ಇದ್ದರೆ ಬಿಜೆಪಿ ಬಿಟ್ಟು ತೊಲಗಲಿ ಎಂದು ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್ ಸೋಂಕು ನಿರ್ಮೂಲನೆಗೆ, ರಾಜ್ಯದ ಜನತೆಯ ಪರವಾಗಿ ಈ ಕಷ್ಟದ ಕಾಲದಲ್ಲಿ ಅವಿರತವಾಗಿ ಕೊರೋನಾ ನಿರ್ಮೂಲನೆಗೆ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಬೆನ್ನು ತಟ್ಟುವ, ಸಲಹೆ ನೀಡುವ ಕೆಲಸ ಮಾಡುವುದು ಬಿಟ್ಟು ವಿಶ್ವನಾಥ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮನೆಯಲ್ಲಿ ಕುಳಿತುಕೊಂಡು ಮುಖ್ಯಮಂತ್ರಿಯವರನ್ನು ದೂರುವ ಕೆಲಸವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಹೊರಗಡೆ ಬಂದು ಕ್ರಿಯಾತ್ಮಕ ಕೆಲಸಗಳಲ್ಲಿ ಭಾಗಿಯಾಗಿದ್ದಾರೆಯೇ, ಮುಖ್ಯಮಂತ್ರಿಗಳು ಕೊರೋನಾ ಬಂದಾಗಲೂ ಆಸ್ಪತ್ರೆಯಲ್ಲಿದ್ದುಕೊಂಡು ಕೋವಿಡ್ ಸಂಬಂಧ ಕೆಲಸ ಮಾಡಿದ್ದಾರೆ. ಹೀಗಿರುವಾಗ ಬಾಯಿಗೆ ಬಂದಂತೆ ಮಾತನಾಡುವುದು ವಿಶ್ವನಾಥ್ ಅವರ ಹುಟ್ಟುಗುಣವೆಂದು ಕಾಣುತ್ತದೆ ಎಂದು ಆರೋಪಿಸಿದ್ದಾರೆ.

ಮೂಲೆಗುಂಪು ಆಗುತ್ತಿದ್ದ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ ಸ್ಥಾನ ಕೊಟ್ಟು ಪಕ್ಷದಲ್ಲಿ ಸ್ಥಾನಮಾನ ಕೊಟ್ಟವರು ಯಡಿಯೂರಪ್ಪನವರು, ಹೀಗಿರುವಾಗ ಮುಖ್ಯಮಂತ್ರಿಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಎಷ್ಟು ಸರಿ, ನಿಮಗೆ ಯೋಗ್ಯತೆ ಇದ್ದರೆ ಪಕ್ಷದಲ್ಲಿ ಇರಿ, ಇಲ್ಲದಿದ್ದರೆ ನಿಮ್ಮಂಥವರ ಅವಶ್ಯಕತೆ ನಮಗಿಲ್ಲ, ದಯವಿಟ್ಟು ಪಕ್ಷವನ್ನು ಬಿಟ್ಟು ತೊಲಗಿ ಎಂದು ಸವಾಲು ಹಾಕಿದರು.

ನಿಮ್ಮ ತಿಕ್ಕಲುತನ ಪಕ್ಷಕ್ಕೆ ಮುಜುಗರ ತರುತ್ತಿದೆ, ಸಾಧ್ಯವಾದರೆ ಜನರಿಗೆ, ಪಕ್ಷಕ್ಕೆ ಒಳ್ಳೆಯ ಕೆಲಸ ಮಾಡಿ, ವಿರೋಧ ಪಕ್ಷದವರು ಕೂಡ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ನೀವು ಕೋವಿಡ್ ವೈರಸ್ ಗಿಂತಲೂ ಡೇಂಜರ್, ನಿಮಗೆ ಮಾನ ಮರ್ಯಾದೆ ಇದ್ದರೆ ಪಕ್ಷವನ್ನು ಬಿಟ್ಟು ಟೀಕೆ ಮಾಡಿ, ನಿಮ್ಮಂತವರಿಂದಲೇ ಪಕ್ಷಗಳು ಹಾಳಾಗುವುದು ಎಂದು ಎಸ್ ಆರ್ ವಿಶ್ವನಾಥ್ ಕಟುವಾಗಿ ಟೀಕಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *