ಸಾಹಿತಿ, ಪ್ರಗತಿಪರ ಹೋರಾಟಗಾರ ವಿಠ್ಠಲ್ ಭಂಡಾರಿ ಇನ್ನು ನೆನಪು

ಹೊನ್ನಾವರ ಮೂಲದ ಪ್ರಗತಿಪರ ಸಾಹಿತಿ, ಹೋರಾಟಗಾರ ಕನ್ನಡ ಉಪನ್ಯಾಸಕ ಸಿದ್ಧಾಪುರದ ವಿಠ್ಠಲ್ ಭಂಡಾರಿ ಇಂದು ಸಂಜೆ6.30 ರ ಸಮಯದಲ್ಲಿ ಕೊನೆ ಉಸಿರೆಳೆದಿದ್ದಾರೆ. ಕಳೆದ ವಾರದಿಂದೀಚೆಗೆ ಕೋವಿಡ್ ಸೋಕಿತರಾಗಿ ಸಿದ್ಧಾಪುರದ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಫತ್ರೆಗೆ ದಾಖಲಿಸಲಾಗಿತ್ತು.

ಕಳೆದ ಮೂರು ದಿವಸಗಳಿಂದ ಕೋಮಾವಸ್ಥೆಗೆ ಜಾರಿದ್ದ ವಿಠ್ಠಲ್ ಭಂಡಾರಿ ಇಂದು ಚಿರನಿದ್ರೆಗೆ ವಶವಾದರು.

ಹೊನ್ನಾವರದ ಕೆರೆಕೋಣು,ಉತ್ತರ ಕನ್ನಡ ಜಿಲ್ಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ್ದ ಡಾ. ಆರ್.ವಿ.ಭಂಡಾರಿಯವರ ಪುತ್ರರಾಗಿದ್ದ ವಿಠ್ಠಲ್ ಭಂಡಾರಿ ಪ್ರಗತಿ ಪರ ಸಂಘಟನೆ, ಸಾಹಿತ್ಯ ಚಟುವಟಿಕೆ,ಸಾಹಿತ್ಯ, ಸಾಂಸ್ಕೃತಿಕ ಅಭಿರುಚಿಗಳಿಂದ

ಸದಾ ಕ್ರೀಯಾಶೀಲರಾಗಿ ಡಾ. ಆರ್.ವಿ. ಭಂಡಾರಿಯವರ ನೈಜ ವಾರಸುದಾರರಾಗಿ ಕಾರ್ಯನಿರ್ವಹಿಸಿದ್ದರು.

ರಾಜ್ಯ ಬಂಡಾಯ ಸಂಘಟನೆ, ಬಂಡಾಯ ಪ್ರಕಾಶನ, ಹೊನ್ನಾವರದ ಸಹಯಾನ ಸೇರಿದಂತೆ ಅನೇಕ ಸಂಘ-ಸಂಸ್ಥೆ ಗಳನ್ನು ಕಟ್ಟಿ ಬೆಳೆಸಿದ್ದ ಅವರು ಕನ್ನಡ ಉಪನ್ಯಾಸಕರಾಗಿ ಕೂಡಾ ಹೆಸರು ಮಾಡಿದ್ದರು. ಪತ್ನಿ ಸಿ.ಆಯ್.ಟಿ.ಯು. ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕರ್, ಸಹೋದರಿ, ಸಾಹಿತಿ ಮಾಧವಿ ಭಂಡಾರಿ ಸೇರಿದಂತೆ ಅಪಾರ ಸಂಗಾತಿಗಳು, ಬಂಧು ಬಳಗವನ್ನು ಅಗಲಿದ ಡಾ. ವಿಠ್ಠಲ್ ಭಂಡಾರಿಯವರ ಅಕಾಲಿಕ ಸಾವಿಗೆ ರಾಜ್ಯದಾದ್ಯಂತ ನೋವು-ಶೋಕ ವ್ಯಕ್ತವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *