ಡಾ. ಶ್ರೇಯಸ್ ಎಸ್ ವೈದ್ಯ ಗೆ ಪ್ರಥಮ ರ್ಯಾಂಕ್..ಸಂಕಟದ ನಡುವೆ ಭರವಸೆಯ ಕತೆಗಳು…


ಸಿದ್ದಾಪುರ. ತಾಲೂಕಿನ ಪ್ರಸಿದ್ಧ ವೈದ್ಯ ದಂಪತಿಗಳಾದ ಡಾ. ಶ್ರೀಧರ ವೈದ್ಯ ಮತ್ತು ಡಾ. ಸುಮಂಗಲಾ ವೈದ್ಯರ ಪುತ್ರ ಡಾ. ಶ್ರೇಯಸ್ ವೈದ್ಯ ಪ್ರಥಮ ರ್ಯಾಂಕ್ ನೊಂದಿಗೆ ಪೀಡಿಯಾಟ್ರಿಕ್ಸ ನಲ್ಲಿ ಎಂ.ಡಿ. (ಸ್ನಾತಕೋತ್ತರ ಪದವಿ) ಪೂರೈಸಿದ್ದಾರೆ. ವಿಜಯಪುರದ ಬಿ.ಎಲ್.ಡಿ.ಇ. ಡೀಮ್ಡ್ ಯುನಿವರ್ಸಿಟಿಯಲ್ಲಿ ಉನ್ನತ ವೈದ್ಯಕೀಯ ಶಿಕ್ಷಣ ಪಡೆದು ಈ ಸಾಧನೆಗೈದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಸಿದ್ದಾಪುರದ ಪ್ರಶಾಂತಿ ಶಾಲೆ ಮತ್ತು ಲಿಟ್ಲ ಫ್ಲಾವರ್ ಶಾಲೆಗಳಲ್ಲಿ ಪಡೆದಿದ್ದರು. ಮುಂದೆ ಪಿಯುಸಿ ಯನ್ನು ಮಹೇಶ ಪಿಯು ಕಾಲೇಜು ಮಂಗಳೂರು ಹಾಗೂ ಎಂ.ಬಿ.ಬಿ.ಎಸ್. ಪದವಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜು ಧಾರವಾಡದಲ್ಲಿ ಪೂರೈಸಿದ್ದರು.
ಪ್ರಸೂತಿ ತಜ್ಞ ತಂದೆ, ಅರವಳಿಕೆ ತಜ್ಞೆ ತಾಯಿಯೊಂದಿಗೆ ಮಕ್ಕಳ ತಜ್ಞರಾಗಿ ಮಗ ಶ್ರೇಯಸ್ ವೈದ್ಯ ವೃತ್ತಿಜೀವನ ಪ್ರಾರಂಭಿಸಲಿದ್ದಾರೆ.

ಸಂಕಟದ ನಡುವೆ ಭರವಸೆಯ ಕಥೆಗಳು: ಕೊರೋನಾ ಜಯಿಸಿದ 103 ವರ್ಷದ ವೃದ್ದ, ಪಂಜಾಬ್ ಮೂಲದ ನವಜಾತ ಶಿಶು!

ಮಹಾರಾಷ್ಟ್ರದ ಪಲ್ಗ್ಹರ್ ಮೂಲದ 103 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪಲ್ಗ್ಹರ್: ಮಹಾರಾಷ್ಟ್ರದ ಪಲ್ಗ್ಹರ್ ಮೂಲದ 103 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇಲ್ಲಿನ ವೀರೇಂದ್ರ ನಗರ ಪ್ರದೇಶದ ಮೂಲದವರಾದ ಶಮರಾವ್ ಇಂಗಳೆ ಅವರನ್ನು ಸೋಂಕಿನ ಕಾರಣ ಪಲ್ಗ್ಹರ್ ನ ಗ್ರಾಮೀಣ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗದಿಂದ ಚೇತರಿಸಿಕೊಂಡ ನಂತರ ಅವರನ್ನು ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ. 

https://imasdk.googleapis.com/js/core/bridge3.455.0_en.html#goog_1128022454

https://imasdk.googleapis.com/js/core/bridge3.455.0_en.html#goog_1128022457

https://imasdk.googleapis.com/js/core/bridge3.455.0_en.html#goog_1128022460

ಆಸ್ಪತ್ರೆಯ ವೈದ್ಯರ ಪ್ರಕಾರ, ವೃದ್ಧರು ತನಗೆ ಒದಗಿಸಿದ ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದರು. ಅಲ್ಲದೆ ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಸಹಕರಿಸಿದರು. ಅವರು ಶನಿವಾರ ನಗುಮುಖದೊಡನೆ ಆಸ್ಪತ್ರೆಯಿಂದ ಹೊರ ನಡೆದರು. 

ಪಲ್ಗ್ಹರ್  ಕಲೆಕ್ಟರ್ ಡಾ.ಮಣಿಕ್ ಗುರ್ಶಾರ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಅವರ ಡಿಸ್ಚಾರ್ಜ್ ಸಮಯದಲ್ಲಿ ಹೂವುಗಳನ್ನು ನೀಡಿ ಬೀಳ್ಕೊಟ್ಟರು. ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 95,682 ಕೊರೋನಾ ಪ್ರಕರಣಗಳು ಹಾಗೂ ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 95,682

ವೈರಸ್‌ನಿಂದ ಚೇತರಿಸಿಕೊಂಡ ಪಂಜಾಬ್‌ನ ನವಜಾತ ಶಿಶು

ಏಪ್ರಿಲ್ ಆರಂಭದಲ್ಲಿ, ಗುರ್ದೀಪ್ ಸಿಂಗ್ ಮತ್ತು ಅವರ ಪತ್ನಿ ಸಂದೀಪ್ ಕೌರ್ ಗಂಡು ಮಗುವಿಗೆ ಪೋಷಕರೆನಿಸಿಕೊಂಡರು. ಆದರೆ ಮಗು ಜನಿಸಿ ಕೇವಲ  20 ದಿನಗಳ ನಂತರ ಅವರ ಸಂತೋಷಕ್ಕೆಲ್ಲಾ ಅಂತ್ಯ ಹಾಡುವಂತೆ ಮಗುವಿಗೆ ಹೆಚ್ಚಿನ ಜ್ವರ ಮತ್ತು ರೋಗಗ್ರಸ್ತ ಸ್ಥಿತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂತು.

ಆ ವೇಳೆ ಮಗುವಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಪರಿಣಾಮ ಗುರ್ದೀಪ್ ತನ್ನ ಮಗುವನ್ನು ನೋಡಲೂ ಆಗಲಿಲ್ಲ. 

ಹತ್ತು ದಿನಗಳ ನಂತರ, ಶುಕ್ರವಾರ ಜಲಂಧರ್‌ನ ಪಂಜಾಬ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಪಿಮ್ಸ್) ನಿಂದ ಶಿಶುವನ್ನು ಡಿಸ್ಚಾರ್ಜ್ ಮಾಡಲಾಗಿದ್ದು  ಆ ಸಮಯದಲ್ಲಿ ಮಗುವಿನ ತಂದೆ ಗುರ್ದೀಪ್, “ದೇವರು ನಮ್ಮ ಪ್ರಾರ್ಥನೆಯನ್ನು ಕೇಳಿದನೆಂದು ತೋರುತ್ತದೆ” ಎಂದು ಹೇಳಿದರು.

ಮಗುವಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದಾಗ ಕುಟುಂಬ ಆಘಾತವನ್ನು ಅನುಭವಿಸಿದೆ. ಆರ್‌ಟಿ-ಪಿಸಿಆರ್ ಸೇರಿದಂತೆ ಎಲ್ಲಾ ವೈದ್ಯಕೀಯ ಪರೀಕ್ಷೆಗಳ ಮೂಲಕ ಪರೀಕ್ಷಿಸಿದ ನಂತರ ಶಿಶುವನ್ನು ಜಲಂಧರ್‌ನ ಪಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಮಗನನ್ನು ಮತ್ತೊಮ್ಮೆ ತನ್ನ ಮಡಿಲಲ್ಲಿ ಮಲಗಿಸಿಕೊಂಡ ತಾಯಿಯ ಸಂತಸಕ್ಕೆ ಮಿತಿ ಇಲ್ಲ.

“ದೇವರ ಅನುಗ್ರಹದಿಂದ, ನನ್ನ ಮೊಮ್ಮಗ ಮನೆಗೆ ಮರಳಿದ್ದಾನೆ. ವೈದ್ಯರು ಅವನನ್ನು ಚೆನ್ನಾಗಿ ನೋಡಿಕೊಂಡರು” ಎಂದು ಶಿಶುವಿನ ಅಜ್ಜಿ ಕುಲ್ವಿಂದರ್ ಕೌರ್ ಹೇಳಿದರು. “ನಾವು ಮಗುವನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದೆವು. ಶಿಶುವೊಂದು ತುಂಬಾ ದೊಡ್ಡ ನೋವಿನಿಂದ ಬಳಲುತ್ತಿದ್ದದ್ದು ಕಾಣುವುದುಕಷ್ಟಕರವಾಗಿತ್ತು” ಎಂದು ಪಿಮ್ಸ್ ನರ್ಸ್ ನರ್ಬಿ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *