ಡಾ. ಶ್ರೇಯಸ್ ಎಸ್ ವೈದ್ಯ ಗೆ ಪ್ರಥಮ ರ್ಯಾಂಕ್..ಸಂಕಟದ ನಡುವೆ ಭರವಸೆಯ ಕತೆಗಳು…


ಸಿದ್ದಾಪುರ. ತಾಲೂಕಿನ ಪ್ರಸಿದ್ಧ ವೈದ್ಯ ದಂಪತಿಗಳಾದ ಡಾ. ಶ್ರೀಧರ ವೈದ್ಯ ಮತ್ತು ಡಾ. ಸುಮಂಗಲಾ ವೈದ್ಯರ ಪುತ್ರ ಡಾ. ಶ್ರೇಯಸ್ ವೈದ್ಯ ಪ್ರಥಮ ರ್ಯಾಂಕ್ ನೊಂದಿಗೆ ಪೀಡಿಯಾಟ್ರಿಕ್ಸ ನಲ್ಲಿ ಎಂ.ಡಿ. (ಸ್ನಾತಕೋತ್ತರ ಪದವಿ) ಪೂರೈಸಿದ್ದಾರೆ. ವಿಜಯಪುರದ ಬಿ.ಎಲ್.ಡಿ.ಇ. ಡೀಮ್ಡ್ ಯುನಿವರ್ಸಿಟಿಯಲ್ಲಿ ಉನ್ನತ ವೈದ್ಯಕೀಯ ಶಿಕ್ಷಣ ಪಡೆದು ಈ ಸಾಧನೆಗೈದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಸಿದ್ದಾಪುರದ ಪ್ರಶಾಂತಿ ಶಾಲೆ ಮತ್ತು ಲಿಟ್ಲ ಫ್ಲಾವರ್ ಶಾಲೆಗಳಲ್ಲಿ ಪಡೆದಿದ್ದರು. ಮುಂದೆ ಪಿಯುಸಿ ಯನ್ನು ಮಹೇಶ ಪಿಯು ಕಾಲೇಜು ಮಂಗಳೂರು ಹಾಗೂ ಎಂ.ಬಿ.ಬಿ.ಎಸ್. ಪದವಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜು ಧಾರವಾಡದಲ್ಲಿ ಪೂರೈಸಿದ್ದರು.
ಪ್ರಸೂತಿ ತಜ್ಞ ತಂದೆ, ಅರವಳಿಕೆ ತಜ್ಞೆ ತಾಯಿಯೊಂದಿಗೆ ಮಕ್ಕಳ ತಜ್ಞರಾಗಿ ಮಗ ಶ್ರೇಯಸ್ ವೈದ್ಯ ವೃತ್ತಿಜೀವನ ಪ್ರಾರಂಭಿಸಲಿದ್ದಾರೆ.

ಸಂಕಟದ ನಡುವೆ ಭರವಸೆಯ ಕಥೆಗಳು: ಕೊರೋನಾ ಜಯಿಸಿದ 103 ವರ್ಷದ ವೃದ್ದ, ಪಂಜಾಬ್ ಮೂಲದ ನವಜಾತ ಶಿಶು!

ಮಹಾರಾಷ್ಟ್ರದ ಪಲ್ಗ್ಹರ್ ಮೂಲದ 103 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪಲ್ಗ್ಹರ್: ಮಹಾರಾಷ್ಟ್ರದ ಪಲ್ಗ್ಹರ್ ಮೂಲದ 103 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇಲ್ಲಿನ ವೀರೇಂದ್ರ ನಗರ ಪ್ರದೇಶದ ಮೂಲದವರಾದ ಶಮರಾವ್ ಇಂಗಳೆ ಅವರನ್ನು ಸೋಂಕಿನ ಕಾರಣ ಪಲ್ಗ್ಹರ್ ನ ಗ್ರಾಮೀಣ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗದಿಂದ ಚೇತರಿಸಿಕೊಂಡ ನಂತರ ಅವರನ್ನು ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ. 

https://imasdk.googleapis.com/js/core/bridge3.455.0_en.html#goog_1128022454

https://imasdk.googleapis.com/js/core/bridge3.455.0_en.html#goog_1128022457

https://imasdk.googleapis.com/js/core/bridge3.455.0_en.html#goog_1128022460

ಆಸ್ಪತ್ರೆಯ ವೈದ್ಯರ ಪ್ರಕಾರ, ವೃದ್ಧರು ತನಗೆ ಒದಗಿಸಿದ ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದರು. ಅಲ್ಲದೆ ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಸಹಕರಿಸಿದರು. ಅವರು ಶನಿವಾರ ನಗುಮುಖದೊಡನೆ ಆಸ್ಪತ್ರೆಯಿಂದ ಹೊರ ನಡೆದರು. 

ಪಲ್ಗ್ಹರ್  ಕಲೆಕ್ಟರ್ ಡಾ.ಮಣಿಕ್ ಗುರ್ಶಾರ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಅವರ ಡಿಸ್ಚಾರ್ಜ್ ಸಮಯದಲ್ಲಿ ಹೂವುಗಳನ್ನು ನೀಡಿ ಬೀಳ್ಕೊಟ್ಟರು. ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 95,682 ಕೊರೋನಾ ಪ್ರಕರಣಗಳು ಹಾಗೂ ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 95,682

ವೈರಸ್‌ನಿಂದ ಚೇತರಿಸಿಕೊಂಡ ಪಂಜಾಬ್‌ನ ನವಜಾತ ಶಿಶು

ಏಪ್ರಿಲ್ ಆರಂಭದಲ್ಲಿ, ಗುರ್ದೀಪ್ ಸಿಂಗ್ ಮತ್ತು ಅವರ ಪತ್ನಿ ಸಂದೀಪ್ ಕೌರ್ ಗಂಡು ಮಗುವಿಗೆ ಪೋಷಕರೆನಿಸಿಕೊಂಡರು. ಆದರೆ ಮಗು ಜನಿಸಿ ಕೇವಲ  20 ದಿನಗಳ ನಂತರ ಅವರ ಸಂತೋಷಕ್ಕೆಲ್ಲಾ ಅಂತ್ಯ ಹಾಡುವಂತೆ ಮಗುವಿಗೆ ಹೆಚ್ಚಿನ ಜ್ವರ ಮತ್ತು ರೋಗಗ್ರಸ್ತ ಸ್ಥಿತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂತು.

ಆ ವೇಳೆ ಮಗುವಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಪರಿಣಾಮ ಗುರ್ದೀಪ್ ತನ್ನ ಮಗುವನ್ನು ನೋಡಲೂ ಆಗಲಿಲ್ಲ. 

ಹತ್ತು ದಿನಗಳ ನಂತರ, ಶುಕ್ರವಾರ ಜಲಂಧರ್‌ನ ಪಂಜಾಬ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಪಿಮ್ಸ್) ನಿಂದ ಶಿಶುವನ್ನು ಡಿಸ್ಚಾರ್ಜ್ ಮಾಡಲಾಗಿದ್ದು  ಆ ಸಮಯದಲ್ಲಿ ಮಗುವಿನ ತಂದೆ ಗುರ್ದೀಪ್, “ದೇವರು ನಮ್ಮ ಪ್ರಾರ್ಥನೆಯನ್ನು ಕೇಳಿದನೆಂದು ತೋರುತ್ತದೆ” ಎಂದು ಹೇಳಿದರು.

ಮಗುವಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದಾಗ ಕುಟುಂಬ ಆಘಾತವನ್ನು ಅನುಭವಿಸಿದೆ. ಆರ್‌ಟಿ-ಪಿಸಿಆರ್ ಸೇರಿದಂತೆ ಎಲ್ಲಾ ವೈದ್ಯಕೀಯ ಪರೀಕ್ಷೆಗಳ ಮೂಲಕ ಪರೀಕ್ಷಿಸಿದ ನಂತರ ಶಿಶುವನ್ನು ಜಲಂಧರ್‌ನ ಪಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಮಗನನ್ನು ಮತ್ತೊಮ್ಮೆ ತನ್ನ ಮಡಿಲಲ್ಲಿ ಮಲಗಿಸಿಕೊಂಡ ತಾಯಿಯ ಸಂತಸಕ್ಕೆ ಮಿತಿ ಇಲ್ಲ.

“ದೇವರ ಅನುಗ್ರಹದಿಂದ, ನನ್ನ ಮೊಮ್ಮಗ ಮನೆಗೆ ಮರಳಿದ್ದಾನೆ. ವೈದ್ಯರು ಅವನನ್ನು ಚೆನ್ನಾಗಿ ನೋಡಿಕೊಂಡರು” ಎಂದು ಶಿಶುವಿನ ಅಜ್ಜಿ ಕುಲ್ವಿಂದರ್ ಕೌರ್ ಹೇಳಿದರು. “ನಾವು ಮಗುವನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದೆವು. ಶಿಶುವೊಂದು ತುಂಬಾ ದೊಡ್ಡ ನೋವಿನಿಂದ ಬಳಲುತ್ತಿದ್ದದ್ದು ಕಾಣುವುದುಕಷ್ಟಕರವಾಗಿತ್ತು” ಎಂದು ಪಿಮ್ಸ್ ನರ್ಸ್ ನರ್ಬಿ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *