ಕೊರೋನಾ ಸಂಕಷ್ಟದ ಸಮಯದಲ್ಲಿ ಆತಂಕ: ನಿಭಾಯಿಸುವುದು ಹೇಗೆ?

ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ ದುಸ್ಥಿತಿ, ಕೆಲಸ ಕಳೆದುಕೊಳ್ಳುವ ಅಥವಾ ಇನ್ನು ಕೆಲವರು ಕೆಲಸ ಕಳೆದುಕೊಂಡು ಭವಿಷ್ಯ ಏನಾಗುತ್ತದೋ ಎಂಬ ಭೀತಿಯಲ್ಲಿ ಹೀಗೆ ಹತ್ತಾರು ಸಮಸ್ಯೆ ಇತ್ತೀಚೆಗೆ ಜನರನ್ನು ಕಾಡುತ್ತಿವೆ.

Representational image

ಬೆಂಗಳೂರು: ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ ದುಸ್ಥಿತಿ, ಕೆಲಸ ಕಳೆದುಕೊಳ್ಳುವ ಅಥವಾ ಇನ್ನು ಕೆಲವರು ಕೆಲಸ ಕಳೆದುಕೊಂಡು ಭವಿಷ್ಯ ಏನಾಗುತ್ತದೋ ಎಂಬ ಭೀತಿಯಲ್ಲಿ ಹೀಗೆ ಹತ್ತಾರು ಸಮಸ್ಯೆ ಇತ್ತೀಚೆಗೆ ಜನರನ್ನು ಕಾಡುತ್ತಿವೆ. ಜನರಲ್ಲಿ ಆತಂಕ ಬಂದಾಗ ಮನಸ್ಸಿನಲ್ಲಿ ಋಣಾತ್ಮಕ ಆಲೋಚನೆಗಳು ಬರುವುದು ಮತ್ತು ಅದು ಹೆಚ್ಚಾಗುವುದು ಸಾಮಾನ್ಯ.

ಈ ಸಮಯದಲ್ಲಿ ಕೆಲಸ ಮಾಡಲು ಮನಸ್ಸಿರುವುದಿಲ್ಲ, ಅಥವಾ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಈ ಕೊರೋನಾ ಸಮಯದಲ್ಲಿ ಆಗುತ್ತಿರುವ ಆತಂಕಗಳನ್ನು ನಿವಾರಿಸುವುದು, ಸಮಯ, ಪರಿಸ್ಥಿತಿ ಜೊತೆ ಹೊಂದಿಕೊಳ್ಳುವುದು ಹೇಗೆ ಎಂಬುದಕ್ಕೆ ಕೆಲವು ಸಲಹೆಗಳು ಇಲ್ಲಿವೆ.

ನಿಮ್ಮಲ್ಲಿ ಆತಂಕ ಹೆಚ್ಚಿಸುವ ವಿಷಯಗಳೇನು ಎಂದು ತಿಳಿದುಕೊಳ್ಳಿ: ವಿವಿಧ ಪ್ರಚೋದಕಗಳನ್ನು ಮತ್ತು ಅವುಗಳೊಂದಿಗೆ ಸಂಯೋಜಿತವಾಗಿರುವ ಆಲೋಚನಾ ವಿಷಯಗಳೇನು ಎಂದು ತಿಳಿದುಕೊಳ್ಳಿ. ಆಲೋಚನೆ, ಭಾವನೆ ಮತ್ತು ನಡವಳಿಕೆಯ ನಡುವಿನ ಸಂಬಂಧವನ್ನು ಅರ್ಥಮಾಡಿಕೊಳ್ಳಲು ನಿಮ್ಮ ಆಲೋಚನೆಗಳನ್ನು ಪ್ರತಿದಿನ ಸ್ವಲ್ಪ ಸಮಯ ಮನನ ಮಾಡಿಕೊಳ್ಳಿ.ಪ್ರತಿಯೊಂದು ಪ್ರಚೋದಕ ಅಥವಾ ಆಲೋಚನಾ ಮಾದರಿಯನ್ನು ನಿಮ್ಮಲ್ಲಿ ಹೊರಹೊಮ್ಮುವ ಭಯ / ಆತಂಕದ ಅನುಗುಣವಾದ ಮಟ್ಟದೊಂದಿಗೆ ಗುರುತಿಸಿಕೊಂಡು ಕ್ರಮೇಣ ಇವುಗಳನ್ನು ನಿವಾರಿಸಲು ವಿಧಾನಗಳನ್ನು ರೂಪಿಸಲು ಪ್ರಯತ್ನಿಸಿ.

ವ್ಯಾಕುಲತೆ ಮತ್ತು ವಿಶ್ರಾಂತಿ ವ್ಯಾಯಾಮದ ಸಹಾಯದಿಂದ ಸ್ಪಷ್ಟತೆಯನ್ನು ಕಂಡುಹಿಡಿಯುವುದು: ಬರೆಯುವುದು, ನಿಮ್ಮಷ್ಟಕ್ಕೆ ಜೋರಾಗಿ ಮಾತನಾಡುವುದು, ಪ್ರೀತಿಪಾತ್ರರು ಮತ್ತು ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತನಾಡುವುದು, ಚಿಕಿತ್ಸಕರೊಂದಿಗೆ ಮಾತನಾಡುವುದರಿಂದ ನಿಮ್ಮ ಆಲೋಚನೆಗಳ ಬಗ್ಗೆ ಸ್ಪಷ್ಟತೆ ಪಡೆಯಬಹುದು.

ಆತಂಕ ಉಂಟುಮಾಡುವ ವಿಷಯಗಳನ್ನು ನಿಧಾನವಾಗಿ ತಟಸ್ಥ ಅಥವಾ ಸಕಾರಾತ್ಮಕ ದೃಷ್ಟಿಕೋನಕ್ಕೆ ಬದಲಾಯಿಸಿ. ಭಯವು ವಿಪರೀತವಾದಾಗ, ಆಲೋಚನೆಗಳ ನಕಾರಾತ್ಮಕ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ಆಗ ವಿಶ್ರಾಂತಿ ಪಡೆಯುವುದು, ವ್ಯಾಯಾಮ ಮಾಡುವುದು, ಯೋಗ ಮಾಡುವುದು, ಧ್ಯಾನ ಮಾಡುವುದು ಇತ್ಯಾದಿಗಳನ್ನು ಮಾಡಿ.

ಸಮುದಾಯದ ಬೆಂಬಲವನ್ನು ಹುಡುಕುವುದು: ನಿಮ್ಮ ಅನುಭವಗಳನ್ನು ಚರ್ಚಿಸಲು ಮತ್ತು ಪರಸ್ಪರ ನಿಭಾಯಿಸುವ ತಂತ್ರಗಳನ್ನು ಹಂಚಿಕೊಳ್ಳಲು ಸಮಾನ ಮನಸ್ಕ ಗುಂಪನ್ನು ರಚಿಸಿ. ಕೆಲವೊಮ್ಮೆ ಯಾರೊಂದಿಗಾದರೂ ಮಾತನಾಡುವುದು ಮತ್ತು ನೀವು ಅನುಭವಿಸುತ್ತಿರುವುದನ್ನು ವಿವರವಾಗಿ ವಿವರಿಸುವುದರಿಂದ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪ್ರಚೋದಿಸುವ ವಿಷಯಗಳನ್ನು ನಿರ್ವಹಿಸುವ ಕಲೆ ಸಿದ್ದಿಸಿಕೊಳ್ಳಿ: ಸುದ್ದಿ ವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡುವ ವಿಷಯಗಳಿರುತ್ತವೆ. ಭಯವನ್ನು ಹುಟ್ಟಿಸುವ, ಪ್ರಚೋದಿಸುವ ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಿಂದ ಪ್ರಜ್ಞಾಪೂರ್ವಕವಾಗಿ ದೂರವಿರಲು ಪ್ರಯತ್ನಿಸಿ. ವಿಶ್ವಾಸಾರ್ಹ ಸುದ್ದಿ ಮೂಲಗಳನ್ನು ದಿನಕ್ಕೆ ಒಂದೆರಡು ಬಾರಿ ಪರಿಶೀಲಿಸಿ.

ನಿಮ್ಮ ದಿನಚರಿ ನಿಗದಿಪಡಿಸಿಕೊಳ್ಳಿ: ನಿಮ್ಮ ಗಮನ ಕೇಂದ್ರೀಕರಿಸಲು, ಏಕಾಗ್ರತೆ ಬರಲು, ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಾಯ ಮಾಡುವಂತಹ ಚಟುವಟಿಕೆಗಳನ್ನು ಮಾಡಲು ಹೆಚ್ಚಿನ ಸಮಯವನ್ನು ಕಳೆಯಿರಿ. ಚಿತ್ರಕಲೆ, ಕಸೂತಿ, ಮನೆಯಲ್ಲಿ ಸದಸ್ಯರೆಲ್ಲರೂ ಕೂಡಿ ಸಾಂಪ್ರದಾಯಿಕ ಆಟಗಳನ್ನು ಆಡುವುದು, ಸಾಂಪ್ರದಾಯಿಕ ಅಡುಗೆಯನ್ನು ಸರಳವಾಗಿ ಮಾಡುವುದು, ವ್ಯಾಯಾಮ ಮತ್ತು ಧ್ಯಾನ, ಒತ್ತಡ ಮತ್ತು ಮಾನಸಿಕ ಆಯಾಸವನ್ನು ನಿವಾರಿಸಲು ಯೋಗ, ನೃತ್ಯ, ಸಂಗೀತದ ಮೊರೆ ಹೋಗಿ.

(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *