ಕೊರೋನಾ ಸಂಕಷ್ಟದ ಸಮಯದಲ್ಲಿ ಆತಂಕ: ನಿಭಾಯಿಸುವುದು ಹೇಗೆ?

ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ ದುಸ್ಥಿತಿ, ಕೆಲಸ ಕಳೆದುಕೊಳ್ಳುವ ಅಥವಾ ಇನ್ನು ಕೆಲವರು ಕೆಲಸ ಕಳೆದುಕೊಂಡು ಭವಿಷ್ಯ ಏನಾಗುತ್ತದೋ ಎಂಬ ಭೀತಿಯಲ್ಲಿ ಹೀಗೆ ಹತ್ತಾರು ಸಮಸ್ಯೆ ಇತ್ತೀಚೆಗೆ ಜನರನ್ನು ಕಾಡುತ್ತಿವೆ.

Representational image

ಬೆಂಗಳೂರು: ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ ದುಸ್ಥಿತಿ, ಕೆಲಸ ಕಳೆದುಕೊಳ್ಳುವ ಅಥವಾ ಇನ್ನು ಕೆಲವರು ಕೆಲಸ ಕಳೆದುಕೊಂಡು ಭವಿಷ್ಯ ಏನಾಗುತ್ತದೋ ಎಂಬ ಭೀತಿಯಲ್ಲಿ ಹೀಗೆ ಹತ್ತಾರು ಸಮಸ್ಯೆ ಇತ್ತೀಚೆಗೆ ಜನರನ್ನು ಕಾಡುತ್ತಿವೆ. ಜನರಲ್ಲಿ ಆತಂಕ ಬಂದಾಗ ಮನಸ್ಸಿನಲ್ಲಿ ಋಣಾತ್ಮಕ ಆಲೋಚನೆಗಳು ಬರುವುದು ಮತ್ತು ಅದು ಹೆಚ್ಚಾಗುವುದು ಸಾಮಾನ್ಯ.

ಈ ಸಮಯದಲ್ಲಿ ಕೆಲಸ ಮಾಡಲು ಮನಸ್ಸಿರುವುದಿಲ್ಲ, ಅಥವಾ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಈ ಕೊರೋನಾ ಸಮಯದಲ್ಲಿ ಆಗುತ್ತಿರುವ ಆತಂಕಗಳನ್ನು ನಿವಾರಿಸುವುದು, ಸಮಯ, ಪರಿಸ್ಥಿತಿ ಜೊತೆ ಹೊಂದಿಕೊಳ್ಳುವುದು ಹೇಗೆ ಎಂಬುದಕ್ಕೆ ಕೆಲವು ಸಲಹೆಗಳು ಇಲ್ಲಿವೆ.

ನಿಮ್ಮಲ್ಲಿ ಆತಂಕ ಹೆಚ್ಚಿಸುವ ವಿಷಯಗಳೇನು ಎಂದು ತಿಳಿದುಕೊಳ್ಳಿ: ವಿವಿಧ ಪ್ರಚೋದಕಗಳನ್ನು ಮತ್ತು ಅವುಗಳೊಂದಿಗೆ ಸಂಯೋಜಿತವಾಗಿರುವ ಆಲೋಚನಾ ವಿಷಯಗಳೇನು ಎಂದು ತಿಳಿದುಕೊಳ್ಳಿ. ಆಲೋಚನೆ, ಭಾವನೆ ಮತ್ತು ನಡವಳಿಕೆಯ ನಡುವಿನ ಸಂಬಂಧವನ್ನು ಅರ್ಥಮಾಡಿಕೊಳ್ಳಲು ನಿಮ್ಮ ಆಲೋಚನೆಗಳನ್ನು ಪ್ರತಿದಿನ ಸ್ವಲ್ಪ ಸಮಯ ಮನನ ಮಾಡಿಕೊಳ್ಳಿ.ಪ್ರತಿಯೊಂದು ಪ್ರಚೋದಕ ಅಥವಾ ಆಲೋಚನಾ ಮಾದರಿಯನ್ನು ನಿಮ್ಮಲ್ಲಿ ಹೊರಹೊಮ್ಮುವ ಭಯ / ಆತಂಕದ ಅನುಗುಣವಾದ ಮಟ್ಟದೊಂದಿಗೆ ಗುರುತಿಸಿಕೊಂಡು ಕ್ರಮೇಣ ಇವುಗಳನ್ನು ನಿವಾರಿಸಲು ವಿಧಾನಗಳನ್ನು ರೂಪಿಸಲು ಪ್ರಯತ್ನಿಸಿ.

ವ್ಯಾಕುಲತೆ ಮತ್ತು ವಿಶ್ರಾಂತಿ ವ್ಯಾಯಾಮದ ಸಹಾಯದಿಂದ ಸ್ಪಷ್ಟತೆಯನ್ನು ಕಂಡುಹಿಡಿಯುವುದು: ಬರೆಯುವುದು, ನಿಮ್ಮಷ್ಟಕ್ಕೆ ಜೋರಾಗಿ ಮಾತನಾಡುವುದು, ಪ್ರೀತಿಪಾತ್ರರು ಮತ್ತು ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತನಾಡುವುದು, ಚಿಕಿತ್ಸಕರೊಂದಿಗೆ ಮಾತನಾಡುವುದರಿಂದ ನಿಮ್ಮ ಆಲೋಚನೆಗಳ ಬಗ್ಗೆ ಸ್ಪಷ್ಟತೆ ಪಡೆಯಬಹುದು.

ಆತಂಕ ಉಂಟುಮಾಡುವ ವಿಷಯಗಳನ್ನು ನಿಧಾನವಾಗಿ ತಟಸ್ಥ ಅಥವಾ ಸಕಾರಾತ್ಮಕ ದೃಷ್ಟಿಕೋನಕ್ಕೆ ಬದಲಾಯಿಸಿ. ಭಯವು ವಿಪರೀತವಾದಾಗ, ಆಲೋಚನೆಗಳ ನಕಾರಾತ್ಮಕ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ಆಗ ವಿಶ್ರಾಂತಿ ಪಡೆಯುವುದು, ವ್ಯಾಯಾಮ ಮಾಡುವುದು, ಯೋಗ ಮಾಡುವುದು, ಧ್ಯಾನ ಮಾಡುವುದು ಇತ್ಯಾದಿಗಳನ್ನು ಮಾಡಿ.

ಸಮುದಾಯದ ಬೆಂಬಲವನ್ನು ಹುಡುಕುವುದು: ನಿಮ್ಮ ಅನುಭವಗಳನ್ನು ಚರ್ಚಿಸಲು ಮತ್ತು ಪರಸ್ಪರ ನಿಭಾಯಿಸುವ ತಂತ್ರಗಳನ್ನು ಹಂಚಿಕೊಳ್ಳಲು ಸಮಾನ ಮನಸ್ಕ ಗುಂಪನ್ನು ರಚಿಸಿ. ಕೆಲವೊಮ್ಮೆ ಯಾರೊಂದಿಗಾದರೂ ಮಾತನಾಡುವುದು ಮತ್ತು ನೀವು ಅನುಭವಿಸುತ್ತಿರುವುದನ್ನು ವಿವರವಾಗಿ ವಿವರಿಸುವುದರಿಂದ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪ್ರಚೋದಿಸುವ ವಿಷಯಗಳನ್ನು ನಿರ್ವಹಿಸುವ ಕಲೆ ಸಿದ್ದಿಸಿಕೊಳ್ಳಿ: ಸುದ್ದಿ ವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡುವ ವಿಷಯಗಳಿರುತ್ತವೆ. ಭಯವನ್ನು ಹುಟ್ಟಿಸುವ, ಪ್ರಚೋದಿಸುವ ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಿಂದ ಪ್ರಜ್ಞಾಪೂರ್ವಕವಾಗಿ ದೂರವಿರಲು ಪ್ರಯತ್ನಿಸಿ. ವಿಶ್ವಾಸಾರ್ಹ ಸುದ್ದಿ ಮೂಲಗಳನ್ನು ದಿನಕ್ಕೆ ಒಂದೆರಡು ಬಾರಿ ಪರಿಶೀಲಿಸಿ.

ನಿಮ್ಮ ದಿನಚರಿ ನಿಗದಿಪಡಿಸಿಕೊಳ್ಳಿ: ನಿಮ್ಮ ಗಮನ ಕೇಂದ್ರೀಕರಿಸಲು, ಏಕಾಗ್ರತೆ ಬರಲು, ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಾಯ ಮಾಡುವಂತಹ ಚಟುವಟಿಕೆಗಳನ್ನು ಮಾಡಲು ಹೆಚ್ಚಿನ ಸಮಯವನ್ನು ಕಳೆಯಿರಿ. ಚಿತ್ರಕಲೆ, ಕಸೂತಿ, ಮನೆಯಲ್ಲಿ ಸದಸ್ಯರೆಲ್ಲರೂ ಕೂಡಿ ಸಾಂಪ್ರದಾಯಿಕ ಆಟಗಳನ್ನು ಆಡುವುದು, ಸಾಂಪ್ರದಾಯಿಕ ಅಡುಗೆಯನ್ನು ಸರಳವಾಗಿ ಮಾಡುವುದು, ವ್ಯಾಯಾಮ ಮತ್ತು ಧ್ಯಾನ, ಒತ್ತಡ ಮತ್ತು ಮಾನಸಿಕ ಆಯಾಸವನ್ನು ನಿವಾರಿಸಲು ಯೋಗ, ನೃತ್ಯ, ಸಂಗೀತದ ಮೊರೆ ಹೋಗಿ.

(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *