

ಶಿರಸಿ ಎಂ.ಇ.ಎಸ್. ಕಾಲೇಜಿನ ನಿವೃತ್ತ ಉಪನ್ಯಾಸಕ ಎಸ್. ವಿ.ಹೆಗಡೆ ಇಂದು ಸಾಗರದಲ್ಲಿ ನಿಧನರಾದರು. ಸಿದ್ಧಾಪುರದ ಪ್ರತಿಷ್ಥಿತ ದೊಡ್ಮನೆ ಕುಟುಂಬದ ಸದಸ್ಯರಾಗಿದ್ದ ಎಸ್.ವಿ.ಹೆಗಡೆ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

ರಾಮಚಂದ್ರ ಗಣೇಶ ಭಟ್ಟ
ಸಿದ್ದಾಪುರ: ತಾಲೂಕಿನ ಹೆಗ್ಗಾರಹಳ್ಳಿಯ ನಿವಾಸಿ ಪುರೋಹಿತ ರಾಮಚಂದ್ರ ಗಣೇಶ ಭಟ್ಟ (78) ಅವರು ಶನಿವಾರ ನಿಧನ ಹೊಂದಿದರು.
ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಜೋತಿಷಿ, ಯಕ್ಷಗಾನ ಸಂಘಟಕ ಮನೋಜ ಭಟ್ಟ ಹಾಗೂ ಅಪಾರ ಬಂಧು- ಬಳಗ ಹಾಗೂ ಶಿಷ್ಯರು ಇದ್ದಾರೆ.
ರಾಮಚಂದ್ರ ಭಟ್ಟ ಅವರು ಸಿದ್ದಾಪುರ ಪಟ್ಟಣದ ಕೆಇಬಿ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು. ಯಕ್ಷಗಾನದ ಹವ್ಯಾಸಿ ಕಲಾವಿದರಾಗಿಯೂ ಪಾತ್ರ ನಿರ್ವಹಣೆ ಮಾಡುತ್ತಿದ್ದರು. ಕೊಳಗಿ-ಶಿರಳಗಿ ಮೇಳದಲ್ಲಿ ಸಕ್ರಿಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ಪೋಷಕ ಪಾತ್ರಗಳಾದ ನಾರದ, ಗರುಡ ಮುಂತಾದ ಪಾತ್ರ ನಿರ್ವಹಣೆಯಲ್ಲಿ ಹೆಸರುವಾಸಿಯಾಗಿದ್ದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
