

ಚಿಕ್ಕಮಗಳೂರು: ಕೊರೋನಾ ಸೋಂಕಿತ ಅಣ್ಣ ಆಸ್ಪತ್ರೆಯಿಂದ ಮನೆಗೆ ಬಂದಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದ ತಮ್ಮ!
ಕೊರೋನಾ ಮಹಾಮಾರಿ ಜನರನ್ನು ಕೊಲ್ಲುತ್ತಿದ್ದರೆ ಇತ್ತ ಸಂಬಂಧಗಳಲ್ಲೂ ಬಿರುಕು ಮೂಡಿಸುತ್ತಿದೆ. ಒಂದೆಡೆ ಸೋಂಕಿತ ತಾಯಿಯನ್ನು ಮಗ ಹೊರಗೆ ಹಾಕಿದ್ದರೆ, ಇಲ್ಲೊಬ್ಬ ತಮ್ಮ ಅಣ್ಣನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.


ಚಿಕ್ಕಮಗಳೂರು: ಕೊರೋನಾ ಮಹಾಮಾರಿ ಜನರನ್ನು ಕೊಲ್ಲುತ್ತಿದ್ದರೆ ಇತ್ತ ಸಂಬಂಧಗಳಲ್ಲೂ ಬಿರುಕು ಮೂಡಿಸುತ್ತಿದೆ. ಒಂದೆಡೆ ಸೋಂಕಿತ ತಾಯಿಯನ್ನು ಮಗ ಹೊರಗೆ ಹಾಕಿದ್ದರೆ, ಇಲ್ಲೊಬ್ಬ ತಮ್ಮ ಅಣ್ಣನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಚಿಕ್ಕಮಗಳೂರಿನ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. 45 ವರ್ಷದ ಮಹಾವೀರ್ ನನ್ನು ಸಹೋದರ ಪಾರ್ಶ್ವನಾಥ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಕಳೆದ ವಾರ ಮಹಾವೀರ್ ಸೋಂಕಿಗೆ ತುತ್ತಾಗಿದ್ದು ಮೂಡಿಗೆರೆ ಸರ್ಕಾರಿ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಿಲ್ಲ ಎಂದುಕೊಂಡು ಮಹಾವೀರ್ ಮನೆಗೆ ಹಿಂದಿರುಗಿದ್ದರು. ಇನ್ನು ಸೋಂಕಿತ ಅಣ್ಣ ಚಿಕಿತ್ಸೆ ಪಡೆಯದೇ ಮನೆಗೆ ಬಂದಿರುವುದರ ಸಂಬಂಧ ಇಬ್ಬರ ನಡುವೆ ಜಗಳ ನಡೆದಿದೆ.
ಕೊನೆಗೆ ಪಾರ್ಶ್ವನಾಥ್ ಕೋಪಗೊಂಡ ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಅಣ್ಣ ತಮ್ಮನ ಜಗಳ ಕುರಿತಾಗಿ ತಾಯಿ ಅಕ್ಕಪಕ್ಕದ ಮನೆಯವರಿಗೆ ಹೇಳಿದರೂ ತಮಗೂ ಸೋಂಕು ಹರಡಬಹುದು ಎಂದು ಹೆದರಿ ಯಾರು ಬರಲಿಲ್ಲ. ಇನ್ನು ಪ್ರಕರಣ ಸಂಬಂಧ ಪೊಲೀಸರು ಆರೋಪಿ ಪಾರ್ಶ್ವನಾಥನನ್ನು ಬಂಧಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
