Hrs poem -ನಿರೀಕ್ಷೆ

ಗೋಡೆಗಳೇ ಇಲ್ಲದ ದೇವರೊಬ್ಬ ಉದಯಿಸಲಿ
ತುಂಬು ಹುಣ್ಣಿಮೆಯ ತಂಪು ಚಂದಿರನಂತೆ
ಕಂಡ ಕಣ್ಣಲಿ ಕನಸಿನ ಹೂಟೆಯ ಮೀಟಲಿ
ಗುಡಿಸಿಲಿನ ಅಂಗಳದ ಅಂಬುಮಲ್ಲಿಗೆಗೂ
ಅರಮನೆಯ ಕಳಸಕ್ಕೂ ಒಂದೇ ಬೆಳಕ ಚೆಲ್ಲಲಿ

ದೇವಾ! ನೀನು ಸೆರೆಮನೆಯ ಕೈದಿಗಳ ಕಣ್ಣಲ್ಲಿಳಿದು
ಕಣ್ಣೀರ ಕರೆ, ಕದಡಿದ ಮನಸ್ಸುಗಳು ತಿಳಿಗೊಳ್ಳಲಿ
ಅನಾಥ ಮಕ್ಕಳ ಕೈಯಲ್ಲಾಡುವ ಆಟಿಕೆಯಾಗು
ಅವು ನಿನಗೆ ಕೀಲಿಕೊಟ್ಟು ಕಿಲಕಿಲನೆ ಕುಣಿಯಲಿ
ಬಿಗಿದ ಮನದಿ ಕಚಗುಳಿಯಿಟ್ಟು ಮನಬಿಚ್ಚಿ ನಗಲಿ

ಏಸುವಿನ ಕರುಣೆಯನ್ನೂ ನೋವನ್ನೂ ರಕ್ತವನ್ನೂ
ಪೈಗಂಬರರ ಸಾಧುಸಂತರ ದರ್ವೇಶಿಗಳ
ಹಳೆಯ ಬೇರುಗಳಲ್ಲುಳಿದ ಅವಮಾನಗಳನ್ನು ನುಂಗಿ ಕಾಮನಬಿಲ್ಲಿನ ಬಣ್ಣದ ಹೂವಂತೆ ಮಾತು ಹಗುರಾಗಲಿ
ಅವು
ಬುದ್ಧನ ಮೌನದ ಮುಗುಳು ನಗೆಯನ್ನು ಮರೆಯದೆ ಪೋಣಿಸಿಕೊಳ್ಳಲಿ

ಕುವೆಂಪು ಟಾಲಸ್ಟಾಯರ ರವೀಂದ್ರರ ಧ್ಯಾನದಲ್ಲಿ
ಶೇಕ್ಷಪೀಯರನ ರಾಜರ ರಕ್ತದಾಹವನಿಂಗಿಸು
ಗೊಮ್ಮಟನ ನಿರ್ವಾಣದಲ್ಲಿ ದಾಯಾದಿಯ ದಿಕ್ಕರಿಸು
ಗಾಂಧಿಯ ನಡಿಗೆಯಲಿ ಬಡವನುದ್ಧರಿಸು
ದಿನವಿಡೀ ಹೊಲಮನೆಯಲ್ಲಿ ಗೇದು ದಣಿದು
ಮಲಗಿದ ರೈತನಿಗೆ ನಡುಹಗಲಲ್ಲಿ ಮರದ ನೆರಳಾಗು….,

ನಂಬಿದ ದೇವರ ನೆಟ್ಟು ಬೆಳೆಸಿದ ದೇವನವನು
ನಿನ್ನ ನೆರಳಲ್ಲಿ ಸೊಂಪು ನಿದ್ದೆ ಆವರಿಸಲಿ
ಹಸಿದ ಹೊಟ್ಟೆಯನ್ನರಿತು ಬೆಳೆಸಾಗಲಿ
ಬೆಳಸು ಬಾಡದಂತೆ ಮಳೆರಾಯನಿಗೆ
ಕನಸಾಗಲಿ
ದುಡಿವ ಜೀವಗಳ ತುಂಬಿದ ಹೊಟ್ಟೆ ನೆಮ್ಮದಿಯ
ಕರೆದು ನಿದ್ರೆ ಕಣ್ತುಂಬಿಕೊಳ್ಳಲಿ

ಹೆಚ್. ಆರ್. ಸುಜಾತಾ
೧೮.೫.೧೯

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *