ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ- & ಸಿದ್ದಾಪುರದ ಎರಡು ಸಾವುಗಳು

ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ-

ಸಿದ್ದಾಪುರ
ಕರೊನಾ ಲಾಕ್ ಡೌನ್ ನಿಯಮಾವಳಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗ್ರಾಮದಲ್ಲಿ ಯಾವುದೇ ಅಂಗಡಿಯನ್ನು ಬಾಗಿಲು ತೆಗೆಯುವ ಹಾಗಿಲ್ಲ. ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವುದಕ್ಕೆ ಈಗಾಗಲೇ ಗ್ರಾಪಂನಿಂದ ಅನುಮತಿ ನೀಡಲಾಗಿದೆ. ಅನಾವಶ್ಯಕವಾಗಿ ಯಾರೂ ಓಡಾಡದೇ ಕರೊನಾ ನಿಯಂತ್ರಿಸುವುದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಗ್ರಾಪಂ ನೋಡಲ್ ಅಧಿಕಾರಿ ತಾಲೂಕು ಪಶುಸಂಗೋಪನಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ.ಶ್ರೇಯಸ್ ರಾಜ್ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂನಲ್ಲಿ ನಡೆದ ಕೋವಿಡ್-19ರ ಮುಂಜಾಗೃತಾ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಪಂ ಪಿಡಿಓ ರಾಜೇಶ ನಾಯ್ಕ ಮಾತನಾಡಿ ಗ್ರಾಪಂ ವ್ಯಾಪ್ತಿಯ ಎಲ್ಲ ಆಶಾ ಕಾರ್ಯಕರ್ತರು ಊರಿಗೆ ಹೊರಗಿನಿಂದ ಬಂದವರನ್ನು ಗುರುತಿಸಿ ಅವರ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು. ಯಾವುದೇ ಮನೆಯಲ್ಲಿ ಕರೊನಾ ಪಾಸಿಟಿವ್ ಇದ್ದಲ್ಲಿ ಅವರ ಮನೆಯವರು ಯಾರೂ ಹೊರಗೆ ಓಡಾಡದಂತೆ ನೋ ಡಿಕೊಳ್ಳಬೇಕು. ಅವರಿಗೆ ಅವಶ್ಯ ಇರುವ ಔಷಧಿಗಳನ್ನು ಪೂರೈಸಬೇಕು. ಅವಶ್ಯಕ ವಸ್ತು ಹಾಗೂ ತರಕಾರಿಗಳನ್ನು ಮನೆ ಮನೆಗೆ ನೀಡುವುದಕ್ಕೆ ಈಗಾಗಲೇ ಅವಕಾಶ ನೀಡಲಾಗಿದೆ. ಗ್ರಾಪಂನಿಂದ ಅವಶ್ಯಕ ವಸ್ತು ಹಾಗೂ ತರಕಾರಿಗಳನ್ನು ಮಾರಾಟ ಮಾಡುವುದಕ್ಕೆ ಅನುಮತಿ ಪಡೆದ ವಾಹನ ಮಾಲೀಕರು ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಮಾಹಿತಿ ಬಂದಿದ್ದು ಅವರನ್ನು ವಿಚಾರಿಸಿ ಕ್ರಮ ಕೈಗೊಳ್ಳಲಾಗವುದು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ವಿದ್ಯಾ ಪ್ರಕಾಶ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಗ್ರಾಪಂ ಸದಸ್ಯರಾದ ಆರ್.ಕೆ.ನಾಯ್ಕ, ಸೀತಾರಾಮ ಶೇಟ್, ಗ್ರಾಮಲೆಕ್ಕಾಧಿಕಾರಿ ಹೇಮಾವತಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಹೆಲ್ಪ ಡೆಸ್ಕ ಪ್ರತಿನಿಧಿಗಳು ಇದ್ದರು. ಕಾರ್ಯದರ್ಶಿ ಎಸ್.ಎಸ್.ಸಾಗರೇಕರ್ ಕಾರ್ಯಕ್ರಮ ನಿರ್ವಹಿಸಿದರು.

ನಿಧನ-ನಾರಾಯಣ ತಿಮ್ಮಪ್ಪ ನಾಯ್ಕ.
ಸಿದ್ದಾಪುರ: ತಾಲೂಕಿನ ನಿಡಗೋಡ ನಿವಾಸಿ ನಿವೃತ್ತ ಶಿಕ್ಷಕ ನಾರಾಯಣ ತಿಮ್ಮಪ್ಪ ನಾಯ್ಕ (72) ನಿಧನಹೊಂದಿದರು.
ಅವರಿಗೆ ಪತ್ನಿ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವಿದೆ.
ಎನ್.ಟಿ.ನಾಯ್ಕ ಗುರೂಜಿ ಎಂದೇ ಗುರುತಿಸಿಕೊಂಡಿದ್ದ ಅವರು ಹೆಗ್ಗೋಡಮನೆ ಹಾಗೂ ವಾಜಗದ್ದೆ ಸಹಿಪ್ರಾ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜನಮನ್ನಣೆಗಳಿಸಿದ್ದರು.

ಸಿದ್ಧಾಪುರದಲ್ಲಿ ಇಂದು ಕೋವಿಡ್ ದೃಢಪಟ್ಟವರ ಸಂಖ್ಯೆ 136

ಗುಣಮುಖರಾದವರು-98 ವಿವರ ಕೆಳಗಿನಂತಿದೆ.

ಸಿದ್ಧಾಪುರ ಎ.ಪಿ.ಎಂ.ಸಿ. ರಸ್ತೆಯಲ್ಲಿ ವಾಸಿಸುತಿದ್ದ ಭದ್ರಾಚಾರಿ ಯಾನೆ ಸನ್ಯಾಸಿ ಭದ್ರಯ್ಯ ಇಂದು ನಿಧನರಾದರು. ಸೇವಾ ಭಾರತ ಸಂಘಟನೆ ಅವರ ಶವ ಸಂಸ್ಕಾರವನ್ನು ವಿಧಿವತ್ತಾಗಿ ಪೂರೈಸಿದೆ.

ನಗರದ ಪಿಗ್ಮಿ ಸಂಗ್ರಹಕಾರ, ಎಲ್.ಐ.ಸಿ. ಪ್ರತಿನಿಧಿ ಶಿವಾನಂದ ಅನಂತ ಕಾಮತ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇವರಿಗೆ ಯಕೃತ್ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ಕಾಲ ಚಿಕಿತ್ಸೆ ನೀಡಲಾಗಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *