ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ- & ಸಿದ್ದಾಪುರದ ಎರಡು ಸಾವುಗಳು

ಕೋವಿಡ್ ಪೀಡಿತರ ಮನೆಯವರೂ ಹೊರ ಬರುವಂತಿಲ್ಲ-

ಸಿದ್ದಾಪುರ
ಕರೊನಾ ಲಾಕ್ ಡೌನ್ ನಿಯಮಾವಳಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗ್ರಾಮದಲ್ಲಿ ಯಾವುದೇ ಅಂಗಡಿಯನ್ನು ಬಾಗಿಲು ತೆಗೆಯುವ ಹಾಗಿಲ್ಲ. ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವುದಕ್ಕೆ ಈಗಾಗಲೇ ಗ್ರಾಪಂನಿಂದ ಅನುಮತಿ ನೀಡಲಾಗಿದೆ. ಅನಾವಶ್ಯಕವಾಗಿ ಯಾರೂ ಓಡಾಡದೇ ಕರೊನಾ ನಿಯಂತ್ರಿಸುವುದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಗ್ರಾಪಂ ನೋಡಲ್ ಅಧಿಕಾರಿ ತಾಲೂಕು ಪಶುಸಂಗೋಪನಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ.ಶ್ರೇಯಸ್ ರಾಜ್ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂನಲ್ಲಿ ನಡೆದ ಕೋವಿಡ್-19ರ ಮುಂಜಾಗೃತಾ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಪಂ ಪಿಡಿಓ ರಾಜೇಶ ನಾಯ್ಕ ಮಾತನಾಡಿ ಗ್ರಾಪಂ ವ್ಯಾಪ್ತಿಯ ಎಲ್ಲ ಆಶಾ ಕಾರ್ಯಕರ್ತರು ಊರಿಗೆ ಹೊರಗಿನಿಂದ ಬಂದವರನ್ನು ಗುರುತಿಸಿ ಅವರ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು. ಯಾವುದೇ ಮನೆಯಲ್ಲಿ ಕರೊನಾ ಪಾಸಿಟಿವ್ ಇದ್ದಲ್ಲಿ ಅವರ ಮನೆಯವರು ಯಾರೂ ಹೊರಗೆ ಓಡಾಡದಂತೆ ನೋ ಡಿಕೊಳ್ಳಬೇಕು. ಅವರಿಗೆ ಅವಶ್ಯ ಇರುವ ಔಷಧಿಗಳನ್ನು ಪೂರೈಸಬೇಕು. ಅವಶ್ಯಕ ವಸ್ತು ಹಾಗೂ ತರಕಾರಿಗಳನ್ನು ಮನೆ ಮನೆಗೆ ನೀಡುವುದಕ್ಕೆ ಈಗಾಗಲೇ ಅವಕಾಶ ನೀಡಲಾಗಿದೆ. ಗ್ರಾಪಂನಿಂದ ಅವಶ್ಯಕ ವಸ್ತು ಹಾಗೂ ತರಕಾರಿಗಳನ್ನು ಮಾರಾಟ ಮಾಡುವುದಕ್ಕೆ ಅನುಮತಿ ಪಡೆದ ವಾಹನ ಮಾಲೀಕರು ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಮಾಹಿತಿ ಬಂದಿದ್ದು ಅವರನ್ನು ವಿಚಾರಿಸಿ ಕ್ರಮ ಕೈಗೊಳ್ಳಲಾಗವುದು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ವಿದ್ಯಾ ಪ್ರಕಾಶ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಗ್ರಾಪಂ ಸದಸ್ಯರಾದ ಆರ್.ಕೆ.ನಾಯ್ಕ, ಸೀತಾರಾಮ ಶೇಟ್, ಗ್ರಾಮಲೆಕ್ಕಾಧಿಕಾರಿ ಹೇಮಾವತಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಹೆಲ್ಪ ಡೆಸ್ಕ ಪ್ರತಿನಿಧಿಗಳು ಇದ್ದರು. ಕಾರ್ಯದರ್ಶಿ ಎಸ್.ಎಸ್.ಸಾಗರೇಕರ್ ಕಾರ್ಯಕ್ರಮ ನಿರ್ವಹಿಸಿದರು.

ನಿಧನ-ನಾರಾಯಣ ತಿಮ್ಮಪ್ಪ ನಾಯ್ಕ.
ಸಿದ್ದಾಪುರ: ತಾಲೂಕಿನ ನಿಡಗೋಡ ನಿವಾಸಿ ನಿವೃತ್ತ ಶಿಕ್ಷಕ ನಾರಾಯಣ ತಿಮ್ಮಪ್ಪ ನಾಯ್ಕ (72) ನಿಧನಹೊಂದಿದರು.
ಅವರಿಗೆ ಪತ್ನಿ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವಿದೆ.
ಎನ್.ಟಿ.ನಾಯ್ಕ ಗುರೂಜಿ ಎಂದೇ ಗುರುತಿಸಿಕೊಂಡಿದ್ದ ಅವರು ಹೆಗ್ಗೋಡಮನೆ ಹಾಗೂ ವಾಜಗದ್ದೆ ಸಹಿಪ್ರಾ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜನಮನ್ನಣೆಗಳಿಸಿದ್ದರು.

ಸಿದ್ಧಾಪುರದಲ್ಲಿ ಇಂದು ಕೋವಿಡ್ ದೃಢಪಟ್ಟವರ ಸಂಖ್ಯೆ 136

ಗುಣಮುಖರಾದವರು-98 ವಿವರ ಕೆಳಗಿನಂತಿದೆ.

ಸಿದ್ಧಾಪುರ ಎ.ಪಿ.ಎಂ.ಸಿ. ರಸ್ತೆಯಲ್ಲಿ ವಾಸಿಸುತಿದ್ದ ಭದ್ರಾಚಾರಿ ಯಾನೆ ಸನ್ಯಾಸಿ ಭದ್ರಯ್ಯ ಇಂದು ನಿಧನರಾದರು. ಸೇವಾ ಭಾರತ ಸಂಘಟನೆ ಅವರ ಶವ ಸಂಸ್ಕಾರವನ್ನು ವಿಧಿವತ್ತಾಗಿ ಪೂರೈಸಿದೆ.

ನಗರದ ಪಿಗ್ಮಿ ಸಂಗ್ರಹಕಾರ, ಎಲ್.ಐ.ಸಿ. ಪ್ರತಿನಿಧಿ ಶಿವಾನಂದ ಅನಂತ ಕಾಮತ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇವರಿಗೆ ಯಕೃತ್ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ಕಾಲ ಚಿಕಿತ್ಸೆ ನೀಡಲಾಗಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *