

ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಸಾಮೆ ಹನುಮಂತ್ ನಾಯ್ಕ ರವಿವಾರ ನಿಧನರಾದರು. ಕಾಂಗ್ರೆಸ್ ಹಿಂದುಳಿದ ವರ್ಗ ಗಳ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಹನುಮಂತ ಮಾರ್ಯ ನಾಯ್ಕ ಸಾಮೆಯವರನ್ನು ಎರಡು ದಿವಸಗಳ ಕೆಳಗೆ ಕೋವಿಡ್ ಚಿಕಿತ್ಸೆಗೆ ಸಿದ್ದಾಪುರ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಮುತುವರ್ಜಿಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾಯಂಕಾಲದ ವೇಳೆ ಕೊನೆ ಉಸಿರೆಳೆದರು.

ತುಸು ಹುಂಬುತನ, ಧಾಡಸಿತನಗಳಿಂದಲೇ ಮುಖಂಡರಾಗಿ ಗ್ರಾ.ಪಂ., ಪ.ಪಂ. ಗಳ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹನುಮಂತ ನಾಯ್ಕ ಮಾಜಿ ಶಾಸಕ ದಿ.ಗೋಪಾಲ ಕಾನಡೆಯವರ ಸಹವರ್ತಿಯಾಗಿದ್ದರು.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಕಾಂಗ್ರೆಸ್ ನ ಪ್ರಮುಖರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಹನುಮಂತನಾಯ್ಕ ಜನಪರವಾಗಿ ಕೆಲಸ ಮಾಡುತ್ತ ಜನರ ವಿಶ್ವಾಸ ಗಳಿಸಿದ್ದರು.ಸ್ವಂತದ್ದಕ್ಕೆ ಏನನ್ನೂ ಮಾಡಿಕೊಳ್ಳದ ಹನುಮಂತ ನಾಯ್ಕ ಪಡೆದದ್ದರಲ್ಲಿ ಹೆಚ್ಚಿನದನ್ನು ಹಂಚಿ ಬರಿಗೈಯಲ್ಲಿ ರಾಜಕಾರಣ ಮಾಡುತ್ತಲೇ 50 ವರ್ಷ ಪ್ರಸ್ತುತರಾಗಿದ್ದುದು ಅವರ ಸಾಹಸ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
