ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ

ಹೊಸ ಆದೇಶದಂತೆ ಶಿರಸಿ ಉಪವಿಭಾಗದ ಸಿದ್ದಾಪುರ, ಯಲ್ಲಾಪುರ, ಶಿರಸಿ, ಮುಂಡಗೋಡು ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 7 ರ ವರೆಗೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮುಂಜಾನೆ 6 ರಿಂದ ಹತ್ತರ ವರೆಗೆ ಖರೀದಿಗೆ ಅವಕಾಶ ಉಳಿದ ದಿಗಳಲ್ಲಿ ಸಂಪೂರ್ಣ ಲಾಕ್ ಡೌನ್

ಸಿದ್ಧಾಪುರ- ನಾಟಿವೈದ್ಯ ಗೋವಿಂದ್ ನಾಯ್ಕ ಕರೋನಾಗೆ ಬಲಿ, ಸಂಪೂರ್ಣ ಲಾಕ್ ಡೌನ್ ನಡುವೆ ಕೋಳಿಮಾಂಸ ಮಾರುತಿದ್ದ ನಗರದ ಎರಡು ಜನ ವ್ಯಾಪಾರಿಗಳ ಮೇಲೆ ಸಿದ್ಧಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. for details- visit- samajamukhi.net, samaajamukhi & samajamukhiNews you tube channel

ಅಮ್ಮನನ್ನು ಕಳೆದುಕೊಂಡೆ, ಅಮ್ಮನ ನೆನಪನ್ನಾದರೂ ಕೊಡಿ’: ಮಡಿಕೇರಿಯ 9 ವರ್ಷದ ಬಾಲಕಿಯ ಕರುಣಾಜನಕ ಮನವಿ   

ಕೊರೋನಾ ಎರಡನೇ ಅಲೆಯಲ್ಲಿ ಸಿಲುಕಿ ಬಳಲುತ್ತಿರುವವರ ಗೋಳಾಟ ಒಂದೆಡೆಯಾದರೆ ತಮ್ಮವರನ್ನು, ತಮ್ಮ ಪೋಷಕರನ್ನು ಕಳೆದುಕೊಂಡವರ, ಅನಾಥರಾದ ಮಕ್ಕಳ ಗೋಳಿನ ಕಥೆ ಇನ್ನೊಂದೆಡೆ. ತಂದೆ-ತಾಯಿಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನವೂ ಮುಗಿಲುಮುಟ್ಟುತ್ತಿದೆ.

Girl Hritiksha

ಮಡಿಕೇರಿ: ಕೊರೋನಾ ಎರಡನೇ ಅಲೆಯಲ್ಲಿ ಸಿಲುಕಿ ಬಳಲುತ್ತಿರುವವರ ಗೋಳಾಟ ಒಂದೆಡೆಯಾದರೆ ತಮ್ಮವರನ್ನು, ತಮ್ಮ ಪೋಷಕರನ್ನು ಕಳೆದುಕೊಂಡವರ, ಅನಾಥರಾದ ಮಕ್ಕಳ ಗೋಳಿನ ಕಥೆ ಇನ್ನೊಂದೆಡೆ. ತಂದೆ-ತಾಯಿಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನವೂ ಮುಗಿಲುಮುಟ್ಟುತ್ತಿದೆ.

ಏನಿದು ಘಟನೆ: ಕೊಡಗು ಜಿಲ್ಲೆಯ ಮಡಿಕೇರಿಯ ಕುಶಾಲಪ್ಪನಗರ ಲೇಔಟ್ ನ ಕೋವಿಡ್ ಆಸ್ಪತ್ರೆಯಲ್ಲಿ ಮೊನ್ನೆ ಮೇ 16ರಂದು 9 ವರ್ಷದ ಬಾಲಕಿ ಹೃತಿಕ್ಷಾ ತಾಯಿ ಕೋವಿಡ್ ನಿಂದ ಮೃತಪಟ್ಟಿದ್ದರು.ಅದಕ್ಕೆ 10 ದಿನ ಮೊದಲು ಮೇ 6ರಂದು ಹೃತಿಕ್ಷಾ ತಾಯಿ ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಹೃತಿಕ್ಷಾ 4ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಆಕೆಯ ತಂದೆ 41 ವರ್ಷದ ನವೀನ್ ಕುಮಾರ್ ಪೇಂಟಿಂಗ್ ಕೆಲಸ ಮಾಡುತ್ತಿದ್ದು ಮೂವರಿಗೂ ಸೋಂಕು ತಗುಲಿತ್ತು. ತಾಯಿ ರೋಗ ಉಲ್ಬಣಗೊಂಡು ಆಸ್ಪತ್ರೆ ಸೇರಿದ್ದರೆ ತಂದೆ-ಮಗಳು ಹೋಂ ಕ್ವಾರಂಟೈನ್ ನಲ್ಲಿದ್ದರು. 

ಹೃತಿಕ್ಷಾಳ ತಾಯಿ ಆಸ್ಪತ್ರೆಗೆ ದಾಖಲಾದಾಗ ಮೊಬೈಲ್ ಫೋನ್ ಇಟ್ಟುಕೊಂಡಿದ್ದರು. ಅದರಲ್ಲಿ ಅವರ ಫೋಟೋಗಳು, ಕುಟುಂಬಕ್ಕೆ ಸಂಬಂಧಿಸಿದ ಫೋಟೋಗಳು, ಸಂಪರ್ಕ ಸಂಖ್ಯೆಗಳು, ಅನೇಕ ಮಾಹಿತಿಗಳಿದ್ದವು. ಹೃತಿಕ್ಷಾ ಆನ್ ಲೈನ್ ಕ್ಲಾಸ್ ಗೆ ಅವಲಂಬಿತವಾಗಿದ್ದುದು ತಾಯಿಯ ಮೊಬೈಲ್ ನಲ್ಲಿಯೇ, ಇದೀಗ ಆಕೆಯ ತಾಯಿಯ ಜೊತೆ ಮೊಬೈಲ್ ಕೂಡ ಕಾಣೆಯಾಗಿದ್ದು ಬಾಲಕಿ ಹೃತಿಕ್ಷಾಳನ್ನು ಇನ್ನಷ್ಟು ದುಃಖಕ್ಕೀಡುಮಾಡಿದೆ.

ಕಾಣೆಯಾಗಿರುವ ಮೊಬೈಲ್ ನಲ್ಲಿ ತಾಯಿಗೆ ಸಂಬಂಧಪಟ್ಟ ಸಾಕಷ್ಟು ನೆನಪುಗಳಿವೆ, ಫೋಟೋಗಳಿವೆ, ಹೀಗಾಗಿ ಮೊಬೈಲ್ ಹುಡುಕಿಕೊಡಿ ಎಂದು ಬಾಲಕಿ ಹೃತಿಕ್ಷಾ ಮತ್ತು ಆಕೆಯ ತಂದೆ ನವೀನ್ ಕುಮಾರ್ ಕೊಡಗು ಜಿಲ್ಲಾಧಿಕಾರಿಗಳಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪತ್ನಿ ಸತ್ತ ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ಬೇರೆಲ್ಲಾ ವಸ್ತುಗಳು ಸಿಕ್ಕಿವೆ, ಆದರೆ ಮೊಬೈಲ್ ಕಾಣೆಯಾಗಿದೆ, ನಾವು ಆಸ್ಪತ್ರೆಯಲ್ಲಿ ಕೇಳಿದಾಗ ಸಕಾರಾತ್ಮಕ ಉತ್ತರ ಬರಲಿಲ್ಲ, ನಮ್ಮ ಆಸ್ಪತ್ರೆಯಲ್ಲಿ ಮೊಬೈಲ್ ಕಳವಾಗಲು ಸಾಧ್ಯವಿಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳಿದರು.ನಮಗೆ ತೀವ್ರ ದುಃಖವಾಗಿ ಈ ಮನವಿ ಸಲ್ಲಿಸುತ್ತಿದ್ದೇವೆ ಎಂದು ನವೀನ್ ಕುಮಾರ್ ಹೇಳುತ್ತಿದ್ದಾರೆ.

ಇದೀಗ ಆಸ್ಪತ್ರೆಯ ಸಿಬ್ಬಂದಿಗಳನ್ನೆಲ್ಲಾ ವಿಚಾರಿಸಿ, ಸಿಸಿಟಿವಿ ಕ್ಯಾಮರಾ ಪರಿಶೀಲಿಸಿ ಮೊಬೈಲ್ ಹುಡುಕಿಕೊಡುವ ಭರವಸೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿನಿಂದ ದಾಖಲಾಗಿ ಮೃತಪಟ್ಟವರಲ್ಲಿ ಅನೇಕರ ವಸ್ತುಗಳು, ಮೊಬೈಲ್ ಗಳು ಕಾಣೆಯಾಗಿವೆ ಎಂಬ ದೂರುಗಳು ಬಂದಿವೆ. ಹಲವು ಆಸ್ಪತ್ರೆಗಳಲ್ಲಿ ರೋಗಿಗಳ ಆಭರಣಗಳು, ಹಣ, ಬೇರೆ ವಸ್ತುಗಳು ಕಾಣೆಯಾಗಿರುವ ದೂರುಗಳು ಕೇಳಿಬರುತ್ತಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *