ನಿಗಮ ಮಂಡಳಿ ವಿಸರ್ಜನೆ ಗೆ ಆಗ್ರಹ

ಸಂಪಾದಕರಿಗೆ ಪತ್ರ:

ಕೊರೊನಾ ಸಂಕಷ್ಟದಲ್ಲಿ ದೇಶವೇ ತಲ್ಲಣಗೊಂಡ ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಕ್ಕೆ ಬೆಂಬಲವಾಗಿ ನಿಂತು ನಾವೆಲ್ಲರೂ ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ-
ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಎಲ್ಲ ಅಕಾಡೆಮಿ, ಪ್ರಾಧಿಕಾರ, ನಿಗಮ ಮತ್ತು ಮಂಡಳಿಗಳನ್ನು ಈ ಕೂಡಲೇ ವಿಸರ್ಜಿಸುವುದು. ಇದರಿಂದ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅನುದಾನವನ್ನು ಕೋವಿಡ್ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಬಳಸಲು ಅನುಕೂಲವಾಗುತ್ತದೆ ಎಂದು ನಮ್ಮ ಭಾವನೆ. ಈ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ಮತ್ತು ಸಿಬ್ಬಂದಿಗಳ ಸಂಬಳ, ಸಾರಿಗೆ ಮತ್ತಿತರ ಭತ್ಯೆಗಳು ಸರ್ಕಾರದ ಬೊಕ್ಕಸಕ್ಕೆ ಉಳಿಯುತ್ತದೆ. ರಾಜ್ಯವು ಗಂಭೀರವಾದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಹೊತ್ತಿನಲ್ಲಿ ಮಾನವೀಯ ಕಳಕಳಿಯ ಹಿನ್ನೆಲೆಯಲ್ಲಿ ಸರ್ಕಾರವು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಳ್ಳಬೇಕೆಂದು ನಮ್ಮೆಲ್ಲರ ವಿನಂತಿ.


ಇದರೊಂದಿಗೆ ಸರಕಾರವು ನೀಡುವ ವಿವಿಧ ಪ್ರಶಸ್ತಿ ಪುರಸ್ಕಾರಗಳನ್ನೂ ರಾಜ್ಯವು ಚೇತರಿಸಿಕೊಳ್ಳುವವರೆಗೆ ಮುಂದೂಡಬೇಕೆಂದೂ ಕೋರಿಕೆ. ಈ ಕುರಿತಾದ ಆದೇಶವು ಹೊರಬೀಳುವ ಮೊದಲೇ ಎಲ್ಲ ಅಕಾಡೆಮಿ, ಪ್ರಾಧಿಕಾರ, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರು ಸ್ವಯಿಚ್ಛೆಯಿಂದ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿ ಮಾದರಿಯಾಗಬೇಕೆಂದೂ ಸರಕಾರದ ಜೊತೆಗೆ ಕೈಜೋಡಿಸಬೇಕೆಂದೂ ಮನವಿಮಾಡಿಕೊಳ್ಳುತ್ತಿದ್ದೇವೆ.
ಇತಿ ನಿಮ್ಮ
ಸುಬ್ರಾಯ ಚೊಕ್ಕಾಡಿ
ಡಾ. ನಾ.ಮೊಗಸಾಲೆ
ಡಾ.ಜಿ.ಎಂ.ಹೆಗಡೆ, ಧಾರವಾಡ
ಡಾ.ಬಿ. ಜನಾರ್ದನ ಭಟ್
ಡಾ. ಜಿ.ಎನ್.ಉಪಾಧ್ಯ, ಮುಂಬಯಿ
ಡಾ. ಕಬ್ಬಿನಾಲೆ ವಸಂತಭಾರದ್ವಾಜ
ಡಾ.ಪೂರ್ಣಿಮಾ ಶಟ್ಟಿ
ಶ್ರೀನಿವಾಸ ಜೋಕಟ್ಟೆ, ಮುಂಬಯಿ
ಕೆ.ಪಿ.ರಾಜಗೋಪಾಲ, ಕನ್ಯಾನ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *