ಬುಡಕಟ್ಟು ಸಮುದಾಯಕ್ಕೆ ಪಡಿತರ ವಿತರಿಸಿದ ನಟ ಚೇತನ್ ಕುಮಾರ್

ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ. ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ.

actor Chetan Kumar reaches out to tribals with ration kits

ತುಮಕೂರು: ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ.

ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ. ತುಮಕೂರಿನ ಶಿಳ್ಳೆಖ್ಯಾತ ಸಮುದಾಯ, ತಿಪಟೂರಿನ ಮಂಗಳಮುಖಿಯರು ಮತ್ತು ಬೆಂಗಳೂರಿನ ಸ್ಮಶಾನಗಳಲ್ಲಿ ಕೆಲಸ ಮಾಡುವವರಿಗೆ ತಮ್ಮ ಫೌಂಡೇಶನ್ ಮೂಲಕ ಪಡಿತರ ಕಿಟ್ ಕಳುಹಿಸುತ್ತಿದ್ದಾರೆ. 

ಲಾಕ್ ಡೌನ್ ನಿಂದಾಗಿ ದೈನಂದಿನ ಸಂಪಾದನೆಯಿಲ್ಲದೇ ಸಂಕಷ್ಟಕ್ಕೊಳಗಾಗಿರುವವರಿಗೆ ಚೇತನ್ ಸಹಾಯ ಹಸ್ತ ನೀಡಿದ್ದಾರೆ. ಚೇತನ್ ಅವರ ಈ ಕಾರ್ಯಕ್ಕೆ ಮಂಗಳಮುಖಿಯರು ಶ್ಲಾಘನೆ ಮಾಡಿದ್ದಾರೆ.

ಬೆಂಗಳೂರಿನ ಸುಮಾರು 300 ಸ್ಮಶಾನ ಕಾರ್ಮಿಕರ ಸೇವೆಗಳನ್ನು ಕ್ರಮಬದ್ಧಗೊಳಿಸುವಂತೆ ನಟ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರಿಗೆ ಪತ್ರ ಬರೆದಿದ್ದಾರೆ.  ಲಸಿಕೆಗಳು, ವಿಮೆ, ಹಾಸಿಗೆಗಳು ಮತ್ತು ಹಣಕಾಸಿನ ವಿಷಯದಲ್ಲಿ ಅವರಿಗೆ ತಕ್ಷಣದ ವೈದ್ಯಕೀಯ ನೆರವು ನೀಡಿ ಎಂದು ನಟ ಒತ್ತಾಯಿಸಿದ್ದಾರೆ.ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರ ಜೊತೆ ಸಂಪರ್ಕದಲ್ಲಿದ್ದು, ಈ ವಿಷಯ ಸಂಬಂಧ ಅವರ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

ಉಡುಪಿಯ ಕೊರಗ ಸಮುದಾಯವು ಈಗಲೂ ‘ಅಜ್ಜಲು ಪದತಿ’ಗೆ ಬಲಿಯಾಗಿದೆ ಎಂದು ನಟ ಚೇತನ್ ಆಘಾತ ವ್ಯಕ್ತ ಪಡಿಸಿದ್ದಾರೆ, ಈ ಪದ್ಧತಿಯಲ್ಲಿ  ಹಿಂದೂಗಳ ಉಗುರು ಮತ್ತು ಕೂದಲನ್ನು ತಿನ್ನಲು ಒತ್ತಾಯಿಸಲಾಗುತ್ತದೆ ಎಂದು ಹೇಳಿದ್ದಾರೆ. ಕೊರಗ ಸಮುದಾಯಕ್ಕೆ ಚೇತನ್ ಕುಮಾರ್ ಅಭಿಮಾನಿಗಳಾದ ಜಗದೀಶ್ ಗಂಗೊಳ್ಳಿ ಮತ್ತು ವಜ್ರರಂಗ್ ಫುಡ್ ಕಿಟ್
ತಲುಪಿಸಿದ್ದಾರೆ.

ಭವಿಷ್ಯದಲ್ಲಿ ಅಗತ್ಯವಿರುವವರಿಗೆ ವೈದ್ಯಕೀಯ ಸಹಾಯವನ್ನು ನೀಡಲು ನಾನು ಯೋಜಿಸುತ್ತಿದ್ದೇನೆ, ಏಕೆಂದರೆ ನನ್ನ ಕುಟುಂಬವು ಈಗಾಗಲೇ ಮೈಸೂರಿನ ಹೆಬ್ಬಾಳದಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ನಡೆಸುತ್ತಿದೆ” ಎಂದು ಅವರು ಹೇಳಿದರು.

ಒಂದು ವೇಳೆ ನೀವು ಸಿಎಂ ಆದರೆ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಚೇತನ್ ಕುಮಾರ್, ನಾನು ಸಿಎಂ ಆದರೆ ಸಂಪತ್ತನ್ನು ಹಂಚುವುದು ನನ್ನ ಮೊದಲ ಆದ್ಯತೆ, ಇದು ನನ್ನಿಂದಲೇ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *