big news of 2021!- 5ಲಕ್ಷ ಜನರ 85 ಸಾವಿರ ಕುಟುಂಬಗಳ ಅರಣ್ಯ ಅತಿಕ್ರಮಣದಾರರ ಭೂಮಿಹಕ್ಕಿಗೆ ಬಿತ್ತೆ ಕೊಡಲಿಯೇಟು?

ಸರ್ಕಾರ ನ್ಯಾಯ ಒದಗಿಸದಿದ್ದಾಗ ನ್ಯಾಯಾಲಯದ ಮೊರೆ ಹೋಗುವುದು ಜನಸಾಮಾನ್ಯರು,ಸಾರ್ವಜನಿಕರ ಆಯ್ಕೆ ಆದರೆ ನ್ಯಾಯಾಲಯದ ಆದೇಶವೇ ಜನರಿಗೆ ತೂಗುಗತ್ತಿಯಾದರೆ ಧರೆಹೊತ್ತಿ ಉರಿದೊಡೆ ಓಡುವುದೆತ್ತ ಎನ್ನುವ ಸ್ಥಿತಿ-ಪರಿಸ್ಥಿತಿ.
ಇಂಥ ಕಠಿಣ ಪರಿಸ್ಥಿತಿಗೆ ಎದುರಾಗಬೇಕಾದ ಅನಿವಾರ್ಯ ಸ್ಥಿತಿ ಈಗ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರದ್ದಾಗಿದೆ.

ಅದೇನೆಂದರೆ ಜೂನ್ 7 ರಂದು  ಹರಿಯಾಣ  ರಾಜ್ಯದ ಫರಿದಾಬಾದ್ ಜಿಲ್ಲೆಯ ಹತ್ತು ಸಾವಿರ ಜನವಸತಿ ಇದ್ದ ಲುಕ್ಕಾರ್ಪುರಕೋರಿ ಎನ್ನುವ ಪ್ರದೇಶದ ಜನರನ್ನು ಸಾರಾಸಗಾಟು ಒಕ್ಕಲೆಬ್ಬಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅರಣ್ಯಪ್ರದೇಶದಲ್ಲಿ ಅನಧೀ ಕೃತವಾಗಿ ಜನವಸತಿ ಮಾಡಿಕೊಂಡಿರುವ ಜನರಿಗೆ ಯಾವುದೇ ರಿಯಾಯತಿ ನೀಡದೆ ಶೀಘ್ರ ಒಕ್ಕಲೆಬ್ಬಿಸಲು ಸುಪ್ರೀಂಕೋರ್ಟ್ ಮಾಡಿರುವ ಆದೇಶ ಸಾವಿರಾರು ಮೈಲು ದೂರದ ಉತ್ತರ ಕನ್ನಡದ ಜನರನ್ನು ಕಂಗೆಡಿಸಲು ಪ್ರಬಲ ಕಾರಣವಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ 85 ಸಾವಿರ ಕುಟುಂಬಗಳ 5 ಲಕ್ಷಕ್ಕಿಂತ ಹೆಚ್ಚು ಜನ ಅರಣ್ಯ ಅತಿಕ್ರಮಣದಾರರು.

ಇವರಲ್ಲಿ ಬಹುತೇಕರು ಕಳೆದ 40-50  ವರ್ಷ ಗಳಿಂದ ತಮ್ಮ ನೆಲದ ಹಕ್ಕಿಗಾಗಿ ಕಾದು ಕೂತಿದ್ದಾರೆ. ಈ ಅರಣ್ಯಭೂಮಿ ಸಾಗುವಳಿದಾರರ ಬಹುತೇಕ ಪ್ರಕರಣಗಳು ಕೆಳಹಂತದ ಹಂಗಾಮಿ ನ್ಯಾಯಾಲಯಗಳಿಂದ ಸುಪ್ರಿಂಕೋರ್ಟ್ ನಲ್ಲಿ ಕೂಡಾ ತನಿಖೆಯಲ್ಲಿವೆ. ಈ ಪ್ರಕರಣಗಳಿಗೆ ಹರಿಯಾಣ ಪ್ರಕರಣ ಆಧರಿಸಿ ತೀರ್ಪು ನೀಡಿದರೆ ಅರಣ್ಯ ಅತಿಕ್ರಮಣದಾರರು ನಿರ್ವಸತಿಗರು, ಭೂ ರಹಿತರು ಆಗುತ್ತಾರೆ.

ಈ ಬಗ್ಗೆ ಕಳೆದ ಮೂವತ್ತು ವರ್ಷಗಳಿಂದ ಹೋರಾಡುತ್ತಿರುವ ನ್ಯಾಯವಾದಿ ಎ. ರವೀಂದ್ರ ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೊಕದ್ದಮೆಯನ್ನೂ ದಾಖಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ಅರಣ್ಯಭೂಮಿ ಸಾಗುವಳಿದಾರರಿಗೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿ ಜಾರಿ ಮಾಡುವ ಮೂಲಕ ರಕ್ಷಣೆ ನೀಡಬಹುದು. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುತುವರ್ಜಿಯಿಂದ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರನ್ನು ರಕ್ಷಿಸಬೇಕೆಂದು ಎ.ರವೀಂದ್ರ ಆಗ್ರಹಿಸಿದ್ದಾರೆ.

ಅರಣ್ಯ, ಪರಿಸರದ ವಿಚಾರದಲ್ಲಿ ಬಿಗಿನಿಲುವು ತಳೆಯುವ ಸುಪ್ರೀಂಕೋರ್ಟ್ ಸರ್ಕಾರದ ವಿರೋಧ, ಸರ್ಕಾರದ ಹೊಸ ರಾಷ್ಟ್ರೀಯ ನೀತಿ ಇಲ್ಲದೆ ಅರಣ್ಯ ಅತಿಕ್ರಮಣದಾರರಿಗೆ ವಿನಾಯಿತಿ, ರಿಯಾಯತಿ ನೀಡುವ ಸಾಧ್ಯತೆಗಳು ಶೂನ್ಯ. ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಒಟ್ಟೂ 16 ಲಕ್ಷ ಜನಸಂಖ್ಯೆಯಲ್ಲಿ ಮೂರರ ಒಂದು ಭಾಗ ಜನಸಂಖ್ಯೆ ಅರಣ್ಯ ಅತಿಕ್ರ ಮಣದಾರರಿರುವುದರಿಂದ ಜಿಲ್ಲೆಯ ಮುಂದಿನ ವಿದ್ಯಮಾನ ಊಹೆಗೆ ನಿಲುಕದ್ದು ಈಗಿರುವ ಉತ್ತರ ಕನ್ನಡ ಜಿಲ್ಲೆಯ ಲಕ್ಷಾಂತರ ನಿರಾಶ್ರಿ ತರೊಂದಿಗೆ ಅರಣ್ಯದಿಂದ ಒಕ್ಕಲೆಬ್ಬಿಸುವವರೂಸೇರಿದರೆ ಜಿಲ್ಲೆ ನಿರಾಶ್ರಿತರ ಜಿಲ್ಲೆಯಾಗುವ ಅಪಾಯಕ್ಕೂ ಒಡ್ಡಿಕೊಳ್ಳಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *