Siddhalingayya memory -ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ

ಕವಿ ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ

ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ ಕವಿ,ಅಧ್ಯಾಪಕ ಸಿದ್ದಲಿಂಗಯ್ಯ ಕರೋನಾದಿಂದ ನಿಧನರಾಗಿರುವುದು ತೀರ ದುಃಖ ಉಂಟು ಮಾಡುವ ಸಂಗತಿಯಾಗಿದೆ ಆಗಲಿದ ಕವಿಗೆ ಕರ್ನಾಟಕ ಪ್ರಾಂತ ರೈತ ಸಂಘ ಉ.ಕ. ಜಿಲ್ಲಾ ಸಮಿತಿ ತೀವ್ರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆಯಂದು ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ ತಿಳಿಸಿದ್ದಾರೆ.

ಎಪ್ಪತ್ತರ‌ ದಶಕದಿಂದಲೂ ರಾಜ್ಯದಲ್ಲಿ ಬೆಳೆದು ಬಂದ ದಲಿತ,ಬಂಡಾಯ, ಸಾಂಸ್ಕೃತಿಕ ಹಾಗೂ ಮಹಿಳಾ‌ ಮೊದಲಾದ ಚಳವಳಿಯ ಭಾಗವಾಗಿಯೇ ತನ್ನ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದ ಸಿದ್ದಲಿಂಗಯ್ಯ ಆ ಎಲ್ಲ ಚಳವಳಿಗಳನ್ನು ರಾಜ್ಯಾದ್ಯಂತ ಬೆಳೆಸಲು ಅಮೂಲ್ಯ ಕೊಡುಗೆಯನ್ನು ನೀಡಿದ್ದರು.

ಬಾಲ್ಯದಲ್ಲಿ ಅನುಭವಿಸಿದ ನೋವುಗಳನ್ನೇ ಹಾಡಾಗಿಸುವ ಕವಿತೆಯಾಗಿಸುವ ಮತ್ತು ಹಾಡಾಗಿಸುವ ಮೂಲಕ ಇಡೀ ಶೋಷಿತರ ನಡುವೆ ಅದರಲ್ಲೂ ಅಸ್ಪೃಶ್ಯತೆ ಯಲ್ಲಿ ನೊಂದ ಲಕ್ಷಾಂತರ ದಲಿತರಲ್ಲಿ ಜಾಗೃತಿ ಮೂಡಿಸಲು ಕಾರಣವಾದರು ಸಿದ್ದಲಿಂಗಯ್ಯ ನವರು.ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು ಎನ್ನುವ ಅವರ ಕವನ ಈಗಲೂ ಶೋಷಿತರ ಮನದಲ್ಲಿ ರೋಮಾಂಚಕ ಉಂಟು ಮಾಡುವಂತ ಹದ್ದು.ಊರು ಕೇರಿ ಎನ್ನುವ ಆತ್ಮ ಕಥನವು ಸಿದ್ದಲಿಂಗಯ್ಯ ಅವರ ಬೆಳೆದು ಬಂದ ಮತ್ತು ಅವರು ಅನುಭವಿಸಿದ ಸಂಕಟಗಳಿಗೆ ಪ್ರತ್ಯಕ್ಷ ಸಾಕ್ಷಿಯಾಗಿದೆ.
ಇಂತಹ ಬಹುಮುಖ ವ್ಯಕ್ತಿತ್ವದ ಕವಿ,ಬರಹಗಾರ, ಅಧ್ಯಾಪಕ ಡಾ ಸಿದ್ದಲಿಂಗಯ್ಯ ಕಳೆದ‌ ಒಂದೂವರೆ ತಿಂಗಳಿಂದ ಕರೋನಾ ವಿರುದ್ಧ ನಿರಂತರವಾಗಿ ಹೋರಾಡುತ್ತಲೇ ಬಂದರೂ ಅಂತಿಮವಾಗಿ ಅದಕ್ಕೆ ಶರಣಾಗಬೇಕಾದುದ್ದು ದುಃಖದ ಸಂಗತಿ. ಅವರು ಬದುಕಿ ಬರುವವರೆಂದು ಕಾಯುತ್ತಿದ್ದ ಲಕ್ಷಾಂತರ ಶೋಷಿತರಿಗೆ ಇದು ಅತ್ಯಂತ ನಿರಾಶೆಯ‌ ದಿನವಾಗಿದೆ.

ಸಿದ್ದಲಿಂಗಯ್ಯ ಅವರು ಇಡೀ ಕುಟುಂಬದ ನೋವಿನ ಜೊತೆ ರೈತ ಸಂಘ ನಿಂತಿದೆ.ಅಗಲಿದ. ಡಾ. ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಅಂತಿಮ ನಮನಗಳನ್ನು ಸಲ್ಲಿಸುತ್ತದೆ.

(ಶಾಂತಾರಾಮ ನಾಯಕ)
ಜಿಲ್ಲಾ ಅಧ್ಯಕ್ಷರು, ಕರ್ನಾಟಕ ಪ್ರಾಂತ ರೈತ ಸಂಘ.)

1979 ರಷ್ಟು ಹಿಂದೆ ಸಿದ್ಧಾಪುರದಲ್ಲಿ ನಡೆದ ರಾಜ್ಯ ಬಂಡಾಯ ಸಾಹಿತ್ಯ ಸಮ್ಮೇಳನದಲ್ಲಿ ಆರ್.ವಿ.ಭಂಡಾರಿ, ಸಿದ್ಧಲಿಂಗಯ್ಯ, ಚಂಪಾ,ದೇವನೂರು ಮಹಾದೇವರೆಲ್ಲಾ ಸೇರಿದ ಹಳೆಯ ನೆನಪು. ಚಿತ್ರಕೃಪೆ-ಯಮುನಾ ಗಾಂವ್ಕರ್

ಸಿದ್ದಲಿಂಗಯ್ಯ ನಿಧನ: ಸಿಎಂ ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ

ದಲಿತ ಕವಿ, ಡಾ. ಸಿದ್ದಲಿಂಗಯ್ಯ (66) ಕೊರೋನಾದಿಂದ ನಿಧನರಾಗಿದ್ದಾರೆ. ಹಿರಿಯ ಕವಿ, ಬಂಡಾಯ, ದಲಿತ ಸಾಹಿತ್ಯದ ಮೇರು ಧ್ವನಿಯಾಗಿದ್ದ ಸಿದ್ದಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ಬೆಂಗಳೂರು: ದಲಿತ ಕವಿ, ಡಾ. ಸಿದ್ದಲಿಂಗಯ್ಯ (66) ಕೊರೋನಾದಿಂದ ನಿಧನರಾಗಿದ್ದಾರೆ. ಹಿರಿಯ ಕವಿ, ಬಂಡಾಯ, ದಲಿತ ಸಾಹಿತ್ಯದ ಮೇರು ಧ್ವನಿಯಾಗಿದ್ದ ಸಿದ್ದಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ” ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ

“ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ‌‌ ಸಮಾನತೆಯ ಹೋರಾಟವನ್ನು‌ ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ “ಹಿರಿಯ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನವರು ವಿಧಿವಶರಾಗಿರುವ ವಿಷಯ ತಿಳಿದು ಮನಸ್ಸಿಗೆ ತುಂಬಾ ಆಘಾತವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ  ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.

“ಖ್ಯಾತ ಕವಿ, ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ ನವರು ವಿಧಿವಶರಾಗಿರುವ ವಿಷಯ ತಿಳಿದು ಮನಸ್ಸಿಗೆ ಆಘಾತವಾಗಿದೆ. ಡಾ.ಸಿದ್ದಲಿಂಗಯ್ಯ ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟ.ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ  ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.” ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *