ಕೋವಿಡ್ ಲಸಿಕೆ: ಬಿಜೆಪಿ ಕಾರ್ಯಕರ್ತರಿಂದ ಹೊಸ ಕಾರ್ಯಯೋಜನೆ

ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. 

ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ

ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

Represent purposes only

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

ಲಸಿಕೆ ಪಡೆದ ನಂತರ ವ್ಯಕ್ತಿಯಲ್ಲಿ ಅಡ್ಡಪರಿಣಾಮವಾಗಿ ಅನಾಫಿಲ್ಯಾಕ್ಸಿಸ್(ತೀವ್ರ ಅಲರ್ಜಿ ಪರಿಣಾಮ) ಗೆ ಗುರಿಯಾಗಿದ್ದು ಇದರಿಂದಲೇ 2021ರ ಮಾರ್ಚ್ 8ರಂದು ಮೃತಪಟ್ಟಿರುವುದಾಗಿ ರಾಷ್ಟ್ರೀಯ ಎಇಎಫ್‌ಐ ಸಮಿತಿಯ ವರದಿಯಲ್ಲಿ ತಿಳಿಸಿದೆ.

ಇನ್ನು ಜನವರಿ 16 ಮತ್ತು 19ರಂದು ಲಸಿಕೆ ಪಡೆದಿದ್ದ ಇಬ್ಬರಿಗೂ ತೀವ್ರ ಅಲರ್ಜಿಯಾಗಿದ್ದು ಕೂಡಲೇ ಅವರು ಆಸ್ಪತ್ರೆಗೆ ದಾಖಲಾದ ನಂತರ ಚೇತರಿಸಿಕೊಂಡಿದ್ದಾರೆ ಎಂದು ಸಮಿತಿ ತಿಳಿಸಿದೆ.

31 ಪ್ರಕರಣಗಳ ಸಾಂದರ್ಭಿಕ ಮೌಲ್ಯಮಾಪನದ ಫಲಿತಾಂಶಗಳನ್ನು ಸಮಗ್ರ ಪರಿಶೀಲನೆ ಮತ್ತು ಚರ್ಚೆಗಳ ನಂತರ ಫೆಬ್ರವರಿ 5ರಂದು(ಐದು ಪ್ರಕರಣಗಳು), ಮಾರ್ಚ್ 9(ಎಂಟು ಪ್ರಕರಣಗಳು) ಮತ್ತು ಮಾರ್ಚ್ 31ರಂದು(18 ಪ್ರಕರಣಗಳು) ವರದಿಯಾಗಿತ್ತು ಎಂದು  ರಾಷ್ಟ್ರೀಯ ಎಇಎಫ್‌ಐ ಸಮಿತಿ ತಿಳಿಸಿದೆ.

ವರದಿಯ ಪ್ರಕಾರ, “ಸಾಂದರ್ಭಿಕವಾಗಿ ಮೌಲ್ಯಮಾಪನ ಮಾಡಲಾದ 31 ಪ್ರಕರಣಗಳಲ್ಲಿ 18 ಸಾವುಗಳು ಲಸಿಕೆ ಪಡೆದ ನಂತರ ಸಾಂದರ್ಭಿಕವಾಗಿ, ಅಂದರೆ ಕಾಕತಾಳೀಯವಾಗಿ ಸಂಭವಿಸಿದೆ. ಇದಕ್ಕೂ ಲಸಿಕೆಗೂ ಸಂಬಂಧವಿಲ್ಲ. ಇನ್ನು ಏಳು ಸಾವುಗಳು ಎರಡೂ ಕಾರಣಗಳಿಗೆ ಸಂಭವಿಸಿದೆ. ಇನ್ನು ಮೂರು ಸಾವುಗಳು ಲಸಿಕೆಯಿಂದಾಗಿದೆ ಎಂದು ತಿಳಿದುಬಂದಿದ್ದು ಒಂದು ಸಾವು ಉದ್ವೇಗದಿಂದಾಗಿದ್ದರೆ ಮತ್ತೆರಡು ಪ್ರಕರಣಗಳನ್ನು ವರ್ಗಿಕರಿಸಲು ಸಾಧ್ಯವಾಗುತ್ತಿಲ್ಲ ಎಂದು ಸಮಿತಿ ತಿಳಿಸಿದೆ. 

ಲಸಿಕೆ ಉತ್ಪನ್ನ-ಸಂಬಂಧಿತ ಪ್ರತಿಕ್ರಿಯೆಗಳು ನಿರೀಕ್ಷಿತ ಪ್ರತಿಕ್ರಿಯೆಗಳಾಗಿದ್ದು, ಪ್ರಸ್ತುತ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಲಸಿಕೆ ಕಾರಣವೆಂದು ಎಇಎಫ್ಐ ವರದಿ ಹೇಳಿದೆ. ಅಂತಹ ಪ್ರತಿಕ್ರಿಯೆಗಳ ಉದಾಹರಣೆಗಳೆಂದರೆ ಅಲರ್ಜಿ ಮತ್ತು ಅನಾಫಿಲ್ಯಾಕ್ಸಿಸ್ ಇತ್ಯಾದಿ.

File photo

ಬೆಂಗಳೂರು: ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. 

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು, ಮುಂದಿನ ಎರಡು ಅಥವಾ ಮೂರು ತಿಂಗಳಲ್ಲಿ ಬಿಜೆಪಿ ರಾಜ್ಯ ಘಟಕವು ಕರ್ನಾಟಕದಲ್ಲಿ ಶೇ 100 ರಷ್ಟು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ ಬೂತ್‌ಗಳಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ, 25 ಲಕ್ಷ ಕಾರ್ಯಕರ್ತರು ಸೇವೆ ಸಲ್ಲಿಸಲಿದ್ದಾರೆಂದು ತಿಳಿಸಿದ್ದಾರೆ. 

https://imasdk.googleapis.com/js/core/bridge3.464.0_en.html#goog_1581465593

ಕೋವಿಡ್ ಎಲ್ಲಾ ನಿಯಮಗಳು ಹಾಗೂ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಕಳೆದ ತಿಂಗಳಷ್ಟೇ ರಾಜ್ಯ ಬಿಜೆಪಿ ರಾಜ್ಯದ 29,000 ಗ್ರಾಮಗಳ 58,000 ಬೂತ್‌ಗಳಲ್ಲಿ ಕೋವಿಡ್ ಸೋಂಕಿತರಿಗೆ ಸಹಾಯ ಮಾಡುವ ಕಾರ್ಯವನ್ನು ಆರಂಭಿಸಿತ್ತು. 

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 7 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಸೇವಾ ಹಿ ಸಂಘಟನ್ ಕಾರ್ಯಕ್ರಮವನ್ನು ಬಿಜೆಪಿ ಆರಂಭಿಸಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *