ಸಿದ್ದು ಹಲಸು ತಳಿಯಿಂದ 2 ವರ್ಷಗಳಲ್ಲಿ 22 ಲಕ್ಷ ಆದಾಯ ಗಳಿಸಿದ ರೈತ, “ವಾಣಿಜ್ಯ ಕೃಷಿಗೆ ಇದು ಸೂಕ್ತ”- ಸಿಎಂ ಯಡಿಯೂರಪ್ಪ

ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. 

The elite siddu jackfruit sapling was presented  to Chief Minister B.S.Yediyurappa under  collaborative plant development programme

ಬೆಂಗಳೂರು: ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. 

ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅರ್ಪಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು,  ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು  ಗುರುತಿಸಲಾಗಿರುವುದು ಶ್ಲಾಘನೀಯ ಎಂದರು. 

 ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ  ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು  ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು  ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು.  

ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ. 
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ 31 ಸಾವಿರ  ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು. 

ಶಿಕಾರಿಪುರದ ತಮ್ಮ ತೋಟದಲ್ಲಿ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಬೆಳೆಸಲು ಆಸಕ್ತಿ ತೋರಿದರು. 

ಈ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ನಿರ್ದೇಶಕ  ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ   ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ಸಿ.ಹೆಚ್ .ಇ ಎಸ್ . ಮುಖ್ಯಸ್ಥ . ಜಿ.ಕರುಣಾಕರನ್,  ಹಾಗೂ ಸಿದ್ದು ಹಲಸು ಬೆಳೆದ ರೈತ  ಎಸ್.ಎಸ್.ಪರಮೇಶ್  ಮತ್ತಿತರರು ಉಪಸ್ಥಿತರಿದ್ದರು.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *