

ಕೋವಿಡ್ 19 ಲಾಕ್ ಡೌನ್ ನಂತರ ಚಿತ್ರೋದ್ಯಮ ನಿಧಾನವಾಗಿ ಕೆಲಸ ಆರಂಭಿಸುತ್ತಿದೆ, ಗುರು-ಶಿಷ್ಯರು ಸಿನಿಮಾ ಶೂಟಿಂಗ್ ಕೂಡ ಪುನಾರಂಭವಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಬೇಡ್ಕಣಿ ಜನತಾ ವಿದ್ಯಾಲಯದಲ್ಲಿ ಚಿತ್ರೀಕರಣವಾದ ಚಿತ್ರ ಇದು

ಕೋವಿಡ್ 19 ಲಾಕ್ ಡೌನ್ ನಂತರ ಚಿತ್ರೋದ್ಯಮ ನಿಧಾನವಾಗಿ ಕೆಲಸ ಆರಂಭಿಸುತ್ತಿದೆ, ಗುರು-ಶಿಷ್ಯರು ಸಿನಿಮಾ ಶೂಟಿಂಗ್ ಕೂಡ ಪುನಾರಂಭವಾಗುತ್ತಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗುತ್ತಿರುವ ಶೂಟಿಂಗ್ ನಲ್ಲಿ ನಟ ಶರಣ್ ಮತ್ತು ನಿಶ್ವಿಕಾ ನಾಯ್ಡು ಭಾಗವಹಿಸುತ್ತಿದ್ದಾರೆ. ಹಾಸ್ಯ ಪ್ರಧಾನ ಸಿನಿಮಾವನ್ನು ಜಡೇಶ.ಕೆ. ಹಂಪಿ ಅವರು ನಿರ್ದೇಶಿಸುತ್ತಿದ್ದಾರೆ.
ಜನವರಿಯಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಿತ್ತು. ಲಾಕ್ ಡೌನ್ ಗೂ ಮುಂಚೆ ಮಂಡ್ಯದಲ್ಲಿ ಕೆಲವು ಪ್ರಮುಖ ಸನ್ನಿವೇಶಗಳ ಶೂಟಿಂಗ್ ನಡೆಸಲಾಗಿತ್ತು. ಶರಣ್ ಸಿನಿಮಾದಲ್ಲಿ ಪಿಟಿ ಶಿಕ್ಷಕರಾಗಿ ಅಭಿನಯಿಸುತ್ತಿದ್ದಾರೆ. ಮೊದಲ ಬಾರಿಗೆ ನಿಶ್ವಿಕಾ ನಾಯ್ಡು ಹಳ್ಳಿ ಹುಡುಗಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸೆಟ್ ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವದನ್ನು ಖಚಿತ ಪಡಿಸಿಕೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಮತ್ತು ಬೆಂಗಳೂರಿನ ಹೊರಗೆ ಮತ್ತಷ್ಟು ಭಾಗದ ಶೂಟಿಂಗ್ ನಡೆಸಲು ನಿರ್ಧರಿಸಲಾಗಿದೆ ಎಂದು ಗುರು ಶಿಷ್ಯರು ತಂಡದ ಕ್ರಿಯೇಟಿವ್ ಹೆಡ್ ತರುಣ್ ಸುಧೀರ್ ತಿಳಿಸಿದ್ದಾರೆ.
ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಬೇಕಾಗಿರುವುದರಿಂದ ಚಿತ್ರತಂಡವು ಸರ್ಕಾರದಿಂದ ಮತ್ತಷ್ಟು ರಿಲ್ಯಾಕ್ಷೇಸನ್ ಗಾಗಿ ಕಾಯುತ್ತಿದೆ. ಗುರು ಶಿಷ್ಯರು ಅವರನ್ನು ಶರಣ್ ಅವರ ಪ್ರೊಡಕ್ಷನ್ ಹೌಸ್, ಲಡ್ಡು ಸಿನೆಮಾಸ್ ನಿರ್ಮಾಣ ಮಾಡುತ್ತಿದೆ. ಕ್ರಿಯೇಟಿವ್ ಹೆಡ್ ಆಗಿರುವ ತರುಣ್ ಕಿಶೋರ್ ನಿರ್ಮಾಣದಲ್ಲಿಯೂ ಪಾಲುದಾರರಾಗಿದ್ದಾರೆ. ಸಿನಿಮಾದಲ್ಲಿ ದತ್ತಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ, ಸಿನಿಮಾಗೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ.(kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
