ಸರಕಾರಿ ನೌಕರರಿಂದ ವಿಕೆಂಡ್ ಕರ್ಪ್ಯೂ ಉಲ್ಲಂಘನೆ, ಸಾರ್ವಜನಿಕರ ವಿರೋಧ ಕ್ರಮಕ್ಕೆ ಆಗ್ರಹ


ಸಿದ್ದಾಪುರ
ಕೋವಿಡ್-೧೯ಗೆ ಸಂಬಂಧಿಸಿ ತಾಲೂಕಿನಲ್ಲಿ ವಾರಾಂತ್ಯದ ಕರ್ಫೂ ಇದ್ದರೂ ನಿಯಮ ಉಲ್ಲಂಘಿಸಿ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಭೋಜನಕೂಟದಲ್ಲಿ ಪಾಲ್ಗೊಂಡ ಕುರಿತಂತೆ ಅಧಿಕೃತವಾಗಿ ತಿಳಿದುಬಂದಿದ್ದು ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ತಾಲೂಕ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳಿಬ್ಬರು ಅಧ್ಯಾಪಕ ವೃತ್ತಿಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಶಿಕ್ಷಕರ ಸಂಘದಿಂದ ಪಟ್ಟಣದ ಮಧ್ಯವರ್ತಿ ಸ್ಥಳವಾದ ಹೊನ್ನೆಗುಂಡಿ ರಸ್ತೆಯಲ್ಲಿನ ಸರಕಾರಿ ನೌಕರರ ಭವನದಲ್ಲಿ ಶನಿವಾರ ಮಧ್ಯಾಹ್ನ ಭೋಜನಕೂಟ ಆಯೋಜಿಸಲಾಗಿತ್ತು. ಪಟ್ಟಣದ ಎಲ್ಲ ಅಂಗಡಿ,ಹೊಟೇಲ್‌ಗಳು ಮುಚ್ಚಿದ್ದರೂ ಮಧ್ಯಾಹ್ನದ ವೇಳೆಯಲ್ಲಿ ಸರಕಾರಿ ನೌಕರರ ಭವನದಲ್ಲಿ ಜನಸಂದಣಿ ಕಂಡುಬಂದಿತ್ತು. ಅಲ್ಲದೇ ಅದೇ ವೇಳೆಯಲ್ಲಿ ತಹಸೀಲದಾರರ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಸರಕಾರಿ ವಾಹನ ಭವನದ ಸಮೀಪ ನಿಂತಿರುವುದನ್ನು ಕಂಡ ಸಾರ್ವಜನಿಕರು ಈ ಬಗ್ಗೆ ಕುತೂಹಲದಿಂದ ವೀಕ್ಷಿಸಿದಾಗ ಭವನದ ಒಳಗಡೆ ಭೋಜನಕೂಟ ನಡೆಯುತ್ತಿರುವದು, ಅಲ್ಲಿ ಕಂದಾಯ, ಶಿಕ್ಷಣ ಇಲಾಖೆಗಳ ಹಿರಿ,ಕಿರಿಯ ಅಧಿಕಾರಿಗಳು, ಸಿಬ್ಬಂದಿಗಳು,ಶಿಕ್ಷಕರು ಕೋವಿಡ್-೧೯ರ ನಿಯಮ ಮರೆತು ಪಾಲ್ಗೊಂಡಿದ್ದು , ತಾಲೂಕ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಇನ್ನಿತರ ಪದಾಧಿಕಾರಿಗಳು ನಿಯಮ ಅನುಸರಿಸದಿರುವುದು ಕಂಡುಬಂದಿದೆ.

ಸರಕಾರಿ ನಿಯಮಗಳು ಜನತೆಗೆ ಒಂದು ರೀತಿ, ಸರಕಾರಿ ನೌಕರರಿಗೆ ಒಂದು ರೀತಿಯೇ? ಎಂದು ಪ್ರಶ್ನಿಸಿರುವ ಸಾರ್ವಜನಿಕರು ಖಾಸಗಿಯಾಗಿ ನಡೆಸುವ ಕಾರ್ಯಕ್ರಮಗಳಿಗೆ ಸರಕಾರಿ ನಿಯಮ ಎಂದು ಅಡಚಣೆ ಮಾಡುವ ಅಧಿಕಾರಿಗಳು,ಸಿಬ್ಬಂದಿಗಳೇ ಕಾನೂನು ಉಲ್ಲಂಘಿಸಿದ್ದಾರೆ. ತಮ್ಮಿಂದ ಅನುಮತಿ ಪಡೆಯದಿರುವ ಕೂಟದಲ್ಲಿ ತಾವೇ ಪಾಲ್ಗೊಂಡಿದ್ದಾರೆ.ಅವರ ಬಗ್ಗೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಮಾಜಕ್ಕೆ ಮಾದರಿಯಾಗಿರಬೇಕಾದ ಶಿಕ್ಷಕ ಸಮುದಾಯಕ್ಕೆ ಕಪ್ಪು ಚುಕ್ಕೆ ಹಚ್ಚುವ ಕೃತ್ಯವನ್ನು ಸಂಘದ ಪದಾಧಿಕಾರಿಗಳು ಮಾಡಿದ್ದಾರೆ. ಶಿಕ್ಷಕ ವೃತ್ತಿಗಿಂತ ರಾಜಕಾರಣ,ಓಲೈಸುವಿಕೆಯೇ ಮುಖ್ಯವಾದ ಕೆಲವು ಪದಾಧಿಕಾರಿಗಳು ಶಿಕ್ಷಕರಸಂಘವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.ಒಂದು ಮೂಲದ ಪ್ರಕಾರ ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷರಿಗೂ ಮುಂಚಿತವಾಗಿ ತಿಳಿಸದೇ ಭವನವನ್ನು ಭೋಜನಕೂಟಕ್ಕೆ ಬಳಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *