ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ

ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ: ಜೀವವೈವಿಧ್ಯ ಮಂಡಳಿ

ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಜೀವವೈವಿಧ್ಯ ಮಂಡಳಿ ಹೇಳಿದೆ. 

ಜೀವವೈವಿಧ್ಯತೆಗಳನ್ನು ರಕ್ಷಿಸುವ ಗುರುತರ ಜವಾಬ್ಧಾರಿ ಹೋಂದಿರುವ ರಾಜ್ಯ ಜೀವವೈವಿಧ್ಯತಾ ಮಂಡಳಿ ಈ ವರ್ಷ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಿದ್ದು ಈ ಕೆಲಸದ ಜೊತೆಗೆ ಜೀವವೈವಿಧ್ಯತೆ ರಕ್ಷಣೆಯ ನಿರಂತರ ಕೆಲಸವನ್ನೂ ಮುಂದುವರಿಸಲಿದೆ ಎಂದು ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಜೀವವೈ ವಿಧ್ಯತಾ ಜಾಗೃತಿ ಅಭಿಯಾನದ ಬಗ್ಗೆ ಸಿದ್ಧಾಪುರದಲ್ಲಿ ಪೂರ್ವತಯಾರಿ ಸಭೆಯ ಬಳಿಕ  ಸಮಾಜಮುಖಿ ಡಾಟ್ ನೆಟ್. ದೊಂದಿಗೆ ಮಾತನಾಡಿದ ಅವರು ರಾಜ್ಯದ ಕೆರೆಗಳ ರಕ್ಷಣೆ ಅದರ ಜೊತೆಗೆ ಜೀವವೈವಿಧ್ಯತಾ ರಕ್ಷಣೆ ವಿಚಾರಗಳ ಹಿನ್ನೆಲೆಯಲ್ಲಿ ರಾಜ್ಯ  ಅರಣ್ಯ ಮತ್ತು ಪರಿಸರ ಸಚಿವರಿಗೆ ಮನವಿ ನೀಡಿದ್ದೇವೆ. ಆ ಮನವಿಯಲ್ಲಿ 2010 ರ ಶಿಫಾರಸ್ಸುಗಳನ್ನು ಪರಿಷ್ಕರಿಸಿ ನೀಡಲಾಗಿದೆ. ಇದೇ ತಿಂಗಳಲ್ಲಿ ರಾಜ್ಯದಾದ್ಯಂತ ಜೀವವೈವಿಧ್ಯತಾ ಜಾಗೃತಿ ಅಭಿಯಾನ ನಡೆಯಲಿದ್ದು ಅದಕ್ಕಾಗಿ ಪೂರ್ವತಯಾರಿ ಸಭೆಗಳನ್ನು ನಡೆಸುತಿದ್ದೇವೆ. ಕೆಲವು ವರ್ಷಗಳಿಂದ ಕುಂಟಿತವಾಗಿದ್ದ ಜೀವವೈವಿಧ್ಯತಾ ಮಂಡಳಿ ಚಟುವಟಿಕೆಗಳನ್ನು ಈಗ ಚುರುಕುಗೊಳಿಸಿದ್ದೇವೆ ಎಂದರು.

file photo

ಜೀವ ವೈವಿಧ್ಯ ಜಾಗೃತಿ ಅಭಿಯಾನ
ಸಿದ್ದಾಪುರ,
ಕರ್ನಾಟಕ ಜೀವ ವೈವಿಧ್ಯ ಮಂಡಳಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜೀವ ವೈವಿಧ್ಯದ ಕುರಿತಾಗಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅದಕ್ಕೆ ಈಗಾಗಲೇ ಚಾಲನೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿಈ ಜಾಗೃತಿ ಅಭಿಯಾನಕ್ಕೆ ಜು.೧೨ರಂದು ತಾಲೂಕಿನ ಹೇರೂರಿನ ಶ್ರೀ ಸಿದ್ದಿವಿನಾಯಕ ದೇವರ ಪವಿತ್ರವನದಲ್ಲಿ ಚಾಲನೆ ನೀಡಲಿದ್ದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ. ಅದೇ ಸಂದರ್ಭದಲ್ಲಿ ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಜೀ ವೃಕ್ಷರೋಪಣ ನೆರವೇರಿಸಲಿದ್ದಾರೆ. ಹೇರೂರಿನ ಗುಡ್ಡದ ಅತಿಕ್ರಮಣ ತಡೆದು, ಅದನ್ನುಸಂರಕ್ಷಿಸಿ ೨೫ ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಅದಕ್ಕೆ ದೇವರಕಾಡು ಎನ್ನುವ ಪಟ್ಟವನ್ನು ಕೊಟ್ಟು ಹೆಚ್ಚಿನ ಸಂರಕ್ಷಣೆಗೆ ಚಾಲನೆ ನೀಡಲಾಗುವದು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.

ಅವರು ತಾಪಂ ಸಭಾಭವನದಲ್ಲಿ ಈ ಕುರಿತ ಪೂರ್ವಭಾವಿ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ ಎಲ್ಲೆಡೆ ಈಗಾಗಲೇ ಜೀವ ವೈವಿಧ್ಯ ಜಾಗೃತಿ ಅಭಿಯಾನ ಆರಂಭಗೊಂಡಿದೆ. ಅರಣ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಇದರಲ್ಲಿ ಪಾಲ್ಗೊಳ್ಳುವವರಿದ್ದಾರೆ. ಈ ಅಭಿಯಾನದ ಮುಖ್ಯ ಉದ್ದೇಶ ಗ್ರಾಮ,ತಾಲೂಕು,ಜಿಲ್ಲೆ ಹಾಗೂ ನಗರ ವ್ಯಾಪ್ತಿಯ ಜೀವ ವೈವಿಧ್ಯ ಸಮಿತಿಗಳನ್ನು ಇನ್ನಷ್ಟು ಬಲಗೊಳಿಸುವದು. ಈ ಸಂದರ್ಭದಲ್ಲಿ ಸಭೆ ನಡೆಸಿ ಈವರೆಗೆ ಸಂಗ್ರಹಿಸಲಾದ ದಾಖಲಾತಿಗಳ ಮಾಹಿತಿ ನೀಡುವದು.ಪ್ರತಿ ಗ್ರಾಪಂನಲ್ಲೂ ಎಷ್ಟು ಕೆರೆಗಳಿವೆ, ಅತಿಕ್ರಮಣವಾಗಿರುವದು ಎಷ್ಟು, ಅದನ್ನು ತೆರವುಗೊಳಿಸಲು ಏನು ಮಾಡಬಹುದು ಎನ್ನುವದನ್ನು ಗಮನಸುವದು ಮತ್ತು ಅಲ್ಲಿನ ಜೀವ ವೈವಿಧ್ಯದ ಕುರಿತಂತೆ ಸಾಧನೆ ಮಾಡಿದವರನ್ನು ಸನ್ಮಾನಿಸುವದು ಮುಂತಾದ ಉದ್ದೇಶಗಳನ್ನು ಹೊಂದಿದೆ ಎಂದರು.

ಸಿದ್ದಾಪುರ ತಾಲೂಕು ರಾಜ್ಯದ ೧೦ ಮಾದರಿ ಜೀವ ವೈವಿಧ್ಯ ಸಮಿತಿಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು ಕಳೆದ ೧ ವರ್ಷದ ಚಟುವಟಿಕೆಗಳ ಹಿನ್ನೆಲೆಯಲ್ಲಿ ವಿಶೇಷ ಚಾಲನೆ ನೀಡಲಾಗುತ್ತಿದೆ. ತಾಲೂಕಿನ ಕತ್ತಲೆಕಾನಿಗೆ ಜೀವ ವೈವಿಧ್ಯ ಪಾರಂಪರಿಕ ತಾಣ ಎನ್ನುವ ಮಾನ್ಯತೆ ನೀಡಲಾಗಿದೆ. ಭಾನ್ಕುಳಿಯ ಗೋಸ್ವರ್ಗವನ್ನು ಸ್ಥಳೀಯ ಜಾನುವಾರು ತಳಿ ಸಂರಕ್ಷಣಾ ಕೇಂದ್ರವೆಂದು ಮಾನ್ಯತೆ ನೀಡಲಾಗಿದೆ ಎಂದರು. ಕಳೆದ ೨೦೦೯-೧೦ರಲ್ಲಿ ಸಮೀಕ್ಷೆ ಮಾಡಿದಾಗ ೧೬ ವಿನಾಶದಂಚಿನಲ್ಲಿರುವ ಸಸ್ಯ ಪ್ರಬೇಧಗಳನ್ನು ಗುರುತಿಸಿ ವರದಿ ಮಾಡಲಾಗಿತ್ತು. ಈಗ ಮತ್ತೆ ೧೬ ವಿನಾಶದಂಚಿನಲ್ಲಿರುವ ಸಸ್ಯ ಪ್ರಬೇಧಗಳನ್ನು ಗುರುತಿಸಲಾಗಿದ್ದು ಇದೊಂದು ಅತ್ಯಂತ ಅಪಾಯಕಾರಿ ಸಂಗತಿಯಾಗಿದ್ದು ಆ ಬಗ್ಗೆ ಜಾಗೃತರಾಗಬೇಕಿದೆ ಎಂದರು. ಜು.೧೨ರ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಂಘ,ಸಂಸ್ಥೆಗಳು, ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಕೋರಿಕೊಂಡರು.
ಮಂಡಳಿಯ ಸದಸ್ಯ ಗಣಪತಿ ಹೆಗಡೆ ಬಿಸಲಕೊಪ್ಪ, ಪರಿಸರ ಕಾರ್ಯಕರ್ತ ಗೋಪಾಲಕೃಷ್ಣ ತಂಗರ‍್ಮನೆ,ತಾಪಂ ಇಒ ಪ್ರಶಾಂತರಾವ್, ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಚೆನ್ನಣ್ಣನವರ್, ಪಿಡಿಓಗಳಾದ ಸುಬ್ರಹ್ಮಣ್ಯ ಹೆಗಡೆ, ನಟರಾಜ್, ಗೌರೀಶ ಹೆಗಡೆ ಇದ್ದರು.

btr

ಬೆಂಗಳೂರು: ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಎಂದು ಜೀವವೈವಿಧ್ಯ ಮಂಡಳಿ ಹೇಳಿದೆ. 

ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ನೇತೃತ್ವದ ಸಮಿತಿಯು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಬುಧವಾರ ವರದಿ ಸಲ್ಲಿಸಿತು. 

https://imasdk.googleapis.com/js/core/bridge3.470.1_en.html#goog_1674447211

https://imasdk.googleapis.com/js/core/bridge3.470.1_en.html#goog_1674447213

ವರದಿಯಲ್ಲಿ ವಿನಾಶದ ಅಂಚಿನಲ್ಲಿರುವ ಪುನಗಿನ ಬೆಕ್ಕು, ಕಾಡುಪಾಪ, ನೀರಾನೆ, ಬಾವಲಿ, ತಿಮಿಂಗಿಲ ಪ್ರಭೇದಗಳು ಸೇರಿದಂತೆ, ಒಟ್ಟೂ 40 ಸಸ್ತನಿಗಳನ್ನು ವಿನಾಶದಂಚಿಗೆ ತಲುಪಿದವು. ಸೀತಾ ಅಶೋಕ, ಮರದರಶಿನ, ಭೂತಾಳಗಿಡ, ಎಣ್ಣೆಮರ, ನೀರನೇರಳೆ ಇತ್ಯಾದಿ ಪ್ರಭೇದಗಳು ಸೇರಿದಂತೆ, ಒಟ್ಟೂ 16 ಪ್ರಭೇದಗಳಿವೆ. ವಿನಾಶದ ಅಂಚಿನ ಸಸ್ಯ-ಪ್ರಾಣಿ ಪ್ರಭೇದ ಗಳ ಪರಿಷ್ಕೃ ತ ಪಟ್ಟಿಯನ್ನು ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ತಲುಪಿಸಬೇಕು. 

ಅರಣ್ಯ ಸಂರಕ್ಷಣಾ ಯೋಜನೆಗಳಲ್ಲಿ ವಿನಾಶದ ಅಂಚಿನ ಸಸ್ಯ-ಪ್ರಾಣಿ ವೈವಿಧ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು. ತೋಟಗಾರಿಕೆ, ಮೀನುಗಾರಿಕಾ ಇಲಾಖೆ ಸೇರಿ ತಮ್ಮ ವ್ಯಾಪ್ತಿಯಲ್ಲಿನ ಈ ಪ್ರಭೇದಗಳ ರಕ್ಷಣೆಗೆ ಮತ್ತು ಸಂವರ್ಧನೆಗೆ ಆದ್ಯತೆ ನೀಡಬೇಕು. ಅರಣ್ಯ ಇಲಾಖೆಯ ನರ್ಸರಿ ಯೋಜನೆಯಲ್ಲಿ, ಔಷಧಿ ಸಸ್ಯ ಸಂರಕ್ಷಿತ ಪ್ರದೇಶ, ಪವಿತ್ರವನ ಯೋಜನೆಗಳಲ್ಲಿ ವಿನಾಶದ ಅಂಚಿನ ಸಸ್ಯ ಪ್ರಭೇದಗಳಿಗೆ ಪುರಸ್ಕಾರ ಸಿಗಬೇಕು ಎಂದು ಶಿಫಾರಸು ಮಾಡಿದೆ. 

ಜೀವವೈವಿಧ್ಯ ಕಾಯಿದೆ ಅನ್ವಯ-2010ರಲ್ಲಿ ವಿನಾಶದ ಅಂಚಿನ ಹೂ ಬಿಡುವ ಸಸ್ಯಗಳು ಹಾಗೂ ಕಶೇರುಕ ಪ್ರಾಣಿಗಳನ್ನು ಮಂಡಳಿಯ ತಜ್ಞರ ಸಹಾಯದೊಂದಿಗೆ ಗುರುತಿಸಲಾಗಿತ್ತು. ಈ ಪಟ್ಟಿಯನ್ನು ಕೇಂದ್ರದ ಅರಣ್ಯ ಮಂತ್ರಾಲಯ ಗೆಜೆಟ್‍ನಲ್ಲಿ ಪ್ರಕಟಿಸಿತ್ತು. ಇದೀಗ 2020-21ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ತಜ್ಞರ ಸಮಿತಿ ರಚಿಸಿ 2010ರ ಪಟ್ಟಿಯನ್ನು ಪರಿಷ್ಕಾರ ಮಾಡಿದೆ. 

ಈ ತಜ್ಞ ಸಮಿತಿ ನೀಡಿದ ವರದಿಯನ್ನು ಮಂಡಳಿ ಜನವರಿ 2021ರಲ್ಲಿ ಅಂಗೀಕರಿಸಿದೆ. ಪರಿಷ್ಕರಿಸಿರುವ ಪಟ್ಟಿಯನ್ನು ಕೇಂದ್ರ ಅರಣ್ಯ ಪರಿಸರ ಮಂತ್ರಾಲಯಕ್ಕೆ, ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರಕ್ಕೆ ಸಲ್ಲಿಸಲಿದೆ. ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ.

2010ರಲ್ಲಿ 16 ವಿನಾಶದ ಅಂಚಿನ ಸಸ್ಯ ಪ್ರಭೇದ ಗುರುತಿಸಲಾಗಿತ್ತು. 2021ರಲ್ಲಿ ಇದೀಗ ಹಿಂದಿನ 16 ಪ್ರಭೇದ ಸೇರಿ ಒಟ್ಟು 32 ಪ್ರಭೇದಗಳನ್ನು ವಿನಾಶದ ಅಂಚಿನಲ್ಲಿದೆ ಎಂದು ಗುರುತಿಸಲಾಗಿದೆ. ವ್ಯಾಪಕ ವಾಣೀಜ್ಯೀಕರಣಕ್ಕೆ ಒಳಗಾಗಿರುವ ಕಾಡಿನ ಸಸ್ಯಪ್ರಭೇದಗಳ ಸಂಖ್ಯೆ 7. ರಾಜ್ಯದ 40 ಸಸ್ತನಿಗಳನ್ನು 2021ರಲ್ಲಿ ವಿನಾಶದ ಅಂಚಿನ ಪ್ರಭೇದಗಳು ಎಂದು ಗುರುತಿಸಲಾಗಿದೆ. ಅಪಾಯದ ಅಂಚಿನ ಪಕ್ಷಿ ಪ್ರಭೇದಗಳು 23. ಸರೀಸೃಪ ಪ್ರಭೇದಗಳು 26, ಉಭಯವಾಸಿ ಪ್ರಭೇದಗಳು 21, ಸಿಹಿನೀರು ಮೀನುಪ್ರಭೇದಗಳು 53, ಸಮುದ್ರ ಮೀನಿನ ಪ್ರಭೇದಗಳು 35. ವಿನಾಶದ ಅಂಚಿನ ಅಕಶೇರುಕ ಪ್ರಭೇದಗಳನ್ನು ಗುರುತಿಸಬೇಕು ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ.

ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಲೇ ಇರುವ ನೈಸರ್ಗಿಕ ಸಂಪನ್ಮೂಲಗಳ ಮೇಲಿನ ಒತ್ತಡದಿಂದಾಗಿ, ನಾಡಿನ ಅಪಾರ ಬಗೆಯ ಸಸ್ಯ ಹಾಗೂ ಪ್ರಾಣಿ ಪ್ರಭೇದಗಳು ಕಣ್ಮರೆಯಾಗುತ್ತಿವೆ. ಇದು ಭವಿಷ್ಯದ ನೀರು, ಆಹಾರ, ಪರಿಸರ ಸುರಕ್ಷತೆ ಇತ್ಯಾದಿಗಳ ಸುರಕ್ಷತೆಗೆ ಮಾರಕವಾಗಬಲ್ಲ ಸಂಗತಿ. ಹೀಗಾಗಿ, `ಜೀವವೈವಿಧ್ಯ ಕಾನೂನು’ ಅಡಿ, ಈ ಬಗೆಯ ವಿನಾಶದಂಚಿಗೆ ತಲುಪಿರುವ ಪ್ರಭೇದಗಳನ್ನು ಕಾಲಕಾಲಕ್ಕೆ ಗುರುತಿಸಿ, ಸಂರಕ್ಷಿಸುವ ಜವಾಬ್ದಾರಿಯಿದೆ. ಈ ಹಿನ್ನೆಲೆಯಲ್ಲಿ, `ಕರ್ನಾಟಕ ಜೀವವೈವಿಧ್ಯ ಮಂಡಳಿ’ಯು ರಾಜ್ಯದ ವಿನಾಶದಂಚಿನ ಸಸ್ಯ ಹಾಗೂ ಪ್ರಾಣಿಪ್ರಭೇದಗಳ ಪಟ್ಟಿಯನ್ನು ತಜ್ಞರ ಸಮಿತಿಯ ಮೂಲಕ ಪರಿಷ್ಕರಿಸಿದೆ. 

ಕರ್ನಾಟಕ ಜೀವವೈವಿಧ್ಯ ಮಂಡಳಿಯ ಸದಸ್ಯ-ಕಾರ್ಯದರ್ಶಿ ಪುನೀತ್ ಪಾಠಕ್ ಅವರು ಮಾತನಾಡಿ, ಯಾವುದನ್ನು ಉತ್ತಮವಾಗಿ ಸಂರಕ್ಷಿಸಬೇಕು ಎಂಬುದರ ಬಗ್ಗೆ ಗಮನ ಹರಿಸಲು ಸರ್ಕಾರ ಮತ್ತು ನಾಗರೀಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ಮುಂಬರುವ ವರ್ಷಗಳಲ್ಲಿ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ ಎಂದು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *