ಸಿದ್ಧಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಜಾಗ ಕಾಯ್ದಿರಿಸಲು ಅವಕಾಶ

ಸಿದ್ಧಾಪುರ ತಾಲೂಕಿನ ಕೈಗಾರಿಕಾ ವಸಾಹತು ಪ್ರದೇಶ ಮನ್ಮನೆ ಗ್ರಾಮಪಂಚಾಯತ್ ಮಳಲವಳ್ಳಿ ಯಲ್ಲಿ ಸ್ಥಾಪನೆಯಾಗುತಿದ್ದು ಈ ಪ್ರದೇಶದಲ್ಲಿ ಜಾಗೆ ಕಾಯ್ದಿರಿಸಿಕೊಳ್ಳುವ ಆಸಕ್ತರು ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮ ಕೋರಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿ.ಜೆ.ಪಿ. ಪ್ರಮುಖರು ಈ ವಿಷಯ ತಿಳಿಸಿದರು.

ಬಹುವರ್ಷಗಳ ಬೇಡಿಕೆಯಾಗಿದ್ದ ಸಿದ್ಧಾಪುರದ ಕೈಗಾರಿಕಾ ವಸಾಹತು ಸ್ಥಾಪನೆ ಕನಸು ಈಗ ನನಸಾಗುತ್ತಿದೆ. ಸಣ್ಣ, ಅತಿಸಣ್ಣ ಉದ್ಯಮ ನಡೆಸುವ ಹಾಲಿ, ಭಾವಿ ಉದ್ಯಮಿಗಳು ಇಲ್ಲಿ ಸ್ಥಳ ಕಾಯ್ದಿರಿಸಿಕೊಂಡು ಅನುಕೂಲ ಪಡೆಯಬಹುದು ಎಂದರು.

ವಿಧಾನಸಭಾ ಅಧ್ಯಕ್ಷ ಕಾಗೇರಿ ವಿಶ್ವೇಶ್ವರ ಹೆಗಡೆಯವರ ದೂರದೃಷ್ಟಿಯಿಂದ ಸಿದ್ಧಾಪುರದ ಕೈಗಾರಿಕಾ ವಸಾಹತು ಕೋಡ್ಕಣಿ ಹೋಬಳಿ ಮಳಲವಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ.ತಾಲೂಕಿನ ಜನತೆ ಇದರ ಪ್ರಯೋಜನ ಪಡೆಯಬೇಕು.- ಮಾರುತಿ ಟಿ ನಾಯ್ಕ, ಪ.ಪಂ. ಸದಸ್ಯ

ಹಿಂದಿನ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಳಲವಳ್ಳಿಯ ಈ ಪ್ರದೇಶ ವನ್ನು ಬಂಗಾರಮಕ್ಕಿ ದೇವಸ್ಥಾನಕ್ಕೆ ಹಸ್ತಾಂತರ ಮಾಡುವ ಪ್ರಯತ್ನ ನಡೆದಿತ್ತು. ಆಗ ವಿಶ್ವೇಶ್ವರ ಹೆಗಡೆ ಶಾಸಕರು, ಸಚಿವರು ಆಗಿದ್ದರು. ಆದರೆ ಅಂದಿನ ಮನ್ಮನೆ ಗ್ರಾ.ಪಂ. ಆಡಳಿತ, ಅಧ್ಯಕ್ಷರು, ಅಂದಿನ ತಾಲೂಕು ಪಂಚಾಯತ್ ಸದಸ್ಯ ವಸಂತ ನಾಯ್ಕ ಎಲ್ಲರೂ ಸೇರಿ ಈ ಸರ್ಕಾರಿ ಆಸ್ತಿಯನ್ನು ದೇವಸ್ಥಾನಕ್ಕೆ ಪರಬಾರೆ ಮಾಡುವುದನ್ನು ತಡೆದಿದ್ದೆವು. ಮಳಲವಳ್ಳಿಯ ಸರ್ಕಾರಿ ಭೂಮಿ ಉಳಿಸಿದ ಶ್ರೇಯಸ್ಸು ಸ್ಥಳಿಯ ಆಡಳಿತ ವ್ಯವಸ್ಥೆ,ಜನಪ್ರತಿನಿಧಿಗಳಿಗೆ ಸಲ್ಲುತ್ತದೆ. ಮತ್ತು ಈ ಪ್ರದೇಶವನ್ನು ಕೈಗಾರಿಕಾ ವಸಾಹತು ಮಾಡುವ ಪ್ರಸ್ಥಾವನೆ, ಪ್ರಯತ್ನ ಮಾಡಿದವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಈಗ ಇದರ ಕ್ರೆಡಿಟ್ ಪಡೆಯುವ ಶಾಸಕರು, ಅವರ ಅಭಿಮಾನಿ ಕಾರ್ಯಕರ್ತರು, ಪ.ಪಂ. ಸದಸ್ಯರು ಯಾರದೋ ಪ್ರಯತ್ನಕ್ಕೆ ತಮ್ಮ ಹೆಸರು ಅಂಟಿಸಿಕೊಂಡಂತಿದೆ.- ವೀರಭದ್ರ ನಾಯ್ಕ ರಾಜ್ಯ ರೈತ ಸಂಘದ ತಾಲೂಕಾಧ್ಯಕ್ಷ

ಆಸಕ್ತರು ಸಂಪರ್ಕಿಸಬೇಕಾದ ಅಧಿಕಾರಿ-ವಿಳಾಸ- ಸಹಾಯಕ ಪ್ರಧಾನ ವ್ಯವಸ್ಥಾಪಕರು, (ಕೈವ) ಕರಾಸಕೈ ಅನಿನಿ,ಕೈಗಾರಿಕಾ ವಸಾಹತು ಹುಬ್ಬಳ್ಳಿ ದೂರವಾಣಿ ಸಂಖ್ಯೆ-0836-2332006 ಮೊಬೈಲ್-8884415796

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *