ಮಳಲವಳ್ಳಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸ್ಥಳಿಯರ ಶರತ್ತುಬದ್ಧ ಅನುಮತಿ

ಸಿದ್ಧಾಪುರ ತಾಲೂಕಿನ ಮನ್ಮನೆ ಮಳಲವಳ್ಳಿಯಲ್ಲಿ ಸ್ಥಾಪನೆಯಾಗಲಿರುವ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ, ಉದ್ಯಮ ಸ್ಥಾಪನೆ ಸೇರಿದಂತೆ ಎಲ್ಲಾ ಅನುಕೂಲಗಳಿಗೆ ಪ್ರತಿಶತ 50 ಕ್ಕಿಂತ ಹೆಚ್ಚು ಸ್ಥಳಿಯರಿಗೆ ಆದ್ಯತೆ ನೀಡಲು ಮಳಲವಳ್ಳಿ ಗ್ರಾಮ ಸಮೀತಿ ಆಗ್ರಹಿಸಿದೆ.

ಸೋಮುವಾರ ಇಲ್ಲಿಯ ಈಶ್ವರ ದೇವಸ್ಥಾನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಗ್ರಾಮ ಸಮೀತಿ ಅಧ್ಯಕ್ಷ ಗೋಪಾಲ ನಾಯ್ಕ, ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ, ಧರ್ಮಪ್ಪ ನಾಯ್ಕ, ಸ್ವಾಮಿ ನಾಯ್ಕ ಮತ್ತು ಗೋಪಾಲ ನಾಯ್ಕ ಸೇರಿದ ಪ್ರಮುಖರು ಮಳಲವಳ್ಳಿಯಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆಗೆ ಗ್ರಾಮಸ್ಥರ ವಿರೋಧವಿತ್ತು ಆದರೆ ಸರ್ಕಾರದ ಸದುದ್ದೇಶದ ಯೋಜನೆಗೆ ವಿರೋಧ ಮಾಡುವುದಕ್ಕಿಂತ ನಮ್ಮ ಬೇಡಿಕೆ ಈಡೇರಿಸಲು ಬೇಡಿಕೆ ಇಡುವುದೇ ಸರಿಯಾದ ಕ್ರಮ. ಮಳಲವಳ್ಲಿಯಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣವಾದರೆ ಇಲ್ಲಿಯ ಕೈಗಾರಿಕಾ ಘಟಕ ಸ್ಥಾಪನೆ, ಉದ್ಯೋಗ, ಕೈಗಾರಿಕಾ ಘಟಕಗಳ ಪ್ರದೇಶ ನಿಗದಿ ಯಾವುದೇ ಅವ ಕಾಶ, ಅನುಕೂಲಕ್ಕೆ ಪ್ರತಿಶತ 50 ಕ್ಕಿಂತ ಹೆಚ್ಚು ಸ್ಥಳಿಯರಿಗೆ ಅವಕಾಶವಿರಬೇಕು. ಸ್ಥಳಿಯ ಪರಿಸರ, ಈ ಪ್ರದೇಶದ ಹಿತಾಸಕ್ತಿ, ಜನರ ಅನುಕೂಲಕ್ಕೆ ವಿರುದ್ಧ ವಾಗಿ ಏನೂ ನಡೆಯಬಾರದು. ಗ್ರಾಮಸ್ಥರು ಸಂರಕ್ಷಿಸಿರುವ ಯೋಜಿತ ಕೈಗಾರಿಕ ಪ್ರದೇಶದ 25% ಭೂಮಿಯನ್ನು ಸ್ಥಳಿಯರಿಗೆ ಸಾರ್ವಜನಿಕ ಅಗತ್ಯಗಳಿಗೆ ಬಿಟ್ಟುಕೊಡಬೇಕು, ಉದ್ಯಾನವನ, ಕ್ರೀಂಡಾಂಗಣ ಸೇರಿದ ಗ್ರಾಮದ ಅವಶ್ಯಕತೆಗಳನ್ನು ಪೂರೈಸಿ ನಂತರ ಕೈಗಾರಿಕಾ ವಸಾಹತು ಸ್ಥಾಪನೆ ಉದ್ದೇಶದ ನಿಗದಿತ ಕೆಲಸ ಮಾಡಬೇಕು ಎಂದು ಗ್ರಾಮದ ನಿರ್ಧಾರವನ್ನು ವಿವರಿಸಿದರು.

ಈ ಸಂರ್ಭದಲ್ಲಿ ಸ್ಥಳಿಯರಿಗೆ ಕೈಗಾರಿಕಾ ಪ್ರದೇಶದ ಉದ್ದೇಶ, ಅನುಕೂಲಗಳ ಬಗ್ಗೆ ಸಮಾಜಮುಖಿ ಸಮೂಹದ ಮುಖ್ಯಸ್ಥ ಕೋಲಶಿರ್ಸಿ ಕನ್ನೇಶ್ ಮತ್ತು ಪತ್ರಕರ್ತ ಸುರೇಶ ಕಡಕೇರಿ ಮಾಹಿತಿ ನೀಡಿದರು. ತಾಲೂಕಿನ ಕೈಗಾರಿಕಾ ಪ್ರದೇಶದ ನಿರ್ಮಾಣ. ಸ್ಥಾಪನೆ ಬಗ್ಗೆ ವಿರೋಧ ಬೇಡ ಆದರೆ ಗ್ರಾಮ ಮತ್ತು ಗ್ರಾಮದ ಹಿತಾಸಕ್ತಿಗೆ ಪೂರಕವಾಗಿ ಆಗಬೇಕಾದ ಕೆಲಸ, ಅಭಿವೃದ್ಧಿಯ ವಿಚಾರದಲ್ಲಿ ನಿರ್ಬಂ ಧ ಹೇರುವುದು ನಿಮ್ಮ ಹಕ್ಕು ಜೊತೆಗೆ ಸ್ಥಳಿಯರೂ ಕೂಡಾ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ಕನ್ನೇಶ್ ವಿನಂತಿಸಿದರು.

ಕೈಗಾರಿಕಾ ಪ್ರದೇಶ ನಿರ್ಮಾಣದಿಂದ ಮಳಲವಳ್ಳಿ, ಮನ್ಮನೆ ಗ್ರಾಮ ಪಂಚಾಯತ್ ಗಳಿಗೆ ಅನುಕೂಲವಿದೆ ಆದರೆ ಸ್ಥಳಿಯರು ಸಂಘಟಿತರಾಗಿ ತಮ್ಮ ಬೇಡಿಕೆ ಕೇಳಿ ಪಡೆಯಬೇಕು ಎಂದು ಸುರೇಶ್ ಕಡಕೇರಿ ಮಾಹಿತಿ ನೀಡಿದರು. ಗ್ರಾಮ ಸಮೀತಿ ಅಧ್ಯಕ್ಷ ಗೋಪಾಲ ನಾಯ್ಕರ ಅಧ್ಯಕ್ಷತೆಯಲ್ಲಿ ಸೇರಿದ ಗ್ರಾಮದ ಹಿರಿಯರು, ಪ್ರಮುಖರು ಕೈಗಾರಿಕಾ ಪ್ರದೇಶ ಸ್ಥಾಪನೆಗೆ ವಿರೋಧ ಮಾಡುತಿದ್ದ ನಾವು ಗಣ್ಯರ ಸಮಾಜಾಯಿಸಿಯಿಂದ ಹಿಂದೆ ಸರಿದಿದ್ದೇವೆ. ಸರ್ಕಾರ, ಸಣ್ಣ ಕೈಗಾರಿಕ ಅಭಿವೃದ್ಧಿ ನಿಗಮ ನಮ್ಮ ಹಿತಾಸಕ್ತಿ ಕಾಯದಿದ್ದರೆ ನಮ್ಮ ಸಹಕಾರ ಸಿಗುವುದಿಲ್ಲ ಎಂದು ಎಚ್ಚರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *