ಮೋದಿ ಪ್ರತಿಸ್ಫರ್ಧಿ ನಾಯಕ ಯಾರು?

ಇಂತಹ ಒಬ್ಬ ನಾಯಕರ ಅವಶ್ಯಕತೆ ಇದೆ’..; 2024ರ ಚುನಾವಣೆಯಲ್ಲಿ ಬಿಜೆಪಿ ಎದುರಿಸುವ ಕುರಿತು ಸಂಜಯ್ ರಾವತ್ ಹೇಳಿಕೆ!

2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

Sanjay Raut

ಮುಂಬೈ: 2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

https://imasdk.googleapis.com/js/core/bridge3.471.1_en.html#goog_1650342069

ಒಂದು ಕಡೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಪ್ರತಿಪಕ್ಷಗಳನ್ನು ಒಂದುಗೂಡಿಸುವ ಮಾತು ಮುನ್ನೆಲೆಗೆ ಬರುತ್ತಿರುವಂತೆಯೇ ಇತ್ತ ಶಿವಸೇನೆ ಸಂಸದ ಮತ್ತು ವಕ್ತಾರ ಸಂಜಯ್ ರಾವತ್ ಮುಂಬರುವ ಪ್ರಧಾನಿ ಅಭ್ಯರ್ಥಿ ಕುರಿತು ಮಹತ್ವದ ಅಂಶಗಳನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸ್ಪರ್ಧಿಸಲು ಪ್ರತಿಪಕ್ಷಗಳಿಗೆ ಅವರಷ್ಟೇ ಪ್ರಭಾವಿ ನಾಯಕರಿಲ್ಲ. ಆದರೆ ಪ್ರತಿಪಕ್ಷಗಳು ಪ್ರಭಾವಿ ನಾಯಕನನ್ನು ಆರಿಸುವ ವರೆಗೂ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಲು ಸಾಧ್ಯವಿಲ್ಲ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಹೋಲಿಸಿದರೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅತ್ಯುತ್ತಮ ಅಭ್ಯರ್ಥಿ. ಅಂತೆಯೇ ಹಲವು ನಾಯಕರು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಹೆಸರೂ ಹೇಳುತ್ತಿದ್ದಾರೆ. ಅದಾಗ್ಯೂ ಪ್ರಸ್ತುತ ಪ್ರತಿಪಕ್ಷಗಳ  ಬಳಿ 2024ರ ಚುನಾವಣೆ ಎದುರಿಸಲು ದೊಡ್ಡ ಮತ್ತು ಅವಿರೋಧ ನಾಯಕರ ಹೆಸರಿಲ್ಲ. ಇದು ಹೀಗೆಯೇ ಮುಂದುವರೆದರೆ 2024ರಲ್ಲೂ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವಾಗುತ್ತದೆ. ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವುದು ಮತ್ತು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು  ಎದುರಿಸಲು ಒಂದು ಪ್ರಭಾವಿ ಮುಖದ ಮೇಲೆ ಒಮ್ಮತವನ್ನು ರೂಪಿಸುವುದು ಒಂದು ದೊಡ್ಡ ಕಾರ್ಯವಾಗಿದೆ. ಪ್ರತಿ ವಿರೋಧ ಪಕ್ಷವು ತನ್ನದೇ ನಾಯಕರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಇಚ್ಛಿಸುತ್ತದೆ.  

ತುರ್ತು ಪರಿಸ್ಥಿತಿ ನಂತರದ ಚುನಾವಣೆಗಳಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ವಿರುದ್ಧ ಜಯ ಪ್ರಕಾಶ್ ನಾರಾಯಣ್, ರಾಜೀವ್ ಗಾಂಧಿ ವಿರುದ್ಧ ವಿ.ಪಿ.ಸಿಂಗ್ ರಂತಹ ದಿಗ್ಗಜರು ಸೆಣಸಿದ್ದರು. ಬಳಿಕ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ ವಿರುದ್ಧ ನರೇಂದ್ರ ಮೋದಿ ಸವಾಲು ಒಡ್ಡಿದ್ದರು. ಅಂತಹ  ಪ್ರಭಾವಿ ವರ್ಚಸ್ಸುಳ್ಳ ನಾಯಕರು ನಮಗೆ ಬೇಕು. ಇದಕ್ಕೆ ಶರದ್ ಪವಾರ್ ಅವರೇ ಸರಿಯಾದ ಆಯ್ಕೆ ಎಂದು ರಾವತ್ ಹೇಳಿದ್ದಾರೆ.

ರಾಹುಲ್ ಗಾಂಧಿಗಿಂತ ದೊಡ್ಡ ನಾಯಕರಿದ್ದಾರೆ
ಇದೇ ವೇಳೆ ರಾಹುಲ್ ಗಾಂಧಿ ಕುರಿತಂತೆ ಮಾತನಾಡಿದ ಸಂಜಯ್ ರಾವತ್ ಅವರು, ‘ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ದೊಡ್ಡ ಮುಖಂಡರಾಗಿದ್ದಾರೆ. ಆದರೆ ಅವರಿಗಿಂತ ಹಿರಿಯ ಮತ್ತು ಪ್ರಭಾವಿ ಮುಖಂಡರೂ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವದ ಬಗ್ಗೆ ಬಿಕ್ಕಟ್ಟು ಇದೆ. ಅದಕ್ಕಾಗಿಯೇ ಕಾಂಗ್ರೆಸ್  ಪಕ್ಷಕ್ಕೇ ಇನ್ನೂ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಪ್ರಶಾಂತ್ ಕಿಶೋರ್ ಉತ್ತಮ ನೆರವಾಗಬಹುದು
ಇದೇ ವೇಳೆ ರಾಜಕೀಯ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಬಗ್ಗೆ ಮಾತನಾಡಿದ ಸಂಜಯ್ ರಾವತ್, ‘ಪ್ರಶಾಂತ್ ಕಿಶೋರ್ ಬಂಗಾಳದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ತೃಣಮೂಲ ಕಾಂಗ್ರೆಸ್ ಮತ್ತು ಪ್ರಶಾಂತ್ ಕಿಶೋರ್ ನಡುವೆ ಒಪ್ಪಂದವೂ  ನಡೆದಿತ್ತು. ಪ್ರಶಾಂತ್ ಕಿಶೋರ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡಿದ್ದರು. ನಮ್ಮೊಂದಿಗೂ ಸ್ವಲ್ಪ ಕೆಲಸ ಮಾಡಿದ್ದಾರೆ. ಬಹುಶಃ ಮುಂದಿನ ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಶಾಂತ್ ಕಿಶೋರ್ ನೆರವಾಗಬಹುದು ಎಂದು ಹೇಳಿದರು.

ಕೊರೋನಾ ವೈರಸ್ 2ನೇ ಅಲೆ ಬಳಿಕ ಪ್ರಧಾನಿ ಮೋದಿ ಖ್ಯಾತಿ ಕುಸಿದಿದೆ. ಪ್ರಶಾಂತ್ ಕಿಶೋರ್ ಸರ್ಕಾರದ ವಿರುದ್ಧದ ವಿರೋಧವನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಊಹಾಪೋಹಗಳಿವೆ. ಪ್ರಶಾಂತ್ ಕಿಶೋರ್ ಮತ್ತು ಶರದ್ ಪವಾರ್ ಅವರು ಸ್ವಲ್ಪ ಸಮಯದ ಹಿಂದೆ ಹಲವಾರು ಸಭೆಗಳನ್ನು  ನಡೆಸಿದ್ದರು. ಈ ಸಭೆಗಳನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒಗ್ಗಟ್ಟಿನ ವಿರೋಧವನ್ನು ನಿರ್ಮಿಸುವ ಪ್ರಯತ್ನಗಳಾಗಿ ನೋಡಲಾಗುತ್ತಿದೆ ಎಂದು ಹೇಳಲಾಗಿದೆ.
 (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *