ಭಯಭೀತರು ಪಕ್ಷ ಬಿಡಲು ಸ್ವತಂತ್ರರು; ನಿರ್ಭೀತರಿಗೆ ಪಕ್ಷಕ್ಕೆ ಸ್ವಾಗತ: ರಾಹುಲ್ ಗಾಂಧಿ

ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

Rahul gandhi

ನವದೆಹಲಿ: ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. 

ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಪಕ್ಷದ ಸಾಮಾಜಿಕ ಜಾಲತಾಣದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್, ಜ್ಯೋತಿರಾಧಿತ್ಯ ಸಿಂದಿಯಾರನ್ನು ಉಲ್ಲೇಖಿಸಿ ಮಾತನಾಡಿದ ಅವರು ಭಯಭೀತರಾದವರು ಪಕ್ಷವನ್ನು ತೊರೆದಿದ್ದಾರೆ. ಹಾಗೆ ಹೆದರದ ಅನೇಕ ನಾಯಕರೂ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ಹೊರಗೆ ಇದ್ದಾರೆ. ಇವರೆಲ್ಲ ನಮ್ಮವರಾಗಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತನ್ನಿ. ನಮ್ಮ ಪಕ್ಷದೊಳಗಿನ ಭಯಭೀತರನ್ನು ಹೊರ ಹಾಕಬೇಕು ಎಂದು ಸಾಮಾಜಿಕ ಮಾಧ್ಯಮ ಕಾರ್ಯಕರ್ತರಿಗೆ ತಿಳಿಸಿದರು.

https://imasdk.googleapis.com/js/core/bridge3.471.1_en.html#goog_764114153

ಕೆಲ ಆರ್‌ಎಸ್‌ಎಸ್ ನವರಿದ್ದು ಅವರೆಲ್ಲಾ ಪಕ್ಷ ಬಿಟ್ಟು ಹೋಗಬೇಕು. ಅವರು ಸಂತೋಷಪಡಲಿ. ನಮಗೆ ಅವರು ಬೇಡ. ನಮಗೆ ಅವರ ಅಗತ್ಯವಿಲ್ಲ. ನಮಗೆ ನಿರ್ಭೀತ ಜನರು ಬೇಕು. ಇದು ನಮ್ಮ ಸಿದ್ಧಾಂತ. ಇದು ನಿಮಗೆ ನನ್ನ ಮೂಲ ಸಂದೇಶ ಎಂದು ಅವರು ಹೇಳಿದರು.

ಸಿಂಧಿಯಾ ಉದಾಹರಣೆಯನ್ನು ಉಲ್ಲೇಖಿಸಿ ಅವರು ಪಕ್ಷವನ್ನು ಉಳಿಸಬೇಕಿತ್ತು. ಆದರೆ ಹೆದರಿಕೊಂಡು ಪಕ್ಷ ಬಿಟ್ಟು ಆರ್ ಎಸ್ ಎಸ್ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಇತ್ತೀಚಿನ ದಿನಗಳಲ್ಲಿ ಬಿಜೆಪಿಗೆ ಸೇರಲು ಪಕ್ಷವನ್ನು ತೊರೆದಿದ್ದಾರೆ. ಅವರಲ್ಲಿ ಸಿಂಧಿಯಾ ಮತ್ತು ಜಿತಿನ್ ಪ್ರಸಾದ ಸೇರಿದ್ದಾರೆ. ಇನ್ನು ನಟಿ ಖುಷ್ಬೂ ಸುಂದರ್ ಅವರಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರಾದ ನಾರಾಯಣ್ ರಾಣೆ ಮತ್ತು ರಾಧಾಕೃಷ್ಣ ವಿಖ್ ಪಾಟೀಲ್ ಕೂಡ 2019ರಲ್ಲಿ ಪಕ್ಷವನ್ನು ತ್ಯಜಿಸಿದ್ದರು.

ಜೂಮ್ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಹುಲ್ ಗಾಂಧಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಸುಮಾರು 3,500 ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *