ದೇಶದ ಮೊದಲ ಕ್ಯಾನೊಪಿ ವಾಕ್ ರಾಜ್ಯದ ಪುಟ್ಟ ತಾಲೂಕು ಜೊಯಡಾದಲ್ಲಿ ಸದ್ದಿಲ್ಲದೆ ಆರಂಭ

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ ‘ಕ್ಯಾನೊಪಿ ವಾಕ್’ ಆರಂಭ

ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ‘ಕ್ಯಾನೊಪಿ ವಾಕ್’ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ.

File photo

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ಕ್ಯಾನೊಪಿ ವಾಕ್ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ.

ಕ್ಯಾಸಲ್ ರಾಕ್ ವನ್ಯಜೀವಿ ವಿಭಾಗವು ಕುವೇಶಿ ಪ್ರದೇಶದ ದುಧ್‌ಸಾಗರ್ ಜಲಪಾತಗಳ ಬಳಿ ಚಾರಣವನ್ನು ಪುನರಾರಂಭಿಸಿದೆ.

ಕಾಳಿ ಹುಲಿ ಅರಣ್ಯಧಾಮದ ವ್ಯಾಪ್ತಿಯಲ್ಲಿ ಬರುವ ಕ್ಯಾನೊಪಿ ವಾಕ್ ಇದಾಗಿದ್ದು, ಇದು ಕರ್ನಾಟಕದ ಹಾಗೂ ದೇಶದ ಮೊಟ್ಟ ಮೊದಲ ಕ್ಯಾನೊಪಿ ವಾಕ್ ಪ್ರವಾಸಿ ತಾಣವಾಗಿದೆ. 

ದಾಂಡೇಲಿ ವೈಲ್ಡ್ ಲೈಫ್ ಮತ್ತು ಕ್ಯಾಸರಲ್ ರಾಕ್ ವೈಲ್ಡ್ ಲೈಫ್ ವ್ಯಾಪ್ತಿಯಲ್ಲಿ ಜಂಗಲ್ ಲಾಡ್ಸ್ಜ್ ಅಂಡ್ ರೆಸಾರ್ಟನವರು ನಡೆಸುತ್ತಿರುವ ಅರಣ್ಯಧಾಮದ ಸನಿಹ ಕುವೇಶಿ ಗ್ರಾಮವಿದೆ. ಈ ಗ್ರಾಮದ ಬಳಿಯ ದಟ್ಟ ಅರಣ್ಯ ಹಾಗೂ ಎತ್ತರದ ಮರಗಳ ಮೇಲೆ 30 ಅಡಿ ಎತ್ತರದ ಮರಗಳಿರುವ ಪ್ರದೇಶದಲ್ಲಿ ಕ್ಯಾನೊಪಿ ವಾಕ್‍ ನಿರ್ಮಾಣ ಮಾಡಲಾಗಿದೆ. ಒಂದೇ ಎತ್ತರದ ಮರಗಳನ್ನು ಆಯ್ಕೆ ಮಾಡಿಕೊಂಡು ಅವುಗಳ ಮೇಲೆಯೇ 240 ಮೀಟರ್ ಉದ್ದದ ಕ್ಯಾನೊಪಿ ರೂಪಿಸಲಾಗಿದೆ. 

4 ವರ್ಷಗಳ ಹಿಂದೆಯೇ ಈ ಕ್ಯಾನೊಪಿ ವಾಕ್’ನ್ನು ಉದ್ಘಾಟನೆ ಮಾಡಲಾಗಿತ್ತು. ಆದರೆ, ಪರಿಸರವಾದಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅದಲ್ಲದೆ, ಕ್ಯಾನೊಪಿ ವಾಕ್‌’ಗೆ ತೆರಳಲು ರಸ್ತೆಗಳು ಇಲ್ಲದಿರುವುದೂ ಇದಕ್ಕೆ ಕಾರಣವಾಗಿತ್ತು. ಇಲ್ಲಿನ ಗ್ರಾಮಸ್ಥರು ರಸ್ತೆ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

ಹಲವು ವರ್ಷಗಳ ಹಿಂದೆಯೇ ಕ್ಯಾನೊಪಿ ವಾಕ್ ನಿರ್ಮಾಣ ಮಾಡಿದ್ದರೂ, ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ. ಈ ಬಾರಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿದೆ. ಸ್ಥಳದಲ್ಲಿ ವಾಹನ ವ್ಯವಸ್ತೆಗಳನ್ನು ಮಾಡಲಾಗಿದ್ದು, ಈ ವಾಹನಗಳು ಕುವೇಶಿ ಅರಣ್ಯ ಪ್ರದೇಶದವರೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತವೆ. ನಂತರ ಅಲ್ಲಿಂದ ಕಾಲ್ನಡಿಗೆ ಆರಂಭವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. 

ಕ್ಯಾನೊಪಿ ವಾಕ್ ಜೊತೆಗೆ ಗಣೇಶಗುಡಿಯಲ್ಲಿ ವಾಟರ್ ಸ್ಪೋರ್ಟ್ಸ್ ಕೂಡ ಪುನರಾರಂಭಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *