ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

Washington Sundar

ಚೆನ್ನೈ: ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಬೆರಳಿನ ಗಾಯದಿಂದಾಗಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಾಷಿಂಗ್ಟನ್ ಸುಂದರ್ ಕೂಡ  ಹೊರಗುಳಿದಿದ್ದಾರೆ. ಇನ್ನು ವೇಗಿ ಅವೇಶ್ ಖಾನ್ ಕೂಡ ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದು, ಭಾರತದ ಪ್ರಸ್ತುತ ತಂಡದ ಸಾಮರ್ಥ್ಯವು 24ರಿಂದ 21ಕ್ಕೆ ಇಳಿದಿದೆ.

ಕೌಂಟಿ ಸೆಲೆಕ್ಟ್ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದ ಮೂರನೇ ದಿನ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದು, ಅವೇಶ್ ಜೊತೆಗೆ ವಾರಾಂತ್ಯದಲ್ಲಿ ಸ್ವದೇಶಕ್ಕೆ ಮರಳುತ್ತಾರೆ ಎಂದು ತಿಳಿದುಬಂದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ವಾಷಿಂಗ್ಟನ್ ಗೆ ಬೆರಳಿನ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಲಾಯಿತು. ಎರಡು ವಾರಗಳ ವಿರಾಮದ ನಂತರ ತಂಡಕ್ಕೆ ಸೇರ್ಪಡೆಯಾದ ನಂತರ, ತರಬೇತಿ ಅವಧಿಯಲ್ಲಿ ಅವರು ಸ್ವಲ್ಪ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರಿಗೆ ಒಂದು ತಿಂಗಳ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನೂ 21 ಆಟಗಾರರು ಲಭ್ಯವಿದ್ದರೂ, ಬ್ಯಾಟಿಂಗ್ ಘಟಕವು ವೀಕ್ ಆಗಿದೆ. ವಾಸ್ತವವಾಗಿ, ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯವನ್ನು ಆಡುತ್ತಿಲ್ಲ. ಕಾರಣ ಅವರಿಗೆ ಬೆನ್ನು ನೋವು. ಇನ್ನು ಉಪನಾಯಕ ಅಜಿಂಕ್ಯ ರಹಾನೆ ಕೂಡ ಮಂಡಿರಜ್ಜು ಗಾಯದಿಂದಾಗಿ ಕಣಕ್ಕಿಳಿಯಲಿಲ್ಲ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *