ಮಳೆಗೆ ಉತ್ತರ ಕನ್ನಡ ತತ್ತರ… ಮರಬಿದ್ದು ಮನೆಗೆ ಹಾನಿ, ರಸ್ತೆ ಬಂದ್, ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ

ಲಕ್ಷಾಂತರ ಹಾನಿ-

ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು ರಸ್ತೆ ತೆರವು ಮಾಡಿ ವಿದ್ಯುತ್ ವ್ಯತ್ಯಯ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರಯತ್ನಿ ಸುತಿದ್ದಾರೆ.

  • ಹಕ್ಕಲಮನೆ (ಕವಲಕೊಪ್ಪ ಗ್ರಾಮ) ದಿವಾಕರ ವೆಂಕಟ್ರಮಣ ಹೆಗಡೆಯವರ ಅಡಿಕೆ ತೋಟದ ಮೇಲೆ ಬಿದ್ದ ತಾರಿ ಮರದಿಂದಾಗಿ 12 ಅಡಿಕೆ ಮರಗಳಿಗೆ ಹಾನಿ (15 ಸಾವಿರ)
  • ಸಿದ್ಧಾಪುರ, ಹೆಗ್ಗರಣಿ ವಾಜಗಾರ್ ನ ಹನುಮ ತಿಮ್ಮ ಮುಕ್ರಿಯವರ ವಾಸದ ಮನೆಮೇಲೆ ಉಪ್ಪಾಗೆ ಮರಬಿದ್ದು ಮನೆ ನೆಲಸಮ ಅಂದಾಜು ಹಾನಿ 1ಲಕ್ಷ ಮೂವತ್ತು ಸಾವಿರ.
  • ಸಿದ್ಧಾಪುರ ಹಸರಗೋಡು ಗ್ರಾಮದ ಅಡ್ಡಸರ ನಾಗಮ್ಮ ಮುಕ್ರಿ ಮನೆ ಮೇಲೆ ಮರಬಿದ್ದು 25 ಸಾವಿರ ಹಾನಿ.
  • ಸಿದ್ಧಾಪುರ ಅಪ್ಪಿನಬೈಲ್ ಬಳಿ ಮರ, ಬಿಳಗಿ ಮಾರಿಕಾಂಬಾ ದೇವಸ್ಥಾನದ ಎದುರು ಬಿದಿರು ಹಿಂಡು ಬಿದ್ದು ಹಾನಿ

ಉತ್ತರ ಕನ್ನಡ ಜಿಲ್ಲೆ ಈಗ ಮಳೆಯ ರುದ್ರನರ್ತನಕ್ಕೆ ಸಿಕ್ಕಿದೆ. ಈ ವರ್ಷದ ಈವರೆಗಿನ ಮಳೆಪ್ರಮಾಣ 2 ಸಾವಿರ ಮಿ.ಮೀ ಸಮೀಪಿಸಿದೆ. ಇದು ಜುಲೈ ತಿಂಗಳ ಜಿಲ್ಲೆಯ ಸರಾಸರಿ ಮಳೆಯ ಪ್ರಮಾಣಕ್ಕಿಂತ ಹೆಚ್ಚಾಗಿದೆ. ಈ ವಾರದ ವರ್ಷಧಾರೆಗೆ ಸಿಲುಕಿದ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕಾಳಿ, ಶರಾವತಿ,ಗಂಗಾವಳಿ, ಅಘನಾಶಿನಿ ನದಿಗಳು ಹಾಗೂ ಉಪನದಿಗಳೆಲ್ಲಾ ಅಪಾಯದ ಹಂತ ಮೀರಿ ಹರಿಯುತ್ತಿವೆ.


ಜಿಲ್ಲೆಯ ಕರಾವಳಿಯಲ್ಲಿ ಪ್ರವಾಹದ ಅನಾಹುತ ಹೆಚ್ಚಿದೆ.ಹಾಗೆಂದು ಮಲೆನಾಡಿನಲ್ಲಿ ಅಪಾಯ ಇಲ್ಲ ಎನ್ನುವಂತಿಲ್ಲ. ಘಟ್ಟದ ಮೇಲಿನ ಯಲ್ಲಾಪುರ,ಸಿದ್ಧಾಪುರ, ಶಿರಸಿಗಳಲ್ಲಿ ಮಳೆಯ ನೀರು ವಾಸದ ಮನೆಗಳಿಗೂ ನುಗ್ಗಿದೆ. , ದಿನವೀಡಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯಲ್ಲಿ ನಿರಾಶ್ರಿತರ ಕೇಂದ್ರ ತೆರೆಯಲು ಸಿದ್ಧತೆ ನಡೆಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ಶಿರಸಿ-ಸಿದ್ಧಾಪುರದ ಪ್ರವಾಹ ಪೀಡಿತ ಪ್ರದೇಶಗಳಾದ ಸಿದ್ಧಾಪುರದ ಹೆಮ್ಮನಬೈಲು, ಕಲ್ಯಾಣಪುರಗಳಲ್ಲಿ ಹಾಗೂ ಶಿರಸಿ ಮೊಗವಳ್ಳಿಯಲ್ಲಿ ನೆಗಸಿನ ಮುನ್ನೆಚ್ಚರಿಕೆ ನೀಡಿದೆ.


ಇದೇ ವಾರ ಉತ್ತರ ಕನ್ನಡ ಜಿಲ್ಲೆಯ ರಭಸದ ಮಳೆಗೆ ನೆಲಕ್ಕುರುಳಿದ ಮರಗಳು ಬೆಳೆ, ರಸ್ತೆ, ಮನೆಗಳಿಗೆ ಹಾನಿಮಾಡಿವೆ. ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು ರಸ್ತೆ ತೆರವು ಮಾಡಿ ವಿದ್ಯುತ್ ವ್ಯತ್ಯಯ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರಯತ್ನಿ ಸುತಿದ್ದಾರೆ. ಪ್ರವಾಹದಿಂದ ತೊಂದರೆಗೆ ಒಳಗಾಗಬಹುದಾದ ನದಿಪಾತ್ರದ ಜನರಿಗೆ ಸುರಕ್ಷಿತವಾಗಿರಲು,ಪೂರ್ವಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತ ಸೂಚಿಸಿದೆ.

ಈ ವಾರದ  ಬುಧವಾರ-ಗುರುವಾರದ ಮಳೆ ಪ್ರಮಾಣ   ಇನ್ನೆರಡು ದಿನ ಮುಂದುವರಿದರೂ ನೂರಾರು ಕುಟುಂಬಗಳು ನಿರಾಶ್ರಿತರಾಗುವ ಅಪಾಯ ಎದುರಾಗಿದೆ. ಜಿಲ್ಲೆಗೆ ಬರುವ ಪ್ರವಾಸಿಗರು ಕೂಡಾ ಈ ತಿಂಗಳಲ್ಲಿ ಜಿಲ್ಲೆಗೆ ಬಂದರೆ ಮಳೆ-ಪ್ರವಾಹದ ತೊಂದರೆಗೆ ಒಳಗಾಗುವುದು ನಿಶ್ಚಿತ ಎನ್ನಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *