ವಿಪರೀತ ಮಳೆ, ಅಪಾರ ಹಾನಿ, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

  • ಯಲ್ಲಾಪುರ ದಕ್ಷಿಣ ಭಾಗದಲ್ಲಿ ಧರೆ ಕುಸಿತ, ರಸ್ತೆ, ಮನೆಗಳಿಗೆ ಹಾನಿ
  • ಶಿರಸಿ-ಸಿದ್ಧಾಪುರ ರಸ್ತೆ ಬಂದ್, ಶಿರಸಿ-ಸಿದ್ಧಾಪುರದ ನಗರ ಪ್ರದೇಶವೂ ಜಲಾವೃತ್ತ.
  • * ಸಿದ್ಧಾಪುರ ಕಲ್ಯಾಣಪುರ-ಗೋಳಗೋಡು ರಸ್ತೆ ಸಂಪರ್ಕ ಕಡಿತ, ಮುಳುಗಿದ ಭತ್ತದ ಬೆಳೆ
  • ಹೆಮ್ಮನಬೈಲ್, ಕಲ್ಯಾಣಪುರಗಳಲ್ಲಿ ಕಾಳಜಿಕೇಂದ್ರ ಪ್ರಾರಂಭ
  • * ಅಂಕೋಲಾದಲ್ಲಿ ಪ್ರವಾಹ ಕಾರ್ಯಾಚರಣೆಯಲ್ಲಿದ್ದ ಇಬ್ಬರು ನೀರು ಪಾಲು
  • * ಕೆರೆ ಒಡೆಯುವ ಅಪಾಯ

ಮಲೆನಾಡು ಕರಾವಳಿಯಲ್ಲಿ ವರ್ಷಧಾರೆ ತಗ್ಗಿಲ್ಲ, ಕಳೆದ 24 ಗಂಟೆಗಳಲ್ಲಿ  ಸುರಿದ 200 ಮಿ.ಮೀ ಮಳೆ  ಅಪಾರ ಹಾನಿ ಮಾಡಿದೆ. ಕರಾವಳಿ ಪ್ರದೇಶದಲ್ಲಿ ತುಂಬಿ ಹರಿಯುತ್ತಿರುವ ನದಿಗಳು, ಬಿದ್ದ ಮರಗಳಿಂದ ಪ್ರಮುಖ ರಸ್ತೆಗಳ ಸಂಪರ್ಕ ಸ್ಥಗಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಹಾಮಳೆಗೆ ನಗರ, ಗ್ರಾಮೀಣ ಪ್ರದೇಶಗಳೆನ್ನದೆ ಎಲ್ಲಾ ಕಡೆ ಜಲಾವೃತ್ತವಾದ ಪರಿಸ್ಥಿತಿಯಿಂದ ಜನರು ಮನೆಯಿಂದ ಹೊರಬರದ ಸ್ಥಿತಿ ಉಂಟಾಗಿದೆ.


ಶಿರಸಿ-ಸಿದ್ಧಾಪುರ ರಸ್ತೆ ಸೇರಿದಂತೆ ಪ್ರಮುಖ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಮಳೆ, ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಜಿಲ್ಲಾಡಳಿತ ಹೆಣಗಾಡುತ್ತಿದೆ. ಶಿರಸಿ-ಸಿದ್ಧಾಪುರ ಸೇರಿದಂತೆ ಜಿಲ್ಲೆಯ ನಗರಪ್ರದೇಶಗಳ ನೂರಾರು ಮನೆಗಳಿಗೆ ಮಳೆಯ ನೀರು ತುಂಬಿ ಕೆಲವೆಡೆ ಜನರನ್ನು ಸ್ಥಳಾಂತರಿಸಲಾಗಿದೆ. ಶಿರಸಿ ಮುಗವಳ್ಳಿ, ಸಿದ್ಧಾಪುರದ ಕಲ್ಯಾಣಪುರ, ಹೆಮ್ಮನಬೈಲು ಗಳಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.


ಗುರುವಾರ-ಶುಕ್ರವಾರದ ಮಹಾಮಳೆಯಿಂದ ತೊಂದರೆಗೆ ಒಳಗಾದ ಜನರನ್ನು ಸ್ಥಳಾಂತರಿಸಲಾಗಿದ್ದು ಜಾನುವಾರುಗಳನ್ನು ಸಂಬಂಧಿಗಳ ಮನೆಗೆ ಸಾಗಿಸಲಾಗಿದೆ. ಜಿಲ್ಲೆಯ ಘಟ್ಟದ ಮೇಲಿನ ಶಿರಸಿ,ಸಿದ್ಧಾಪುರ, ಯಲ್ಲಾಪುರಗಳಲ್ಲಿ ಸಾವಿರಾರು ಎಕರೆ ಭತ್ತದ ಗದ್ದೆಗಳು, ಕೆಲವೆಡೆ ತೋಟ ಕೂಡಾ ನೀರಿನಲ್ಲಿ ಮುಳುಗಿದೆ. ಸಿದ್ಧಾಪುರದ ಕೆರೆಕಟ್ಟೆಗಳು ತುಂಬಿ ಒಡೆಯುವ ಅಪಾಯವಿದ್ದು ಕಾನಗೋಡಿನಲ್ಲಿ ನೂರಾರು ಎಕರೆ ಬೆಳೆ ತೊಳೆದುಹೋಗಿದೆ. ಪ್ರಮುಖ ರಸ್ತೆಗಳು ಧರೆಕುಸಿತದಿಂದ ಸಂಪರ್ಕ ಕಡಿದುಕೊಂಡಿದ್ದು ಜಿಲ್ಲಾಡಳಿತ  ಇವುಗಳನ್ನು ತೆರವು ಮಾಡಲು ಸಮರೋಪಾದಿಯ ಕಾರ್ಯಾಚರಣೆ ನಡೆಸಿದೆ. ಹಲವೆಡೆ  ಮರಬಿದ್ದು ವಿದ್ಯುತ್ ಕಂಬಗಳು  ನೆಲಕ್ಕುರುಳಿರುವುದರಿಂದ ವಿದ್ಯುತ್ ಸಂಪರ್ಕಕ್ಕೆ ವ್ಯತ್ಯಯ ಉಂಟಾಗಿದೆ.ಜಿಲ್ಲೆಯ  ಅಂಕೋಲಾ ಶಿರೂರಿನಲ್ಲಿ ಪ್ರವಾಹ ಕಾರ್ಯಾಚರಣೆ ಮಾಡುತಿದ್ದ ಇಬ್ಬರು ವ್ಯಕ್ತಿಗಳು ನದಿಯಲ್ಲಿ ತೇಲಿಹೋಗಿದ್ದಾರೆ. ಕೆಲವೆಡೆ ರಸ್ತೆ ಕುಸಿದು, ಮನೆಗಳು ಹಾನಿಗೊಳಗಾಗಿವೆ. ಮಳೆ ಮಾಡಿರುವ ಹಾನಿ, ಅನಾಹುತದ ವರದಿಗಳು ಬರುತಿದ್ದು ಈ ವರ್ಷದ ಮಳೆ ಉತ್ತರ ಕನ್ನಡವನ್ನು ಕಂಗಾಲುಮಾಡಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *